‘ಇವಿಎಂ ತೊಲಗಿಸಿ’ ಅಂಚೆಪತ್ರ ಆಂದೋಲನ
ದ.ಕ. ಮಹಿಳಾ ಕಾಂಗ್ರೆಸ್ನಿಂದ ಪ್ರತಿಭಟನೆ
Team Udayavani, Jun 27, 2019, 5:00 AM IST
ಮಹಾನಗರ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ‘ಇವಿಎಂ ತೊಲಗಿಸಿ’ ಆಂದೋಲನ ಬುಧವಾರ ನಡೆಯಿತು. ಬಲ್ಮಠ ರಸ್ತೆಯಲ್ಲಿರುವ ಅಂಚೆ ಕಚೇರಿಯ ಮೂಲಕ ಅಂಚೆ ಪತ್ರಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಿ ವಿನೂತನವಾಗಿ ಪ್ರತಿಭಟಿಸಲಾಯಿತು.
ದ.ಕ. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ ಮಾತನಾಡಿ, ಇ.ವಿ.ಎಂ. ಅವ್ಯವಸ್ಥೆಯ ಆಗರವಾಗಿದೆ. ಇ.ವಿ.ಎಂ. ಯಂತ್ರ ಹ್ಯಾಕ್ಗೊಳಿಸಿ ತಮಗೆ ಬೇಕಾದ ಅಭ್ಯರ್ಥಿಯ ಪರ ಫಲಿತಾಂಶ ಬರುತ್ತಿದೆ ಎಂಬ ಬಗ್ಗೆ ವ್ಯಾಪಕ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿವೆ. ಹೀಗಾಗಿ ಈ ಸಂಶಯವನ್ನು ಪೂರ್ಣವಾಗಿ ನಿವಾರಿಸಬೇಕಾಗಿದೆ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಇ.ವಿ.ಎಂ. ತೊಲಗಬೇಕು, ಮತಪತ್ರ ಮತ್ತೆ ಜಾರಿಗೆ ಬರಬೇಕು ಎಂದು ಹೇಳಿದರು.
ಪ್ರತಿಭಟನೆಯ ಅಂಗವಾಗಿ ರಾಜ್ಯಾದದ್ಯಂತ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಅಂಚೆ ಪತ್ರಗಳನ್ನು ರಾಷ್ಟ್ರಪತಿಯವರಿಗೆ ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದರು.
ಮೌನ ಪ್ರತಿಭಟನೆಯಲ್ಲಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಭಾರತಿ ಬಿ.ಎಂ., ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲಾ ಗಟ್ಟಿ, ಮಾಜಿ ಕಾರ್ಪೊರೇಟರ್ಗಳಾದ ಜೆಸಿಂತಾ ವಿಜಯ, ಅಪ್ಪಿ, ಸಬಿತಾ ಮಿಸ್ಕಿತ್, ಅಖೀಲಾ ಆಳ್ವ, ರತಿಕಲಾ ಮತ್ತು ಪ್ರಮೀಳಾ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ