ಕಳೆದ ಬಾರಿ ಸುರಿದ ಅರ್ಧದಷ್ಟೂ ಮಳೆ ಈ ಬಾರಿ ಬರಲಿಲ್ಲ !


Team Udayavani, Jun 19, 2019, 5:00 AM IST

v-19

ಮಹಾನಗರ: ಕರಾವಳಿ ಪ್ರದೇಶದಲ್ಲಿ ಮಳೆ ಕೊರತೆ ಆಗುವುದಿಲ್ಲ. ಸಕಾಲಕ್ಕೆ ಮಳೆಯಾಗುತ್ತದೆ ಎಂಬ ವಾಡಿಕೆ ಈ ಹಿಂದಿನ ವರ್ಷಗಳಲ್ಲಿ ಇತ್ತು. ಆದರೆ, ಈ ಬಾರಿ ಮುಂಗಾರು ಕ್ಷೀಣಿಸಿದ್ದು, ರಾಜ್ಯದಲ್ಲಿಯೇ ಕರಾವಳಿ ಪ್ರದೇಶದಲ್ಲಿ ಶೇ.56ರಷ್ಟು ಮತ್ತು ದ.ಕ. ಜಿಲ್ಲೆಯಲ್ಲಿ ಶೇ.62ರಷ್ಟು ಮಳೆ ಕೊರತೆ ಇದೆ. ಕಳೆದ ಬಾರಿ ಇದೇ ಸಮಯ ದ.ಕ. ಜಿಲ್ಲೆಯಲ್ಲಿ ಶೇ.41ರಷ್ಟು ಮಳೆ ಹೆಚ್ಚಳವಾಗಿತ್ತು.

ಕಳೆದ ಬಾರಿ ಮುಂಗಾರು ಪ್ರವೇಶಿಸಿದ ಬಳಿಕ ಬಿರುಸುಗೊಂಡಿತ್ತು. ಆದರೆ, ಈ ಬಾರಿ ದುರ್ಬಲಗೊಂಡಿದೆ. ಸಾಮಾ ನ್ಯವಾಗಿ ಮುಂಗಾರು ಪ್ರವೇಶ ಪಡೆದು ಒಂದು ವಾರ ಕಾಲ ದಿನವಿಡೀ ಜಿಟಿ ಜಿಟಿ ಮಳೆ ಸುರಿಯುತ್ತದೆ. ಆದರೆ, ಈ ಬಾರಿಯ ಹವಾಮಾನವೇ ಬದಲಾಗಿದೆ.

ದ.ಕ. ಜಿಲ್ಲೆಯಲ್ಲಿ 2019ರ ಜೂ. 1ರಿಂದ ಜೂ. 17ರ ವರೆಗಿನ ಹವಾ ಮಾನ ಇಲಾಖೆಯ ಅಂಕಿಅಂಶದ ಪ್ರಕಾರ ಬೆಳ್ತಂಗಡಿ ತಾಲೂಕಿನಲ್ಲಿ 411 ಮಿ.ಮೀ. ವಾಡಿಕೆ ಮಳೆಯಲ್ಲಿ 172.8 ಮಿ.ಮೀ ಮಳೆಯಾಗಿದ್ದು ಶೇ.58ರಷ್ಟು ಮಳೆ ಕೊರತೆ ಇದೆ. ಬಂಟ್ವಾಳ ತಾಲೂಕಿನಲ್ಲಿ 452.1 ಮಿ.ಮೀ ವಾಡಿಕೆ ಮಳೆಯಲ್ಲಿ 224 ಮಿ.ಮೀ. ಮಳೆ ಸುರಿದು ಶೇ.50ರಷ್ಟು ಮಳೆ ಕೊರತೆ, ಮಂಗಳೂರು ತಾಲೂಕಿನಲ್ಲಿ 497.8 ಮಿ.ಮೀ. ವಾಡಿಕೆ ಮಳೆಯಲ್ಲಿ 212 ಮಿ.ಮೀ. ಮಳೆ ಬಂದು ಶೇ.57 ಮಳೆ ಕೊರತೆ, ಪುತ್ತೂರು ತಾಲೂಕಿನಲ್ಲಿ 404.9 ಮಿ.ಮೀ. ಮಳೆಯಲ್ಲಿ 115.3 ಮಿ.ಮೀ. ಮಳೆ ಬಂದು ಶೇ.72ರಷ್ಟು ಮಳೆ ಕೊರತೆ, ಸುಳ್ಯ ತಾಲೂಕಿನಲ್ಲಿ 381.5 ಮಿ.ಮೀ. ವಾಡಿಕೆ ಮಳೆಯಲ್ಲಿ 100.7 ಮಿ.ಮೀ. ಮಳೆ ಸುರಿದು ಶೇ.74ರಷ್ಟು ಮಳೆ ಕೊರತೆ ಅನುಭವಿಸುತ್ತಿದೆ.

ಕಳೆದ ವರ್ಷ ಮುಂಗಾರು ಉತ್ತಮವಾಗಿದ್ದು, ಬೆಳ್ತಂಗಡಿ ತಾಲೂಕಿ ನಲ್ಲಿ ಶೇ.81, ಬಂಟ್ವಾಳ ತಾಲೂಕಿನಲ್ಲಿ ಶೇ.18, ಪುತ್ತೂರು ತಾಲೂಕಿನಲ್ಲಿ ಶೇ.51 ಮತ್ತು ಸುಳ್ಯ ತಾಲೂಕಿನಲ್ಲಿ ಶೇ.40ರಷ್ಟು ಮಳೆ ಹೆಚ್ಚಳವಾಗಿತ್ತು. ಮಂಗಳೂರು ತಾಲೂಕಿನಲ್ಲಿ ಶೇ.-2ರಷ್ಟು ಮಳೆ ಕೊರತೆ ಇತ್ತು.

ಇನ್ನೂ ಚುರುಕಾಗದ ಮಳೆ
ಸಾಮಾನ್ಯವಾಗಿ ಜೂನ್‌ ಮೊದಲ ವಾರವೇ ಮಳೆಯಾಗಿ, ಕರಾವಳಿ ಭಾಗದಲ್ಲಿ ಕೃಷಿ ಚಟುವಟಿಕೆಗಳು ಆರಂಭವಾಗುತ್ತದೆ. ಈ ಬಾರಿ ಜೂನ್‌ ಮೊದಲ ವಾರ ಕರಾವಳಿಗೆ ಮುಂಗಾರು ಅಪ್ಪಳಿಸಬಹುದು ಎಂದು ಅಂದಾಜಿಸಲಾಗಿತ್ತು.

ಆದರೆ ಜೂ. 9ರಂದು ಕೇರಳ ಕರಾವಳಿಗೆ ಮುಂಗಾರು ಬಂದರೂ, “ವಾಯು’ ಎಂಬ ಹೆಸರಿನ ಚಂಡಮಾರುತದ ಪರಿಣಾಮ ರಾಜ್ಯ ಕರಾವಳಿಗೆ ಒಂದು ವಾರಗಳ ಬಳಿಕ ಜೂ. 14ರಂದು ಮುಂಗಾರು ಆಗಮನವಾಯಿತು.ಈ ಹಿಂದೆಯೇ ಪೂರ್ವ ಮುಂಗಾರು ಮಳೆ ಕರಾವಳಿಯಲ್ಲಿ ಕ್ಷೀಣಿಸಿದ್ದ ಕಾರಣದಿಂದ ಮುಂಗಾರು ಉತ್ತಮವಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಮುಂಗಾರು ಪ್ರವೇಶಗೊಂಡು ಮೂರ್‍ನಾಲ್ಕು ದಿನ ಗಳಾದರೂ, ಮಂಗಳೂರು ಸಹಿತ ದ.ಕ. ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಿಲ್ಲ.

ಬೆಳಗ್ಗಿನ ವೇಳೆ ಮೋಡ ಕವಿದು ಬಿಸಿಲಿನ ವಾತಾವರಣ ಇರುತ್ತದೆ. ಕೆಲವೊಮ್ಮೆ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆಯಾದರೂ ಬಿರುಸು ಪಡೆಯುತ್ತಿಲ್ಲ. ಇದೇ ಕಾರಣಕ್ಕೆ ಇಡೀ ರಾಜ್ಯಕ್ಕೆ ಹೋಲಿಸಿದಾಗ ಕರಾವಳಿ ಪ್ರದೇಶದಲ್ಲಿ ಅತೀ ಹೆಚ್ಚು ಮಳೆ ಕೊರತೆ ಇದೆ.

ಮುಂಗಾರು ದುರ್ಬಲಕ್ಕೆ ಏನು ಕಾರಣ?
ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ ಈ ಬಾರಿಯ ಮುಂಗಾರು ಆಗಮನದ ವೇಳೆ “ವಾಯು’ ಚಂಡಮಾರುತದಿಂದಾಗಿ ಇಲ್ಲಿನ ಮೋಡ ಮತ್ತು ತೇವಾಂಶ ಕೂಡ ಕಡಿಮೆಯಾಗಿದೆ. ಜೂ. 20ರ ಬಳಿಕ ಕರಾವಳಿಯಲ್ಲಿ ಉತ್ತಮ ಮಳೆ ನಿರೀಕ್ಷಿಸಬಹುದು. ಬಂಗಾಲಕೊಲ್ಲಿಯಲ್ಲಿ ನಿಮ್ನ ಒತ್ತಡ ಉಂಟಾಗಿದ್ದು,ಇದು ಮುಂಗಾರಿನ ಪ್ರಗತಿಗೆ ಪೂರಕವಾಗಿಯೇ ಇದೆ. ಇದರಿಂದಾಗಿ ದಕ್ಷಿಣ ಭಾರತದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.