ಗಾಂಜಾ ಮಾರಾಟ: 8 ಮಂದಿ ವಿದ್ಯಾರ್ಥಿಗಳ ಬಂಧನ
Team Udayavani, Jan 14, 2019, 5:07 AM IST
ಮಂಗಳೂರು: ನಗರದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಲ್ಲಿ ಕೇರಳ ಮೂಲದ 8 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕೊನಾಮಿಕ್ ಆ್ಯಂಡ್ ನಾರ್ಕೋಟಿಕ್ ಕ್ರೆ„ಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಗಾಂಜಾ, ಎರಡು ದ್ವಿಚಕ್ರ ವಾಹನ ಸಹಿತ ಒಟ್ಟು 1,69,050 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೂಲತಃ ಕೇರಳದ ಕೊಲ್ಲಂ ಜಿಲ್ಲೆಯ ಕರಿಪ್ರ ಗ್ರಾಮದ, ಪ್ರಸ್ತುತ ಮಂಗಳೂರಿನ ಕದ್ರಿಯಲ್ಲಿರುವ ಅಕ್ಷಯ್ ಕೆ. ಪ್ರಸಾದ್ (22), ಕೇರಳದ ಕಣ್ಣೂರು ಮೂಲದ ನಿವಾಸಿಗಳಾದ ನಿಮಿಲ್ (21), ಅಮಿತ್ ಶ್ರೀವತ್ಸನ್ (21), ಅಶ್ವಿನ್(21), ಮಹಮ್ಮದ್ ಆಮಿರ್ (22), ಆಕಾಶ್ ಎಸ್. ನಾಯರ್ (23), ಅಕ್ಷಯ್ (22) ಹಾಗೂ ಮಂಗಳೂರು ನಗರದ ಹೊರವಲಯ ಕಣ್ಣೂರು ಬೋರುಗುಡ್ಡೆ ನಿವಾಸಿ ಜಾಫರ್ (22) ಬಂಧಿತರು. ನಗರದ ಮೋರ್ಗನ್ಸ್ಗೆàಟ್ ಬಳಿಯ ಮೈದಾನಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು.
ಬಂಧಿತರಿಂದ 12,000 ರೂ. ಮೌಲ್ಯದ 500 ಗ್ರಾಂ ಗಾಂಜಾ, 8 ಮೊಬೈಲ್ ಫೋನ್ಗಳು, 4,050 ರೂ. ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಸಿಬಿ ಇನ್ಸ್ಪೆಕ್ಟರ್ ಶಾಂತಾರಾಮ, ಎಕೊನಾಮಿಕ್ ಆ್ಯಂಡ್ ನಾರ್ಕೋಟಿಕ್ ಕ್ರೆ„ಂ ಠಾಣೆಯ ಇನ್ಸ್ಪೆಕ್ಟರ್ ರಾಮಕೃಷ್ಣ ಕೆ.ಕೆ. ಮತ್ತು ಸಿಸಿಬಿ ಪಿಎಸ್ಐ ಕಬ್ಟಾಳ್ರಾಜ್ ಎಚ್.ಡಿ. ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಎಂಜಿನಿಯರಿಂಗ್, ಫಿಸಿಯೋಥೆರಪಿ ವಿದ್ಯಾರ್ಥಿಗಳು
ಬಂಧಿತರು ಕೇರಳದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳ ಪೈಕಿ 7 ಮಂದಿ ಮಂಗಳೂರಿನ ಎರಡು ಎಂಜಿನಿಯರಿಂಗ್ ಕಾಲೇಜಿನ ಹಾಗೂ ಒಂದು ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾಗಿರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು