ಮಳೆ ಬಂದರೆ ಕೆಸರಿನ ಸಮಸ್ಯೆ; ಬೇಸಗೆಯಲ್ಲಿ ಧೂಳಿನ ಕಿರಿಕಿರಿ

ಬೈಕಂಪಾಡಿ, ಮೀನಕಳಿಯ: ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಸ್ಥಳೀಯರು

Team Udayavani, Apr 25, 2022, 12:03 PM IST

baikampady

ಬೈಕಂಪಾಡಿ: ಮಳೆ ಬಂದರೆ ಕೆಸರಿನ ಸಮಸ್ಯೆ, ಬೇಸಗೆಯಲ್ಲಿ ಧೂಳಿನ ಕಿರಿಕಿರಿ. ಒಳ್ಳೆಯ ರಸ್ತೆಯಿದ್ದರೂ ಕಂಟೈನರ್‌ ಸಂಚಾರದಿಂದ ಉಂಟಾಗುವ ಧೂಳು ಸ್ಥಳೀಯ ಜನರನ್ನು ಕಂಗೆಡಿಸುತ್ತಿದೆ. ಇದರಿಂದ ಕಂಗೆಟ್ಟ ಜನರು ಮಾಸ್ಕ್, ಸ್ಕಾರ್ಫ್‌ಗಳಿಗೆ ಮೊರೆ ಹೋಗುವ ಸ್ಥಿತಿ ಎದುರಾಗಿದೆ.

ಬೈಕಂಪಾಡಿ, ಪಣಂಬೂರು ಕೈಗಾರಿಕೆ ವಲಯ ಪ್ರದೇಶ. ಆದರೆ ಇದರ ನಡುವೆ ಕೆಲವೊಂದು ವಸತಿ ಬಡಾವಣೆಯಿದೆ. ಬಂದರು ಅಂಚಿನಲ್ಲಿಯೇ ಬೈಕಂಪಾಡಿ, ಮೀನಕಳಿಯ ಪ್ರದೇಶವಿದೆ. ಇಲ್ಲಿನ ಮೀನಕಳಿಯ ಪ್ರಧಾನ ರಸ್ತೆಗೆ ಕಾಂಕ್ರೀಟ್‌ ಅಳವಡಿಸಿ ದ್ವಿಪಥ ಮಾಡಲಾಗಿದೆ. ಆದರೆ ಜನರಿಗೆ ಮಾತ್ರ ಇದರ ಪ್ರಯೋಜನ ಲಭಿಸುತ್ತಿಲ್ಲ. ಕಾರಣ ಒಂದೆಡೆ ಲಾರಿ ನಿಲುಗಡೆ, ಇನ್ನೊಂದೆಡೆ ಸುತ್ತಮುತ್ತ ಇರುವ ಖಾಸಗಿ ಜಾಗಗಳಲ್ಲಿ ಗೋದಾಮು ಇರುವುದರಿಂದ ದಿನಕ್ಕೆ ನೂರಾರು ಟ್ರಕ್‌ಗಳು ಇಲ್ಲಿ ಓಡಾಡುತ್ತವೆ. ಕಂಟೈನರ್‌ ಇಡುವ ಜಾಗಗಳು ಕಲ್ಲು ಮಣ್ಣಿನಿಂದ ಕೂಡಿದ ಜಾಗವಾಗಿದ್ದು, ಲಾರಿಗಳ ಸಂಚಾರದಿಂದ ಧೂಳು ಸೃಷ್ಟಿಯಾಗಿ ಜನರ ಆರೋಗ್ಯಕ್ಕೆ ಕುತ್ತು ತರುತ್ತಿವೆ. ನಿತ್ಯ ಸಾವಿರಾರು ಮಂದಿ ಜನರು, ವಿದ್ಯಾರ್ಥಿಗಳು, ಮಹಿಳೆಯರು ಈ ರಸ್ತೆಯಲ್ಲಿ ಓಡಾಟ ನಡೆಸುವರು.

ಪಣಂಬೂರು ಬೀಚ್‌ ರಸ್ತೆಗೆ ಪರ್ಯಾಯವಾಗಿ ಮೀನಕಳಿಯ ರಸ್ತೆ ಬಳಕೆಯಾಗುತ್ತಿದೆ. ಈ ರಸ್ತೆಯಲ್ಲಿ ಟ್ರಕ್‌ ವೇಗದಿಂದ ಸಾಗಿದರಂತೂ ಆ ವಾಹನ ಮತ್ತು ಎದುರಿಗಿದ್ದವರೂ ಕಾಣದಷ್ಟು ದಟ್ಟ ಧೂಳು ಆವರಿಸಿಕೊಳ್ಳುತ್ತದೆ. ಅಲ್ಲಿದ್ದವರು ಒಂದೆರಡು ನಿಮಿಷ ನಿಂತು ಹೋಗಬೇಕಾದ ಸ್ಥಿತಿ ಉದ್ಭವಿಸುತ್ತದೆ. ಧೂಳಿನ ಸಮಸ್ಯೆಗೆ ಮುಕ್ತಿ ನೀಡುವ ಕೆಲಸ ಮಹಾನಗರ ಪಾಲಿಕೆಯಿಂದ ಇನ್ನೂ ನಡೆಯದಿರುವುದು ಖೇದಕರ.

ಬೈಕಂಪಾಡಿ ಮೇಲ್ಸೇತುವೆ ದಾಟಿದ ಕೂಡಲೇ ಸಿಗುವ ಕಾಂಕ್ರೀಟ್‌ ಚತುಷ್ಪಥ ರಸ್ತೆಯನ್ನು ಜನರ ಸುಗಮ ಓಡಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ದುರಸ್ತಿಗೊಳಿಸಲು ಮಹಾನಗರ ಪಾಲಿಕೆ, ಸಂಚಾರಿ ಪೊಲೀಸ್‌ ಇಲಾಖೆ ಮುಂದಾಗಬೇಕಿದೆ. ಇದರ ಜತೆಗೆ ಕಾಂಕ್ರೀಟ್‌ ರಸ್ತೆಯ ಇಕ್ಕೆಲಗಳಲ್ಲಿ ಶೇಖರಣೆಯಾದ ಮರಳು, ಮಣ್ಣಿನ ತೆರವಿಗೆ ಕ್ರಮ ಜರಗಿಸಬೇಕಿದೆ.

ಅಗತ್ಯ ಕ್ರಮ

ಮಹಾನಗರ ಪಾಲಿಕೆಯ ಕಾಂಕ್ರೀಟ್‌ ರಸ್ತೆಯ ಮೇಲೆ ಲಾರಿ ಟ್ರಕ್‌ಗಳ ಸಂಚಾರದಿಂದ ಮಣ್ಣು, ಧೂಳಿನ ಕಣ ಅಧಿಕವಾಗಿದ್ದರೆ, ಇತರ ಸವಾರರಿಗೆ ಹಾನಿಯಾಗುವಂತಿದ್ದರೆ, ಇದನ್ನು ತೆರವುಗೊಳಿಸಲು, ನಿಗದಿತವಾಗಿ ಸ್ವಚ್ಛತೆ ಕಾಪಾಡಲು ಹಾಗೂ ಇದಕ್ಕೆ ಕಾರಣರಾದ ಸಮೀಪದ ಸಂಬಂಧಪಟ್ಟ ಕಂಪೆನಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರ ಗಮನಕ್ಕೆ ತರಲಾಗುವುದು. -ಡಾ| ಮಂಜಯ್ಯ ಶೆಟ್ಟಿ, ಮುಖ್ಯ ಆರೋಗ್ಯಾಧಿಕಾರಿ, ಪಾಲಿಕೆ

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.