ಸುದಿನ ಫಾಲೋಆಪ್: ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಅರ್ಧಕ್ಕೆ ನಿಂತ ಕಾಮಗಾರಿ !
ಒಳಚರಂಡಿ ಅವ್ಯವಸ್ಥೆ; ಪ್ರಯಾಣಿಕರಿಗೆ ತೊಂದರೆ
Team Udayavani, Sep 8, 2020, 4:29 AM IST
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಎದುರು ಬಾಕಿಯಾಗಿರುವ ಕಾಮಗಾರಿ.
ಮಹಾನಗರ: ಮಂಗಳೂರು ಕೇಂದ್ರ ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ನಾಲ್ಕು ತಿಂಗಳುಗಳಿಂದ ಕಾಂಕ್ರೀಟ್ ಕಾಮಗಾರಿ ಬಾಕಿಯಾಗಿದೆ. ಒಂದು ವೇಳೆ ಮುಂದಿನ ತಿಂಗಳಿನಿಂದ ರೈಲು ಸೇವೆ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡರೆ ಪ್ರಯಾಣಿಕರಿಗೆ ತೊಂದರೆಯಾಗಲಿದೆ.
ರೈಲು ನಿಲ್ದಾಣದ ಮುಖ್ಯ ದ್ವಾರ, ವಾಹನಗಳ ನಿಲುಗಡೆಯ ಸ್ಥಳದಲ್ಲಿ ಒಳಚರಂಡಿ ಅವ್ಯವಸ್ಥೆಯಿಂದಾಗಿ ಕಳೆದ ವರ್ಷ ಮಳೆಗಾಲದಲ್ಲಿ ಕೊಳಚೆ ನೀರು ತುಂಬಿ ಭಾರೀ ಸಮಸ್ಯೆಯಾಗಿತ್ತು. ಅನಂತರ ಮಳೆ ಮುಗಿದ ಬಳಿಕ ಒಳಚರಂಡಿ ಕಾಮಗಾರಿ ನಡೆಸಲಾಗಿತ್ತು. ಒಳಚರಂಡಿಯ ಪೈಪ್ಗ್ಳನ್ನು ಅಳವಡಿಸುವ ಕಾಮಗಾರಿ ಕಳೆದ ಬೇಸಗೆಯಲ್ಲೇ ಪೂರ್ಣಗೊಂಡಿದೆ. ಆದರೆ ಅಗೆದು ಹಾಕಿರುವ ಪ್ರಾಂಗಣವನ್ನು ಹಾಗೆಯೇ ಬಿಡಲಾಗಿದೆ. ಈ ಜಾಗ ಈಗ ಜಲ್ಲಿಕಲ್ಲು, ಮಣ್ಣು, ಗುಂಡಿಗಳಿಂದ ತುಂಬಿದೆ. ಸದ್ಯ ಬೆಂಗಳೂರು ರೈಲುಗಳ ಓಡಾಟ ಮಾತ್ರವೇ ಆರಂಭವಾಗಿದೆ. ಇತರ ರೈಲುಗಳ ಓಡಾಟ ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಹಾಗಾಗಿ ಸದ್ಯಕ್ಕೆ ಇಲ್ಲಿ ಜನಸಂದಣಿ, ವಾಹನ ನಿಲುಗಡೆ ಇಲ್ಲ. ಆದರೆ, ರೈಲು ಸೇವೆ ಪೂರ್ಣವಾಗಿ ಪುನರಾರಂಭಗೊಂಡರೆ ನಿಲ್ದಾಣಕ್ಕೆ ಬಂದು ಹೋಗುವ ಜನರಿಗೆ ಹೆಚ್ಚಿನ ತೊಂದರೆ ಎದುರಾಗಲಿದೆ ಎಂದು ಟ್ಯಾಕ್ಸಿ, ಆಟೋ ಚಾಲಕರು ಕಾಳಜಿ ವ್ಯಕ್ತಪಡಿಸಿದ್ದಾರೆ.
ಅನುಮತಿ ಸಿಗದೆ ಬಾಕಿ
ಒಳಚರಂಡಿಗೆ ಸಂಬಂಧಿಸಿದ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ ಕಾಂಕ್ರೀಟ್ ಹಾಕುವ ಕಾಮಗಾರಿ ಬಾಕಿಯಾಗಿದೆ. ಇದಕ್ಕಾಗಿ ಇಲಾಖೆಯ ಅನುಮತಿ ಕೋರಲಾಗಿದ್ದು, ದೊರೆತ ಕೂಡಲೇ ಕಾಮಗಾರಿ ಆರಂಭಗೊಳ್ಳಲಿದೆ.
-ರವಿ ಮಿತ್ತಲ್, ಅಸಿಸ್ಟೆಂಟ್ ಡಿವಿಜನಲ್ ಎಂಜಿನಿಯರ್, ರೈಲ್ವೇ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ