ಹೊಸಬೆಟ್ಟು, ಮುಕ್ಕದಲ್ಲಿ ಸಮುದ್ರ ಬಣ್ಣ ಹಸುರು!
Team Udayavani, Sep 16, 2020, 8:08 AM IST
ಸುರತ್ಕಲ್: ಇಲ್ಲಿಗೆ ಸಮೀಪದ ಹೊಸಬೆಟ್ಟು, ಮುಕ್ಕ ಸಮುದ್ರವೂ ಹಸುರು ಬಣ್ಣದಲ್ಲಿ ಗೋಚರವಾಗಿರುವುದು ಮಂಗಳವಾರ ಕಂಡು ಬಂದಿದೆ. ರಾತ್ರಿ ವೇಳೆ ಚಿತ್ರ ತೆಗೆದರೆ ಇದು ನೀಲಿ ಬಣ್ಣದಲ್ಲೂ ಗೋಚರಿಸುತ್ತದೆ.
ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ವಿವಿಧೆಡೆಯಿಂದ ನೀರು ಸಮುದ್ರ ಸೇರಿದೆ. ನೀರಿನಲ್ಲಿ ಅತೀ ಸೂಕ್ಷ್ಮ ಆಲ್ಗಾಲ್ ಹೆಚ್ಚಾಗಿ ಬಣ್ಣ ಬದಲಾಗುತ್ತದೆ. ಹೀಗಾಗಿ ಸಮುದ್ರದ ಬಣ್ಣ ಹಸುರಾಗಿ ಗೋಚರಿಸುತ್ತದೆ. ಇದು ಸಮುದ್ರ ತೀರದುದ್ದಕ್ಕೂ ಗೋಚರಿಸದೇ ಕೆಲವು ಭಾಗದ ದಡದಲ್ಲಿ ಮಾತ್ರ ಕಂಡು ಬರುತ್ತದೆ ಎಂದು ತಜ್ಞರ ಅಭಿಪ್ರಾಯಟ್ಟಿದ್ದಾರೆ. ಆದರೆ ಸಮುದ್ರ ಮಾಲಿನ್ಯ ಇದಕ್ಕೆ ಕಾರಣವೇ ಎಂಬುದನ್ನು ಪರಿಶೀಲಿಸಲು ಮಂಗಳವಾರ ಶಾಸಕ ಡಾ| ಭರತ್ ಶೆಟ್ಟಿ ವೈ. ಅವರ ಸೂಚನೆ ಮೇರೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅ ಧಿಕಾರಿ ಕೀರ್ತಿಕುಮಾರ್ ನೇತೃತ್ವದಲ್ಲಿ ಅಧಿ ಕಾರಿಗಳು ಸಮುದ್ರ ದಡದಿಂದ ನೀರು ಸಂಗ್ರಹಿಸಿ ಲ್ಯಾಬ್ಗ ಕಳಿಸಿದ್ದಾರೆ.
ಕೋಸ್ಟ್ಗಾರ್ಡ್ ಮಾಲಿನ್ಯ ಪರೀಕ್ಷೆಗೆ ಸಮುದ್ರದ ನೀರನ್ನು ಪರಿಶೀಲನೆಗೆ ಕೊಂಡೊಯ್ದಿದೆ ಎಂದು ತಿಳಿದುಬಂದಿದೆ.
ಸೂಕ್ತ ಕ್ರಮ ಅಗತ್ಯ
ಈ ರೀತಿ ಸಮುದ್ರದಲ್ಲಿ ಸಮುದ್ರ ನೀರಿನ ಬಣ್ಣ ಬದಲಾಗುವುದು ಮಾಲಿನ್ಯವೂ ಕೂಡ ಆಗಿರಬಹುದು. ಹಾವಸೆಯಂತಹ ವಸ್ತು ಮೀನು ಬಲೆಗೆ ಸಿಲುಕಿ ಸಮಸ್ಯೆಯಾಗುತ್ತದೆ. ಡಾಮರಿನಂತ ಗಟ್ಟಿ ವಸ್ತುಗಳೂ ಮೀನುಗಾರರಿಗೆ ಸಮಸ್ಯೆ ಉಂಟು ಮಾಡುತ್ತವೆ. ಈ ಬಗ್ಗೆ ಸೂಕ್ತ ಕ್ರಮ ಅಗತ್ಯ.
-ಗಂಗಾಧರ ಹೊಸಬೆಟ್ಟು, ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ