ಫಲಪುಷ್ಪ ಪ್ರದರ್ಶನ: ಸಿದ್ದಗೊಳ್ಳುತ್ತಿದೆ ಕದ್ರಿ ಪಾರ್ಕ್‌

ಸುಮಾರು 30ಕ್ಕೂ ಅಧಿಕ ಬಗೆಯ ವಿವಿಧ ತರಕಾರಿಗಳನ್ನು ಬೆಳೆಸಲಾಗಿದೆ.

Team Udayavani, Jan 6, 2023, 6:35 PM IST

ಫಲಪುಷ್ಪ ಪ್ರದರ್ಶನ: ಸಿದ್ದಗೊಳ್ಳುತ್ತಿದೆ ಕದ್ರಿ ಪಾರ್ಕ್‌

ಮಹಾನಗರ: ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ನಡೆಯುತ್ತಿದೆ. ಎರಡು ವರ್ಷಗಳ ಕೋವಿಡ್‌ ವಿರಾಮದ ಬಳಿಕ ಪ್ರದರ್ಶನ ಆಯೋಜನೆಗೊಳ್ಳುತ್ತಿರುವುದರಿಂದ ಸಾರ್ವಜನಿಕರೂ ಹೆಚ್ಚಿನ ಉತ್ಸಾಹದಿಂದ ಭಾಗವಹಿಸುವ ನಿರೀಕ್ಷೆಯಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ತೋಟಗಾರಿಕೆ ಇಲಾಖೆ, ಕದ್ರಿ ಪಾರ್ಕ್‌ ಅಭಿವೃದ್ಧಿ ಸಮಿತಿಯ ಒಟ್ಟು ಸೇರುವಿಕೆಯಲ್ಲಿ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಗಣರಾಜ್ಯೋತ್ಸವ ದಿನದಂದು ಉದ್ಘಾಟನೆಗೊಂಡು ಮೂರು ದಿನಗಳ ಕಾಲ ನಡೆಯುತ್ತಿದ್ದ ಕಾರ್ಯಕ್ರಮವನ್ನು ಈ ಬಾರಿ ನಾಲ್ಕು ದಿನಕ್ಕೆ ವಿಸ್ತರಿಸಲು ಉದ್ದೇಶಿಸಲಾಗಿದೆ.ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಕದ್ರಿಪಾರ್ಕ್‌ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪೂರಕ ಕೆಲಸಗಳು ಆರಂಭ ಕದ್ರಿಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೊಳ್ಳುವ ಸ್ಥಳವನ್ನು ಸ್ವತ್ಛ ಮಾಡುವ ಕೆಲಸಗಳು ನಡೆಯುತ್ತಿದೆ. ಹುಲ್ಲು ತೆರವು ಮಾಡುವುದು, ಬಣ್ಣ ಬಳಿಯುವ ಕೆಲಸಗಳು ಈಗಾಗಲೇ ಆರಂಭವಾಗಿದೆ. ಪ್ರದರ್ಶನದ ಭಾಗವಾಗಿರುವ ತರಕಾರಿ ಗಿಡಗಳನ್ನು ಬೆಳೆಸುವ ಕೆಲಸ ಕಳೆದ ಅಕ್ಟೋಬರ್‌ ತಿಂಗಳಲ್ಲೇ ಆರಂಭವಾಗಿದ್ದು, ಬಹುತೇಕ ಗಿಡಗಳಲ್ಲಿ ಹೂವು ಅರಳಿ ಫಲಬಿಟ್ಟಿವೆ. ಬೆಂಡೆ, ಸೌತೆ, ಚೀನಿಕಾಯಿ, ಬಸಳೆ, ತೊಂಡೆ, ಹರಿವೆ, ಅಲಸಂಡೆ ಮೊದಲಾದ ಸುಮಾರು 30ಕ್ಕೂ ಅಧಿಕ ಬಗೆಯ ವಿವಿಧ ತರಕಾರಿಗಳನ್ನು ಬೆಳೆಸಲಾಗಿದೆ.

ಅಲಂಕಾರಿಕ ಗಿಡಗಳು
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಅಲಂಕಾರಿಕ ಹೂವಿನ ಗಿಡಗಳನ್ನು ತರಿಸಿಕೊಳ್ಳಲಾಗಿದ್ದು, ಅವುಗಳನ್ನು ಹೂ ಕುಂಡಗಳಲ್ಲಿ ನೆಡುವ ಕೆಲಸಗಳನ್ನು ಹೂದೋಟದ ಕೆಲಸದವರು ಮಾಡುತ್ತಿದ್ದಾರೆ. ಸಾವಿರಕ್ಕೂ ಅಧಿಕ ಗಿಡಗಳನ್ನು ತರಿಸಿಕೊಳ್ಳಲಾಗಿದ್ದು, ಫಲಪುಷ್ಪ ಪ್ರದರ್ಶನದ ವೇಳೆ ಇದನ್ನು ಅಲಂಕಾರಕ್ಕಾಗಿ ಇಡಲಾಗುತ್ತದೆ. ಗೊಂಡೆ, ಮೆರಿಗೋಲ್ಡ್‌, ಜೆರೇನಿಯಂ, ಡೇಲ್ಯ, ಜೀನ್ಯ, ಫಿಲೋಸಿಯಾ, ಕೋಕ್ಸ್‌ ಕೋಂಬ್‌, ಕಾಸ್ಮೋಸ್‌, ಹಾಲಿಯಾಕ್‌ ಮೊದಲಾದ ಜಾತಿಯ ಹೂವಿನ ಗಿಡಗಳು ಪ್ರದರ್ಶನದಲ್ಲಿ ಆಕರ್ಷಿಸಲಿದೆ.

1 ರೂ.ಗೆ ತರಕಾರಿ ಗಿಡ
ಫಲಪುಷ್ಪ ಪ್ರದರ್ಶನದಲ್ಲಿ ಈ ಹಿಂದಿನ ವರ್ಷಗಳಲ್ಲಿ 1 ರೂ.ಗೆ ತರಕಾರಿ ಗಿಡ ನೀಡುವ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಾರಿಯೂ ಇದನ್ನು ಮುಂದುವರಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಬೆಳ್ತಂಗಡಿಯ ಮದ್ದಡ್ಕ ತೋಟಗಾರಿಕೆ ಕ್ಷೇತ್ರದಲ್ಲಿ ವಿವಿಧ ತರಕಾರಿ ಸಸಿಗಳನ್ನು ಬೆಳೆಸಲು ಯೋಜನೆ ಹಾಕಿಕೊಳ್ಳಲಾಗಿದೆ.

ಅಗತ್ಯ ಸಿದ್ಧತೆ
ಕದ್ರಿ ಪಾರ್ಕ್‌ನಲ್ಲಿ ಈ ಬಾರಿ ಫಲಪುಷ್ಪ ಪ್ರದರ್ಶನ ಆಯೋಜಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಲಾಗಿದೆ. ಜಿಲ್ಲಾಧಿಕಾರಿಯವರು ಅಧ್ಯಕ್ಷರಾಗಿರುವ ಕದ್ರಿಪಾರ್ಕ್‌ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಪ್ರಕಟವಾಗಲಿದೆ.
– ಪ್ರವೀಣ್‌ ಕೆ.,
ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.