![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
“ಗಾಂಧಿ ಪಾರ್ಕ್ ತಡೆಗೋಡೆ ಕಾಮಗಾರಿ ಪೂರ್ಣ’
Team Udayavani, May 25, 2020, 9:38 AM IST
![“ಗಾಂಧಿ ಪಾರ್ಕ್ ತಡೆಗೋಡೆ ಕಾಮಗಾರಿ ಪೂರ್ಣ’](https://www.udayavani.com/wp-content/uploads/2020/05/Gandhi-park-620x403.jpg)
ಶಾಸಕ ವೇದವ್ಯಾಸ್ ಕಾಮತ್ ಅವರು ವೀಕ್ಷಿಸಿದರು.
ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡ ವಾರ್ಡಿನ ಗಾಂಧಿ ಪಾರ್ಕ್ ತಡೆಗೋಡೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ವೀಕ್ಷಣೆ ನಡೆಸಿದರು.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಮಣ್ಣಗುಡ್ಡ ಪರಿಸರದ ಮಹಾತ್ಮ ಗಾಂಧಿ ಉದ್ಯಾನವನದ ಆವರಣಗೋಡೆ ಅಭಿವೃದ್ಧಿ ಕಾಮಗಾರಿಗೆ 13.79 ಲಕ್ಷ ರೂ. ಅನುದಾನದಲ್ಲಿ ಪೂರ್ಣಗೊಂಡಿದೆ. ಈ ಪರಿಸರದ ಜನರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾರ್ಕ್ನಲ್ಲಿ ವಾಯುವಿಹಾರ, ವ್ಯಾಯಾಮ ಸೇರಿದಂತೆ ಮಕ್ಕಳನ್ನೂ ಕರೆತಂದು ಸಮಯ ಕಳೆಯುತ್ತಾರೆ. ಪಾರ್ಕಿನ ತಡೆಗೋಡೆ ದುರ್ಬಲವಾಗಿರುವ ಕಾರಣ ಅಪಾಯವಿತ್ತು. ಹಾಗಾಗಿ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಲಾಗಿತ್ತು, ಸದ್ಯ ಕಾಮಗಾರಿ ಪೂರ್ಣಗೊಂಡಿದೆ ಎಂದರು.
ಪಾರ್ಕಿಗೆ ಆಗಮಿಸುವ ಮಕ್ಕಳ ಹಿತದೃಷ್ಟಿಯಿಂದ ತಡೆಗೋಡೆ ನಿರ್ಮಾಣ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಈ ಹಿಂದೆ ಸೂಚನೆ ನೀಡಿದ್ದೆ. ಅದರಂತೆ ನೀಡಿದ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಪಾರ್ಕ್ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ್ ಆಚಾರ್, ಬಿಜೆಪಿ ಮುಖಂಡರಾದ ಮೋಹನ್ ಆಚಾರ್, ಮಹೇಶ್ ಕುಂದರ್, ಗೋಕುಲ್ ದಾಸ್ ಭಟ್, ವಂದನಾ ನಾಯಕ್, ಅಜಿತ್ ರಾವ್, ಡಾ| ಸಿ.ಜೆ. ಕಿಣಿ, ಎಸ್.ಆರ್. ಭಂಡಾರಿ, ವೆಂಕಟೇಶ್ ಆಚಾರ್, ಶ್ರೀರಾಮ್ ಪೈ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.