ಗ್ಯಾಸ್ ಟ್ಯಾಂಕರ್ ಪಲ್ಟಿ: ವಾಹನ ಸಂಚಾರ ಅಸ್ತವ್ಯಸ್ತ; ವಿದ್ಯಾರ್ಥಿಗಳು, ಉದ್ಯೋಗಿಗಳ ಪರದಾಟ
Team Udayavani, Feb 2, 2021, 10:31 AM IST
ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗ ಗ್ಯಾಸ್ ಟ್ಯಾಂಕರ್ ರಸ್ತೆಗೆ ಉರುಳಿದ ಪರಿಣಾಮ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಮಾಣಿಯಿಂದ ಕೊಡಾಜೆ ಮೂಲಕ ಮಂಗಳಪದವು ಎಂಬಲ್ಲಿಗೆ ವಾಹನಗಳು ಬಂದು ಕಲ್ಲಡ್ಕ ಕಾಂಞಂಗಾಡು ಅಂತಾರಾಜ್ಯ ಹೆದ್ದಾರಿಯಲ್ಲಿ ಕಲ್ಲಡ್ಕ ತಲುಪಿ, ಮಂಗಳೂರು ಕಡೆಗೆ ಸಂಚರಿಸುತ್ತಿದ್ದವು. ಮಾಣಿಯಿಂದ ಕಬಕ, ವಿಟ್ಲ, ಕಲ್ಲಡ್ಕ ಮಂಗಳೂರು, ಕೊಡಾಜೆ ವೀರಕಂಭ, ಕಲ್ಲಡ್ಕ ಮಂಗಳೂರು ಸಂಚಾರವೂ ಆಗುತ್ತಿತ್ತು. ಈ ಎಲ್ಲ ಒಳರಸ್ತೆಗಳು ಅಗಲಕಿರಿದಾಗಿದ್ದು ಆಗಾಗ ಬ್ಲಾಕ್ ಆಗುತ್ತಿವೆ.
ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಎಲ್ಲಾ ಟ್ಯಾಂಕರ್ ಗಳನ್ನು ಮತ್ತು ಇತರ ಸಾಮಗ್ರಿಗಳನ್ನು ಒಯ್ಯುವ ಲಾರಿಗಳನ್ನು ಕಲ್ಲಡ್ಕ, ಮೆಲ್ಕಾರ್ ಮತ್ತು ಬಿಸಿರೋಡ್ ಮೊದಲಾದೆಡೆ ನಿಲ್ಲಿಸಲಾಗಿದೆ.
ಇದನ್ನೂ ಓದಿ: ಸೂರಿಕುಮೇರು: ಗ್ಯಾಸ್ ಟ್ಯಾಂಕರ್ ಪಲ್ಟಿ; ಸುತ್ತಮುತ್ತಲಿನಲ್ಲಿ ಬೆಂಕಿ ಬಳಸದಂತೆ ಮನವಿ
ಪರಿಣಾಮವಾಗಿ ಕಲ್ಲಡ್ಕದಿಂದ ಮಂಗಳೂರು ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಲಾರಿಗಳೂ ಆಗಮಿಸದೇ ಇರುವುದರಿಂದ ಎಂದಿನಂತೆ ವಾಹನ ಜಂಜಾಟವಿರಲಿಲ್ಲ. ಬಸ್ಸು, ಖಾಸಗಿ ವಾಹನ ಮತ್ತು ದ್ವಿಚಕ್ರ, ರಿಕ್ಷಾ, ಕಾರುಗಳೇ ಸಂಚರಿಸುತ್ತಿದ್ದವು.
ಪುತ್ತೂರಿನಿಂದ ಮಂಗಳೂರಿಗೆ ಅಥವಾ ಮಂಗಳೂರಿನಿಂದ ಪುತ್ತೂರು, ಸುಳ್ಯ, ಉಪ್ಪಿನಂಗಡಿ ಕಡೆಗೆ ಖಾಸಗಿ, ಕೆಎಸ್ ಆರ್ ಟಿಸಿ ಬಸ್ ಸಂಚಾರವೂ ಇಲ್ಲದೇ ಇದ್ದುದರಿಂದ ನಿತ್ಯ ಸಂಚಾರಿಗಳು ತೊಂದರೆಗೊಳಗಾದರು. ವಿದ್ಯಾರ್ಥಿಗಳು, ಉದ್ಯೋಗಿಗಳು ರಸ್ತೆಯ ಬದಿಯಲ್ಲಿ ನಿಂತು ಪರದಾಡುತ್ತಿದ್ದರು.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಹುಬ್ಬಳ್ಳಿ,ಕೋಲಾರ ಸೇರಿದಂತೆ ರಾಜ್ಯದ ಹಲವೆಡೆ ACB ದಾಳಿ: ದಾಖಲೆಗಳ ಪರಿಶೀಲನೆ
ಇದನ್ನೂ ಓದಿ: ಶುಭಮಂಗಲ ಕಾರ್ಯಗಳಿಗೆ ಉತ್ತಮ ಸಮಯ; ಸರಕಾರಿ ನೌಕರರಿಗೆ ಲಾಭ: ಹೇಗಿದೆ ಇಂದಿನ ಗ್ರಹಬಲ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ