ವಸತಿ ಶಾಲೆಗಳಲ್ಲಿ ʼಹುದ್ದೆʼ ಭರ್ತಿಗೆ ಸರಕಾರದ ನಿರಾಸಕ್ತಿ


Team Udayavani, Mar 2, 2024, 8:30 AM IST

4-teaching

ಮಂಗಳೂರು: ರಾಜ್ಯದ ವಸತಿ ಶಾಲೆಗಳು ತೀವ್ರವಾದ ಸಿಬಂದಿ ಕೊರತೆಯಿಂದ ಬಳಲುತ್ತಿದ್ದು, ವಿದ್ಯಾ ರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಪರಿಶಿಷ್ಟ ಜಾತಿ 503, ಪರಿಶಿಷ್ಟ ವರ್ಗದ 156 ಹಾಗೂ ಹಿಂದುಳಿದ ವರ್ಗದ 174 ಸೇರಿ ಒಟ್ಟು 833 ವಸತಿ ಶಾಲೆ/ಕಾಲೇಜುಗಳಿವೆ. ಅವುಗಳಿಗೆ 19,094 ಹುದ್ದೆ ಗಳು ನಿಯಮಾನುಸಾರ ಮಂಜೂರಾ ಗಿದ್ದರೆ ಈಗ ಭರ್ತಿ ಯಾಗಿರುವುದು ಕೇವಲ 6,525 ಮಾತ್ರ; ಅಂದರೆ ಬರೋಬ್ಬರಿ 12,569 ಹುದ್ದೆ ಖಾಲಿ. 8,909 ಬೋಧಕ ಹುದ್ದೆಯ ಪೈಕಿ 3,512 ಹುದ್ದೆ ಖಾಲಿ. ಬೋಧಕೇತರವೂ 1,088 ಹುದ್ದೆಗಳು ಭರ್ತಿಯಾಗಿಲ್ಲ. ಇನ್ನೂ ವಿಶೇಷವೆಂದರೆ “ಡಿ’ ಗ್ರೂಪ್‌ ನಲ್ಲಿ 7,973 ಹುದ್ದೆಗಳ ಪೈಕಿ ಕೇವಲ 4 ಹುದ್ದೆ ಮಾತ್ರ ಭರ್ತಿಯಾಗಿರುವುದು.

“ಅತಿಥಿಗಳೇ ಆಸರೆ

833 ಶಾಲೆಗಳಿಗೆ 482 ಕನ್ನಡ ಶಿಕ್ಷಕರು, 467 ಇಂಗ್ಲಿಷ್‌ ಶಿಕ್ಷಕರು, 300 ಹಿಂದಿ ಶಿಕ್ಷಕರು, 298 ಗಣಿತ ಶಿಕ್ಷಕರು, 303 ವಿಜ್ಞಾನ ಶಿಕ್ಷಕರು, 316 ಸಮಾಜ ಶಿಕ್ಷಕರು, 243 ಕಂಪ್ಯೂಟರ್‌ ಸೈಯನ್ಸ್‌ ಶಿಕ್ಷಕರು, 290 ದೈಹಿಕ ಶಿಕ್ಷಣ ಶಿಕ್ಷಕರು, 379 ಚಿತ್ರ ಕಲಾ ಶಿಕ್ಷಕರು, 278 ಸಂಗೀತ ಶಿಕ್ಷಕರು ಬೇಕಾಗಿದ್ದಾರೆ. ಸದ್ಯ ಈ ಎಲ್ಲ ಹುದ್ದೆಗಳು “ಅತಿಥಿ’ ಶಿಕ್ಷಕರ ಮೂಲಕವೇ ನಡೆಯುತ್ತಿವೆ.

ಕಂಪ್ಯೂಟರ್‌ ಲ್ಯಾಬ್‌ ಇಲ್ಲ

833 ವಸತಿ ಶಾಲೆ/ಕಾಲೇಜುಗಳ ಪೈಕಿ 641 ವಸತಿ ಶಾಲೆಗಳು ಮಾತ್ರ ಸ್ವಂತ ಕಟ್ಟಡ ಹೊಂದಿವೆ. ಉಳಿದವು ಬಾಡಿಗೆಯಲ್ಲಿವೆ. ಸ್ವಂತ ಕಟ್ಟಡದಲ್ಲಿರುವ ಶಾಲೆಗಳ ಪೈಕಿ ಕೇವಲ 116 ವಸತಿ ಶಾಲೆಗಳಲ್ಲಿ ಮಾತ್ರ ಕಂಪ್ಯೂಟರ್‌ ಲ್ಯಾಬ್‌ ಇದೆ. ಉಳಿದ ಶಾಲೆಗಳಿಗೆ ಆ ಭಾಗ್ಯವೂ ಇಲ್ಲ. ಈ ಬಾರಿಯ ಬಜೆಟ್‌ನಲ್ಲಿ ಇದಕ್ಕೆ ಅನುದಾನ ಪ್ರಸ್ತಾವವಾಗಿದೆ. ಆದರೆ ಯಾವಾಗ ಶಾಲೆಯವರೆಗೆ ತಲುಪುತ್ತದೆ ಎಂಬುದನ್ನು ಕಾದುನೋಡಬೇಕಷ್ಟೆ.

ಕರಾವಳಿಯಲ್ಲಿವೆ 22 ಶಾಲೆಗಳು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಪರಿಶಿಷ್ಟ ಜಾತಿ, 5 ಹಿಂದುಳಿದ ವರ್ಗ ಸೇರಿ ಒಟ್ಟು 12 ಹಾಗೂ ಉಡುಪಿ ಜಿಲ್ಲೆಯಲ್ಲಿ 1 ಪರಿಶಿಷ್ಟ ವರ್ಗ, 3 ಪರಿಶಿಷ್ಟ ಜಾತಿ ಹಾಗೂ 6 ಹಿಂದುಳಿದ ವರ್ಗ ಸಹಿತ 10 ವಸತಿ ಶಾಲೆ ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಶೇ. 60ಕ್ಕೂ ಅಧಿಕ ಹುದ್ದೆಗಳು ಖಾಲಿ ಖಾಲಿ. ಪೂರ್ಣಾವಧಿ ಹುದ್ದೆ ಭರ್ತಿಯಾಗದಿದ್ದರೆ ನಿರ್ವಹಣೆ ಕಷ್ಟ ಸಾಧ್ಯ ಎಂಬುದು ಅಧಿಕಾರಿಗಳ ಅಭಿಪ್ರಾಯ.

ರಾಜ್ಯದ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಸಮಿತಿ ಮೂಲಕ ನಿಯಮಾನುಸಾರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದೆ. ಬೋಧಕೇತರ ಸಿಬಂದಿಯನ್ನು ಜಿಲ್ಲಾ ಮಟ್ಟದಲ್ಲಿಯೇ ಸಂಪನ್ಮೂಲ ಏಜೆನ್ಸಿ ಮೂಲಕ ಪಡೆಯಲಾಗುತ್ತಿದೆ. – ಡಾ| ಎಚ್‌.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಸಚಿವರು (ವಿಧಾನಸಭಾ ಅಧಿವೇಶನದ ಉತ್ತರ) ­

-ದಿನೇಶ್‌ ಇರಾ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.