ಬೇಸಗೆಯಲ್ಲಿ ರೋಗಗಳು ಹೆಚ್ಚಾಗುವ ಭೀತಿ: ಆರೋಗ್ಯ ರಕ್ಷಣೆಗೆ ಜಿಲ್ಲಾಧಿಕಾರಿ ಸೂಚನೆ
Team Udayavani, Mar 7, 2023, 6:36 AM IST
ಮಂಗಳೂರು: ಬೇಸಗೆಯಲ್ಲಿ ಆಹಾರ ಮತ್ತು ನೀರಿನ ಮೂಲಕ ಹರಡುವ ರೋಗಗಳು ಹೆಚ್ಚಾಗುವ ಕಾರಣ ಉಪಾಹಾರ ಗೃಹಗಳು, ಕ್ಯಾಂಟೀನ್ಗಳು, ಹೊಟೇಲ್ಗಳು, ಬಾರ್ಗಳು, ಬೇಕರಿಗಳು ಮುಂತಾದ ಸಿದ್ಧಪಡಿಸಿದ ಆಹಾರ ಮಾರಾಟ ಮಾಡುವ ಆಹಾರ ಉದ್ಯಮಿಗಳು ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಕೆಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಸಲಹೆ ನೀಡಿದ್ದಾರೆ.
ಆಹಾರೋದ್ಯಮಿಗಳು ನೀರಿನ ಮೂಲಗಳನ್ನು ಶುಚಿಗೊಳಿಸಬೇಕು. ಸೂಕ್ತ ತಾಪಮಾನದಲ್ಲಿ ಆಹಾರವನ್ನು ಸಂಗ್ರಹಿಸಬೇಕು. ಕುಡಿಯಲು ಶುದ್ಧೀಕರಿಸಿದ ಹಾಗೂ ಬಿಸಿನೀರು ಪೂರೈಕೆ ಮಾಡಬೇಕು. ಹೊಟೇಲ್ಗಳಲ್ಲಿ ಆಹಾರ ಅಥವಾ ಅಡುಗೆ ತಯಾರಕರು ವೈಯಕ್ತಿಕ ಶುಚಿತ್ವ ಖಚಿತ ಪಡಿಸಿಕೊಳ್ಳಬೇಕು. ಅನಾ ರೋಗ್ಯದ ವೇಳೆ ಆಹಾರವನ್ನು ತಯಾರಿಸುವ, ಸರಬರಾಜು ಮಾಡುವ ಮತ್ತು ಬಡಿಸುವ ಕಾರ್ಯ ಮಾಡಬಾರದು. ಉಪಾಹಾರ ಗೃಹಗಳು, ಕ್ಯಾಂಟೀನ್, ಹೊಟೇಲ್, ಬಾರ್, ಬೇಕರಿಗಳಲ್ಲಿ ಅಡುಗೆಮನೆಗೆ ಪ್ರವೇಶಿಸುವ ಮೊದಲು ಏಪ್ರನ್, ಕೈಗವಸುಗಳು ಮತ್ತು ಹೆಡ್ಕವರ್ ಧರಿಸಬೇಕು. ಆಹಾರ ತಯಾರಿಸುವ ಪ್ರದೇಶದಲ್ಲಿ ಸ್ವತ್ಛತೆ ಕಾಪಾಡಬೇಕು. ಮುಚ್ಚಿದ ಕಸದ ತೊಟ್ಟಿಗಳನ್ನು ಒದಗಿಸಬೇಕು.
ತರಕಾರಿಗಳು ಮತ್ತು ಹಣ್ಣು ಗಳನ್ನು ವ್ಯವಸ್ಥಿತ ಹಾಗೂ ಶುಚಿ ಯಾಗಿ ಸಂಗ್ರಹಿಸಿಡಬೇಕು. ಮಂಜುಗಡ್ಡೆಗಳನ್ನು ತಯಾರಿಸುವ ಹಾಗೂ ಸರಬರಾಜು ಮಾಡುವ ಸಂಸ್ಥೆಯು ಶುದ್ಧ ನಿರಿನ ಬಳಕೆಯನ್ನು ಖಾತ್ರಿಪಡಿಸಿ ಕೊಳ್ಳಬೇಕು. ಹಸಿ ಮೀನು, ಮಾಂಸ ಮಾರಾಟಗಾರರು ತಾಜಾತನವನ್ನು ಖಚಿತಪಡಿಸಿಕೊಳ್ಳಬೇಕು. ಬೀದಿ ಬದಿ ಆಹಾರ ಪದಾರ್ಥಗಳ ಶುದ್ಧತೆ, ಶುಚಿತ್ವವನ್ನು ಖಾತರಿ ಪಡಿಸಬೇಕು. ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ