
ಬಳ್ಕುಂಜೆ – ಕಡಮ ಕ್ರಾಸ್; ರಸ್ತೆ ಬದಿ ಬೆಳೆದು ನಿಂತ ಹುಲ್ಲು, ಸಂಚಾರಕ್ಕೆ ತಡೆ
Team Udayavani, Nov 14, 2022, 1:00 PM IST

ಕಿನ್ನಿಗೋಳಿ: ಬಳ್ಕುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಮ ಕ್ರಾಸ್ನಿಂದ ಬಳ್ಕುಂಜೆಯ ಪಶು ಆಸ್ಪತ್ರೆಯ ತನಕ ರಸ್ತೆಯ ಕೆಲವು ಪ್ರದೇಶದಲ್ಲಿ ರಸ್ತೆಯ ಎರಡು ಭಾಗದಲ್ಲಿ ಹುಲ್ಲು ಬೆಳೆದು ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಶಾಲಾ – ಕಾಲೇಜುಗಳಿರುವ ಪರಿಸರ ಇದಾಗಿದ್ದು, ನಿತ್ಯ ಸಾವಿರಾರು ವಿದ್ಯಾರ್ಥಿ ಗಳು ಇಲ್ಲಿ ಸಂಚರಿಸುತ್ತಾರೆ. ಶಾಲಾ ಮಕ್ಕಳ ವಾಹನ ಇಲ್ಲಿ ದಿನ ಸಂಚರಿಸುವುದರಿಂದ, ಕಿರಿದಾದ ಜಾಗದಿಂದ ಎದುರಿನಿಂದ ಬರುವ ವಾಹನಗಳಿಗೆ ಜಾಗ ಕೊಡುವುದು ಸಮಸ್ಯೆಯಾಗಿದೆ. ಜತೆಗೆ ಈ ವೇಳೆಯಲ್ಲಿ ಪಾದಚಾರಿಗಳು ಬಹಳ ತೊಂದರೆಗೆ ಒಳಪಡುತ್ತಿದ್ದಾರೆ.
ಹೆಚ್ಚುತ್ತಿರುವ ಅಪಘಾತ
ಕಳೆದ ಕಲವು ದಿನಗಳ ಹಿಂದೆ ಅಪಘಾತ ಸಂಭವಿಸಿದೆ. ಅಗಲ ಕಿರಿದಾದ ರೆಸ್ತೆಯಲ್ಲಿ ತಿರುವು ಜಾಸ್ತಿ ಇರುವುದರಿಂದ ಅಪಘಾತಗಳು ಜಾಸ್ತಿ ಸಂಭವಿಸುತ್ತಿದೆ. ಆದುದರಿಂದ ಸಂಬಂಧ ಪಟ್ಟ ಇಲಾಖೆಯವರು ಹಾಗೂ ಗ್ರಾಮ ಪಂಚಾಯತ್ ಈ ಸಮಸ್ಯೆಯ ಕಡೆ ಗಮನ ಹರಿಸಿ ಹುಲ್ಲು ಪೊದೆ ತರೆವು ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿದೆ.
ಇದರೊಂದಿಗೆ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಪಲಿಮಾರಿಗೆ ಹೋಗುವ ಪ್ರಮುಖ ರಸ್ತೆ ಇದಾಗಿದ್ದು, ಈ ರಸ್ತೆಯನ್ನು ಇನ್ನಷ್ಟು ಅಗಲಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾದ ಅಗತ್ಯವಿದೆ.
ಕುಸಿದ ಮೋರಿ
ಬಳ್ಕುಂಜೆ ಪಶು ವೈದ್ಯ ಆಸ್ಪತ್ರೆಯ ಸಮೀಪದಲ್ಲಿ ಒಂದು ಬದಿಯಲ್ಲಿ ಮೋರಿ ಕುಸಿದು ಹೋಗಿರುವುದರಿಂದ ದೊಡ್ಡ ಹೊಂಡ ಉಂಟಾಗಿದ್ದು ಅಪಾಯಕಾರಿಯಾಗಿದೆ ಹಾಗೂ ಸುತ್ತಲು ಹುಲ್ಲು ಬೆಳೆದಿದ್ದು ಹತ್ತಿರ ಬರುವ ತನಕ ಹೊಂಡ ಕಾಣುವುದಿಲ್ಲ , ಇದರಿಂದ ದ್ವಿಚಕ್ರ ಚಾಲಕರು ಬಿದ್ದು, ಗಾಯ ಮಾಡಿಕೊಂಡ ಘಟನೆಯೂ ನಡೆದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಮಂಗಳೂರು : ಅಪಾರ್ಟ್ಮೆಂಟ್ ನ 9 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಚುನಾವಣೆ ಘೋಷಣೆ: ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಎನ್ ವಿಷನ್ – 2023 ಉದ್ಘಾಟನಾ ಸಮಾರಂಭ

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್ಸಿಆರ್ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್