ಗುರುಪುರ ಹೋಬಳಿಯಲ್ಲಿ26 ಗ್ರಾಮಗಳಿಗೆ ಕೇವಲ ಆರು ಗ್ರಾಮಕರಣಿಕರು


Team Udayavani, Aug 4, 2022, 2:23 PM IST

5

ಕೈಕಂಬ: ಗುರುಪುರ ಹೋಬಳಿ ವ್ಯಾಪ್ತಿಯಲ್ಲಿ 26 ಗ್ರಾಮಗಳಿದ್ದು, ಪ್ರಸ್ತುತ 6 ಗ್ರಾಮಗಳಲ್ಲಿ ಮಾತ್ರ ಗ್ರಾಮ ಕರಣಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮಸ್ಥರಿಗೆ ತಮ್ಮ ಗ್ರಾಮದ ಗ್ರಾಮ ಕರಣಿಕರು ಕಾಣಸಿಗದೆ ಅಲೆದಾಡುವಂತಾಗಿದೆ. ಸರಕಾರಿ ಯೋಜನೆಗಳು ಜನರಿಗೆ ಮುಟ್ಟದ ಪರಿಸ್ಥಿತಿಗೆ ನಿರ್ಮಾಣವಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ ಕುಡುಪು, ಪಚ್ಚನಾಡಿ, ತಿರುವೈಲು ಮತ್ತು ಇದರ ಜತೆ 23 ಗ್ರಾಮಗಳಾದ ಅಡ್ಯಾರು, ಅರ್ಕುಳ, ನೀರುಮಾರ್ಗ, ಅಡೂxರು, ಮೂಳೂರು, ಬೊಂಡಂತಿಲ, ಮಲ್ಲೂರು, ಉಳಾಯಿಬೆಟ್ಟು, ಬಡಗ ಎಡಪದವು, ಮೂಡುಪೆರಾರ,ಪಡುಪೆರಾರ, ತೆಂಕುಳಿಪಾಡಿ, ಬಡಗುಳಿಪಾಡಿ, ಮೊಗರು, ಅದ್ಯಪಾಡಿ, ಕೊಳಂಬೆ, ಕಂದಾವರ, ಕೊಂಪದವು, ಮುಚ್ಚಾರು, ತೆಂಕ ಎಡಪದವು, ಕಿಲೆಂಜಾರು, ಕೊಳವೂರು, ಮುತ್ತೂರು ಗುರುಪುರ ಹೋಬಳಿ ವ್ಯಾಪ್ತಿಗೆ ಬರುತ್ತವೆ.

ಒಂದು ಗ್ರಾಮಕರಣಿಕರಿಗೆ 3ರಿಂದ 5 ಗ್ರಾಮಗಳು ಇಲ್ಲಿ ಒಬ್ಬ ಗ್ರಾಮಕರಣಿಕರಿಗೆ ತಲಾ 3 ರಿಂದ 5 ಗ್ರಾಮಗಳಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಎರಡು ದಿನಕ್ಕೆ ಒಂದು ಗ್ರಾಮಗಳಿಗೆ ಹೋದರೂ ಎಲ್ಲ ಗ್ರಾಮಗಳಲ್ಲಿ ಕಾರ್ಯನಿರ್ವಹಿಸಲು ಕಷ್ಟ ಪಡುವಂತಾಗಿದೆ. ಜಾತಿ, ಆದಾಯ, ಪಿಂಚಣಿ, ಪ್ರಕೃತಿ ವಿಕೋಪ, ರೇಶನ್‌ ಕಾರ್ಡ್‌ ಸ್ಥಳ ಪರಿಶೀಲನೆ, ನೋಟಿಸ್‌ ಜಾರಿ, ತಾಲೂಕು ಕಚೇರಿಯಲ್ಲಿ ಸಭೆಗಳು ಹೀಗೆ ಎಲ್ಲದಕ್ಕೂ ಗ್ರಾಮಕರಣಿಕರ ಸಹಿ ಅಗತ್ಯವಾಗಿದೆ. ಆದರೆ ಅವರಿಗಾಗಿ ಹುಡುಕಾಟ ಮಾಡಬೇಕಾದ ಪರಿಸ್ಥಿತಿ ಗ್ರಾಮಸ್ಥರದ್ದು.

ಜನರಿಗೆ ತಲುಪದ ಯೋಜನೆಗಳು

ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರೆ ಅದಕ್ಕೆ ಗ್ರಾಮ ಕರಣಿಕರು ಹಾಗೂ ಕಂದಾಯ ಇಲಾಖೆ ಶಿಫಾರಸು ಅಗತ್ಯ. ಸರಕಾರದ ಯೋಜನೆಗಳು ಜನರಿಗೆ ತಲುಪಲು ಗ್ರಾಮ ಕರಣಿಕರ ಕೊರತೆಯಿಂದ ಸಾಧ್ಯವಾಗುತ್ತಿಲ್ಲ. ಸರಕಾರ ಹಲವಾರು ಯೋಜನೆಗಳು ತರುವ ಜತೆಗೆ ಗ್ರಾಮಕರಣಿಕರನ್ನು ಪ್ರತೀ ಗ್ರಾಮಗಳಲ್ಲಿ ನೇಮಿಸುವುದು ಅಗತ್ಯ.

ಹಲವಾರು ಗ್ರಾಮ ಸಭೆಗಳಲ್ಲಿ ಖಾಯಂ ಗ್ರಾಮಕರಣಿಕರ ನೇಮಕಾತಿಯ ಬಗ್ಗೆ ಒತ್ತಾಯಗಳು ಬಂದಿದೆ. ನಿರ್ಣಯಗಳು ಕೂಡ ಆಗಿದೆ. ಎಲ್ಲದಕ್ಕೂ ಗ್ರಾಮ ಕರಣಿಕರೇ ಅಗತ್ಯ ವಾಗಿರುವುದರಿಂದ ಗ್ರಾಮ ಗ್ರಾಮಗಳಿಗೆ ಗ್ರಾಮಕರಣಿಕರ ನೇಮಕಾತಿಯಾಗಬೇಕು.

ಯೋಜನೆಗಳು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿರಬಾರದು. ಅವುಗಳನ್ನು ಅನುಷ್ಟಾನಕ್ಕೆ ತರುವಲ್ಲಿ ಗ್ರಾಮಕ ರಣಿಕರು ಗ್ರಾಮಸ್ಥರಿಗೆ ಸುಲಭವಾಗಿ ಸಿಗಬೇಕು. ಈಗಿನ ಪರಿಸ್ಥಿತಿಯಲ್ಲಿ ಗ್ರಾಮ ಕರಣಿಕರನ್ನು ಹುಡುಕಿ ಅಥವಾ ಪೋನ್‌ ಮಾಡಿ ಕೇಳಿ ಬೇರೆ ಗ್ರಾಮಗಳಿಗೆ ಹೋಗಿ ಅಲ್ಲಿ ಅವರ ಸಹಿ ಹಾಕಿಸಿಕೊಳ್ಳಬೇಕಾಗಿದೆ.

ಗುರುಪುರ ನಾಡಕಚೇರಿ: ಏಕೈಕ ಡಾಟಾ ಆಪರೇಟರ್‌

ನಾಡಕಚೇರಿಯಲ್ಲಿಯೂ ಇಂತಹದ್ದೇ ಸನ್ನಿವೇಶ. ಉಪತಹಶೀಲ್ದಾರ್‌, ಕಂದಾಯ ನಿರೀಕ್ಷಕರು, ಒಬ್ಬರು ಡಾಟಾ ಆಪರೇಟರ್‌, ದಿನಕೂಲಿ ನೌಕರ ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆಗಳ ಮಾತೃ ಇಲಾಖೆಯಾದ ಕಂದಾಯ ಇಲಾಖೆ ಮಹತ್ವದ್ದಾಗಿದ್ದು, ಇಲ್ಲಿ ಯಾವುದೇ ಕೊರತೆ ಕಂಡು ಬಂದಲ್ಲಿ ಸಮಸ್ಯೆ ಎದುರಿಸುವುದು ಜನರು. ಈ ಬಗ್ಗೆ ಗಮನ ನೀಡಬೇಕಾಗಿದೆ. ಗುರುಪುರ ನಾಡ ಕಚೇರಿಯಲ್ಲಿ ಈಗ ಒಬ್ಬರೇ ಡಾಟಾ ಆಪರೇಟರ್‌ ಕಾರ್ಯನಿರ್ವಹಿಸುತ್ತಿದ್ದಾರೆ. ದಿನೇ ದಿನೆ ಜನರ ಉದ್ದದ ಸಾಲು ಇಲ್ಲಿ ಕಾಣಸಿಗುತ್ತದೆ. ಇನ್ನೊಬ್ಬರು ದಿನಗೂಲಿ ನೌಕರ ಕಾರ್ಯನಿರ್ವಹಿಸುತ್ತಿದ್ದು ಇಲ್ಲಿಯೂ ಇನ್ನೊಬ್ಬರ ಅಗತ್ಯವಿದೆ. ದ್ವಿತೀಯ ಸಹಾಯಕ ಹುದ್ದೆ ನೇಮಕಾತಿಯಾಗದೇ ಹಲವಾರು ವರ್ಷಗಳಾಗಿವೆ.

ಸಚಿವರಿಗೆ ಮನವಿ: ಪ್ರತಿಯೊಂದು ಗ್ರಾಮ ಪಂಚಾಯತ್‌ಗೆ ಗ್ರಾಮ ಕರಣಿಕರ ನೇಮಿಸಬೇಕೆಂದು ಕಂದಾಯ ಸಚಿವ ಅಶೋಕ್‌ ಅವರಿಗೆ ಈಗಾಗಲೇ ಮನವಿ ಮಾಡಿದ್ದೇನೆ. ಜಿಲ್ಲೆಯಲ್ಲಿಯೇ ಇರುವಗ್ರಾಮ ಕರಣಿಕರ ಕೊರತೆಯ ಬಗ್ಗೆಯೂ ಅವರ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಅಧಿಕಾರ ಕೊಟ್ಟು ಗ್ರಾಮಕರಣಿಕರನ್ನು ನೇಮಿಸಬೇಕೆಂದು ಮನವಿಯನ್ನು ಮಾಡಿದ್ದೇನೆ.ಗುರುಪುರ ನಾಡಕಚೇರಿಯಲ್ಲಿ ಡಾಟಾ ಆಪರೇಟರ್‌ ಸಿಬಂದಿ ಕೊರತೆಯ ಬಗ್ಗೆ ಹಾಗೂ ನೇಮಕಕ್ಕೂ ಮನವಿ ಮಾಡಲಾಗಿದೆ. – ಡಾ| ಭರತ್‌ ಶೆಟ್ಟಿ ವೈ., ಶಾಸಕ

-ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.