5ಕ್ಕಿಂತ ಹೆಚ್ಚು ಮಂದಿ ಪ್ರಚಾರಕ್ಕೆ ಹೋಗುವಂತಿಲ್ಲ !

ಗ್ರಾ.ಪಂ. ಚುನಾವಣೆ: ರಾಜಕೀಯ ಮುಖಂಡರ ಭಾವಚಿತ್ರಕ್ಕೆ ನಿರ್ಬಂಧ

Team Udayavani, Dec 5, 2020, 7:25 AM IST

5ಕ್ಕಿಂತ ಹೆಚ್ಚು ಮಂದಿ ಪ್ರಚಾರಕ್ಕೆ ಹೋಗುವಂತಿಲ್ಲ !

ಸಾಂದರ್ಭಿಕ ಚಿತ್ರ

ಮಂಗಳೂರು: ಗ್ರಾಮ ಪಂಚಾಯತ್‌ ಚುನಾವಣೆ ಪಕ್ಷರಹಿತವಾಗಿ ನಡೆಯುವುದರಿಂದ ಅಭ್ಯರ್ಥಿಗಳು ಚುನಾವಣ ಪ್ರಚಾರದಲ್ಲಿ ಪಕ್ಷದ ಚಿಹ್ನೆ ಬಳಸಲು ನಿರ್ಬಂಧವಿದ್ದರೆ, ಅತ್ತ ರಾಜಕೀಯ ನಾಯಕರ ಭಾವಚಿತ್ರಗಳನ್ನು ಉಪಯೋಗಿಸಿ ಕೂಡ ಪ್ರಚಾರ ನಡೆಸುವಂತಿಲ್ಲ. ಇನ್ನೊಂದೆಡೆ ಕೊರೊನಾ ಮಾರ್ಗಸೂಚಿಯನ್ವಯ ಮನೆ-ಮನೆ ಪ್ರಚಾರದ ವೇಳೆ ಗರಿಷ್ಠ 5 ಮಂದಿ ಮಾತ್ರ ಇರಲು ಅವಕಾಶ ನೀಡಲಾಗಿದೆ.

ಚುನಾವಣೆ ಆಯೋಗ ಹೊರಡಿಸಿರುವ ನೀತಿ ಸಂಹಿತೆಯನ್ವಯ ಯಾವುದೇ ಅಭ್ಯರ್ಥಿಯು ರಾಜಕೀಯ ನಾಯಕರ ಭಾವಚಿತ್ರ ಬಳಸಿಕೊಂಡು ಪ್ರಚಾರ ನಡೆಸಿದಲ್ಲಿ ಅಂತಹ ಕರಪತ್ರ, ಪೋಸ್ಟರ್‌ ಅಥವಾ ಇನ್ಯಾವುದೇ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಿದೆ.

ಮಾರ್ಗಸೂಚಿ ಪಾಲನೆ ಕಡ್ಡಾಯ
ಕೊರೊನಾ ಹಿನ್ನಲೆಯಲ್ಲಿ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು ಇದರನ್ವಯ ಗುಂಪು, ಗುಂಪಾಗಿ ಚುನಾವಣ ಪ್ರಚಾರ ನಡೆಸುವಂತಿಲ್ಲ. ಕಡಿಮೆ ಬೆಂಬಲಿಗರೊಂದಿಗೆ ಗರಿಷ್ಠ ಐದು ಮಂದಿಗೆ
ಸೀಮಿತಗೊಳಿಸಿ ಸಾಮಾಜಿಕ ಅಂತರ ಕಾಯ್ದು
ಕೊಂಡು ಮನೆ-ಮನೆ ಭೇಟಿ ನೀಡಿ ಪ್ರಚಾರ ನಡೆಸಬಹುದು. ಪ್ರಚಾರ ಸಂದರ್ಭ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಫೇಸ್‌ಮಾಸ್ಕ್ ಧರಿಸಿರ
ಬೇಕು. ಕರಪತ್ರಗಳನ್ನು ಹಂಚುವವರು ಕಡ್ಡಾಯವಾಗಿ ಫೇಸ್‌ಮಾಸ್ಕ್ ಹ್ಯಾಂಡ್‌ಗ್ಲೌಸ್‌ ಧರಿಸಬೇಕು ಹಾಗೂ ಹ್ಯಾಂಡ್‌ ಸ್ಯಾನಿಟೈಸರ್‌ ಉಪಯೋಗಿಸಬೇಕು. ಸಭೆ ಸಮಾರಂಭಗಳನ್ನು ತಮ್ಮ ಕ್ಷೇತ್ರಗಳಲ್ಲಿ ಕೊರೊನಾ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ಮಾಡಲು ಅವಕಾಶವಿದೆ. ಕೊರೊನಾ ಪಾಸಿಟಿವ್‌ ಇರುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್‌ ಮಾಧ್ಯಮದಲ್ಲಿ ಪ್ರಚಾರ ನಡೆಸಬಹುದು. ಖುದ್ದಾಗಿ ಪ್ರಚಾರ ಮಾಡಲು ಅವಕಾಶವಿಲ್ಲ.

ಬೆಂಬಲಿತ ಅಭ್ಯರ್ಥಿಗಳು
ಚುನಾವಣೆಯಲ್ಲಿ ಸ್ಪರ್ಧಿಸುವ ಬಹುತೇಕ ಅಭ್ಯರ್ಥಿಗಳು ರಾಜಕೀಯ ಪಕ್ಷಗಳ ಕಾರ್ಯ
ಕರ್ತರೇ ಆಗಿದ್ದು, ಬೆಂಬಲಿತ ಅಭ್ಯರ್ಥಿಗಳಾಗಿ ಚುನಾವಣ ಕಣಕ್ಕಿಳಿಯುತ್ತಾರೆ. ಪ್ರಥಮ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಡಿ. 7ರಿಂದ ಆರಂಭಗೊಂಡು, ಡಿ. 11ರ ವರೆಗೆ ಅವಕಾಶವಿದೆ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ ಹೆಸರು ಡಿ.8ರ ವೇಳೆಗೆ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

ಸೋಂಕಿತರಿಗೆ
ಕೊನೆಯಲ್ಲಿ ಅವಕಾಶ
ಚುನಾವಣೆಯಲ್ಲಿ ಕೋವಿಡ್‌ ಸೋಂಕಿತರು ಹಾಗೂ ಕೋವಿಡ್‌ ಶಂಕಿತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಚುನಾವಣ ಆಯೋಗ ಅವಕಾಶ ಕಲ್ಪಿಸಿದೆ.

ಜಾಗೃತಿ ಅಗತ್ಯ
ಗ್ರಾ. ಪಂ. ಚುನಾವಣೆಯಲ್ಲಿ ಯುವಜನತೆ ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯ ಅಗತ್ಯ. ಸಾರ್ವತ್ರಿಕ ಚುನಾವಣೆಗಳ ಸಂದರ್ಭ ಆಯೋಗದ ವತಿಯಿಂದ ಸ್ವೀಪ್‌ ಕಾರ್ಯಕ್ರಮಗಳು ನಡೆಯುತ್ತವೆ. ಇಂತಹ ಕಾರ್ಯಕ್ರಮಗಳು ಗ್ರಾ. ಪಂ. ಚುನಾವಣೆಯಲ್ಲೂ ಅಳವಡಿಸಿದರೆ ಯುವಜನತೆಯಲ್ಲಿ ಮತದಾನದ ಬಗ್ಗೆ ಹೆಚ್ಚು ಅರಿವು ಮೂಡಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರಸ್ತುತ ಕೊರೊನಾ ಸನ್ನಿವೇಶದಲ್ಲಿ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು, ಎಲೆಕ್ಟ್ರಾನಿಕ್ಸ್‌, ಮುದ್ರಣ ಮಾಧ್ಯಮಗಳನ್ನು, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸ್ವೀಪ್‌ ಮಾದರಿಯ ಕಾರ್ಯಕ್ರಮಗಳನ್ನು ನಡೆಸಬಹುದಾಗಿದೆ.

ಕಟ್ಟುನಿಟ್ಟಿನ ನಿಗಾ
ಗ್ರಾ. ಪಂ. ಚುನಾವಣೆ ಹಿನ್ನಲೆಯಲ್ಲಿ ಚುನಾವಣ ಆಯೋಗದ ನೀತಿ ಸಂಹಿತೆ ಡಿ.30 ರಿಂದ ಜಾರಿಗೆ ಬಂದಿದ್ದು ಡಿ.31ರವರೆಗೆ ಅನುಷ್ಠಾನದಲ್ಲಿರುತ್ತದೆ. ನೀತಿಸಂಹಿತೆ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲಾಗುವುದು. ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ತಂಡ ಇದರ ಮೇಲೆ ನಿಗಾ ಇರಿಸಲಿದೆ.
– ಡಾ| ಕೆ.ವಿ.ರಾಜೇಂದ್ರ, ದ.ಕ.ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.