ನೇಮಕಾತಿ ಹೆಸರಿನಲ್ಲಿ ವಂಚನೆ: ಎಂಆರ್ಪಿಎಲ್ ಎಚ್ಚರಿಕೆ
Team Udayavani, May 5, 2023, 6:50 AM IST
ಮಂಗಳೂರು: ಎಂಆರ್ಪಿಎಲ್ (ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿ.)ನ ಉದ್ಯೋಗ ನೇಮಕಾತಿ ಹೆಸರಿನಲ್ಲಿ ಹಣ ಪಡೆದು ವಂಚಿಸಲಾಗುತ್ತಿರುವ ಬಗ್ಗೆ ಎಂಆರ್ಪಿಎಲ್ ಎಚ್ಚರಿಕೆ ನೀಡಿದೆ.
ಎಂಆರ್ಪಿಎಲ್ ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅಡಿಯಲ್ಲಿರುವ ಸಾರ್ವಜನಿಕ ವಲಯದ ಉದ್ಯಮವಾಗಿದ್ದು, ತೈಲ ನೈಸರ್ಗಿಕ ಅನಿಲ ನಿಗಮ ಲಿಮಿಟೆಡ್ (ಒಎನ್ಜಿಸಿ)ನ ಅಂಗಸಂಸ್ಥೆಯಾಗಿದೆ. ಇದರ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿದೆ. ನೇಮಕಾತಿಗೆ ನಿರ್ದಿಷ್ಟ ಅರ್ಜಿ ಶುಲ್ಕದ ಬದಲು ಬೇರೆ ಯಾವುದೇ ಹಣ ಪಡೆಯುವುದಿಲ್ಲ. ಆದರೆ ಕೆಲವು ಮಂದಿ ಎಂಆರ್ಪಿಎಲ್ನಲ್ಲಿ ಉದ್ಯೋಗ ಒದಗಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರು, ಉದ್ಯೋಗಾಕಾಂಕ್ಷಿಗಳು ಇಂತಹ ವಂಚನೆಗೆ ಒಳಗಾಗಬಾರದು.
ಒಎಂಪಿಎಲ್ (ಒಎನ್ಜಿಸಿ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್)ನ್ನು ಎಂಆರ್ಪಿಎಲ್ನೊಂದಿಗೆ ವಿಲೀನಗೊಳಿಸಿರುವುದರಿಂದ ಒಎಂಪಿಎಲ್ ಅಸ್ತಿತ್ವದಲ್ಲಿಲ್ಲ. ಆ ಹೆಸರಿನಲ್ಲಿ ಮಾಡುವ ಯಾವುದೇ ನೇಮಕಾತಿ ಕೂಡ ಮೋಸದಿಂದ ಕೂಡಿರುತ್ತದೆ. ಎಂಆರ್ಪಿಎಲ್ನ ಉದ್ಯೋಗಾವಕಾಶಗಳ ಬಗ್ಗೆ ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಲಾಗಿದೆ. ಎಂಆರ್ಪಿಎಲ್ ಪರವಾಗಿ ನೇಮಕಾತಿ ಮಾಡಲು, ನೇಮಕಾತಿ ಪ್ರಸ್ತಾವ ನೀಡಲು, ಹಣ ಸಂಗ್ರಹಿಸಲು ಯಾವುದೇ ವ್ಯಕ್ತಿ/ಸಂಸ್ಥೆಗೆ ಅಧಿಕಾರ ನೀಡಿಲ್ಲ. ಈ ರೀತಿ ಯಾರಾದರೂ ಆಫರ್ ಕೊಟ್ಟರೆ ಹಣ ನೀಡಿ ಮೋಸ ಹೋಗಬಾರದು ಎಂದು ಎಂಆರ್ಪಿಎಲ್ನ ಕಾರ್ಪೊರೆಟ್ ಕಮ್ಯುನಿಕೇಶನ್ನ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ನೊರೊನ್ಹಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ