ಕರಾವಳಿಗೆ ಜಿ20 ಸಭೆ ಆತಿಥ್ಯದ ಕನಸು!

ಕರಾವಳಿಗೆ ಅವಕಾಶ ಲಭಿಸಿದರೆ ಜಾಗತಿಕ ಮನ್ನಣೆಯ ಲೆಕ್ಕಾಚಾರ

Team Udayavani, Mar 29, 2023, 7:10 AM IST

ಕರಾವಳಿಗೆ ಜಿ20 ಸಭೆ ಆತಿಥ್ಯದ ಕನಸು!

ಮಂಗಳೂರು: ಮಹತ್ವದ ಜಿ20 ಕೂಟದ ಅಧ್ಯಕ್ಷ ಸ್ಥಾನ ಈ ಬಾರಿ ಭಾರತಕ್ಕೆ ದೊರೆತಿದೆ. ಇದರ ಅಂಗವಾಗಿ ವಿವಿಧ ಹಂತದ ಪ್ರತ್ಯೇಕ ಸಭೆಗಳು ದೇಶದ ನಾನಾ ಕಡೆಗಳಲ್ಲಿ ಆಯೋಜನೆಗೊಳ್ಳುತ್ತಿವೆ. ಈ ಪೈಕಿ ಒಂದಾದರೂ ಸಭೆಯ ಆತಿಥ್ಯ ವಹಿಸುವ ಅವಕಾಶ ದಕ್ಷಿಣ ಕನ್ನಡ ಹಾಗೂ ಉಡುಪಿಯನ್ನು ಒಳಗೊಂಡ ಕರಾವಳಿಗೆ ದೊರೆಯಲಿ ಎಂಬ ಒತ್ತಾಯ ಕೇಳಿಬಂದಿದೆ.

2022ರ ಡಿ. 1ರಿಂದ 2023ರ ನ. 30ರ ವರೆಗೆ ಒಂದು ವರ್ಷ ಕಾಲ ಜಿ20ನ ಕಾರ್ಯಕಲಾಪಗಳು ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿವೆ. ಇದರ ಅಂಗವಾಗಿ ದೇಶದ 55 ನಗರಗಳಲ್ಲಿ 200ಕ್ಕೂ ಹೆಚ್ಚು ಮಹತ್ವದ ಸಭೆಗಳು ಜರಗಲಿವೆ. ಸಭೆಯ ಆತಿಥ್ಯ ಕರಾವಳಿಗೆ ದೊರೆತರೆ ಜಾಗತಿಕವಾಗಿ ಗುರುತಿಸಿಕೊಳ್ಳುವಲ್ಲಿ ಸಹಕಾರಿಯಾಗಬಲ್ಲುದು ಎಂಬುದು ತಜ್ಞರ ಲೆಕ್ಕಾಚಾರ. ಕೆಸಿಸಿಐ ಕೂಡ ಕೇಂದ್ರ ವಿದೇಶಾಂಗ ಸಚಿವರಿಗೆ ಪತ್ರ ಬರೆದು ಅವಕಾಶ ಒದಗಿಸುವಂತೆ ಕೋರಿದೆ.

ಬೆಂಗಳೂರಿನಲ್ಲೇ 11 ಸಭೆ!
ಹೊಸದಿಲ್ಲಿಯ ಅನಂತರ ಕರ್ನಾಟಕವು ಅತೀ ಹೆಚ್ಚು, ಅಂದರೆ 14 ಸಭೆಗಳ ಆತಿಥ್ಯ ವಹಿಸಲಿದೆ. ಈ ಪೈಕಿ ಬೆಂಗಳೂರಿನಲ್ಲಿ 11, ಹಂಪಿಯಲ್ಲಿ ಎರಡು ಹಾಗೂ ಮೈಸೂರಿನಲ್ಲಿ ಒಂದು ಸಭೆ ನಡೆಯಲಿದೆ. ಬೆಂಗಳೂರಿನಲ್ಲಿಯೇ 11 ಸಭೆ ನಡೆಸುವ ಬದಲು ಕರಾವಳಿಯಲ್ಲಿ ಒಂದೆರಡು ಸಭೆ ಮಾಡಿದರೆ ಕರಾವಳಿಯ ಅಭಿವೃದ್ಧಿಗೆ ಜಾಗತಿಕವಾಗಿ ಹೆಚ್ಚು ಬಲ ಬರುವ ನಿರೀಕ್ಷೆ ಇದೆ ಎನ್ನುತ್ತಾರೆ ತಜ್ಞರು.

ಲಾಭವೇನು?
ಜಿ20 ಸದಸ್ಯ ದೇಶಗಳ ನೂರಾರು ಗಣ್ಯರು ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ಆಗ ಕರಾವಳಿಯ ಸಾಂಸ್ಕೃತಿಕ ಹಾಗೂ ವಿವಿಧ ವಿಚಾರಗಳನ್ನು ಅವರಿಗೆ ಮನದಟ್ಟು ಮಾಡಬಹುದು. ಪ್ರವಾಸೋದ್ಯಮಕ್ಕೆ ಹೊಸ ಅವಕಾಶ ತೆರೆದುಕೊಳ್ಳಬಹುದು. ಕರಾವಳಿಯ ಶೈಕ್ಷಣಿಕ, ಆರ್ಥಿಕ, ಔದ್ಯಮಿಕ ಅಭಿವೃದ್ಧಿಗೆ ಇದು ಸಹಕಾರಿಯಾಗಬಹುದು ಎಂಬುದು ತಜ್ಞರ ಅಭಿಪ್ರಾಯ.
ದ.ಕ. ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. “ಉದಯವಾಣಿ’ ಜತೆಗೆ ಮಾತನಾಡಿ, “ಜಿ20 ಸಭೆ ನಿಗದಿಯನ್ನು ಕೇಂದ್ರ ಸರಕಾರ ಮಾಡುತ್ತದೆ. ಅದರಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ, ಜಿಲ್ಲಾಡಳಿತಕ್ಕೆ ಮಾಹಿತಿ ಬರುತ್ತದೆ. ದ.ಕ. ಜಿಲ್ಲೆಯಲ್ಲಿ ಸಭೆ ನಡೆಸಬೇಕು ಎಂಬ ಬಗ್ಗೆ ಒತ್ತಾಯ ಕೇಳಿಬಂದಿದೆ. ಆದರೆ ಇದರ ತೀರ್ಮಾನ ಕೇಂದ್ರದಿಂದಲೇ ಆಗಬೇಕು’ ಎಂದಿದ್ದಾರೆ.

ಜಿ20 ಸಭೆಗಳ ಪೈಕಿ ಒಂದನ್ನಾದರೂ ಮಂಗಳೂರಿನಲ್ಲಿ ಆಯೋಜಿಸಲು ಸರಕಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.
– ಎಂ. ಗಣೇಶ್‌ ಕಾಮತ್‌, ಅಧ್ಯಕ್ಷರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯನ್ನು ಒಳಗೊಂಡ ಕರಾವಳಿ ಭಾಗದಲ್ಲಿಯೂ ಜಿ20 ಸಭೆ ನಡೆಸಿದರೆ ಇಲ್ಲಿನ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರ ಆದ್ಯತೆ ನೀಡಬೇಕಿದೆ.
– ಅಂಡಾರು ದೇವಿಪ್ರಸಾದ್‌ ಶೆಟ್ಟಿ , ಅಧ್ಯಕ್ಷರು, ಉಡುಪಿ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀಸ್‌

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.