ಬಿರುಸು ಪಡೆದ ಮಳೆ; ಹಾನಿ
Team Udayavani, May 20, 2022, 11:03 AM IST
ಮಹಾನಗರ: ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆದಿದ್ದು, ಮಂಗಳೂರು ನಗರದಲ್ಲಿ ಗುರುವಾರ ಉತ್ತಮ ಮಳೆಯಾಗಿದೆ.
ಮಂಗಳೂರಿನಲ್ಲಿ ಬುಧವಾರ ತಡ ರಾತ್ರಿಯೇ ಮಳೆ ಆರಂಭಗೊಂಡಿದ್ದು, ಗುರುವಾರವೂ ಮುಂದುವರಿದಿತ್ತು. ಮಧ್ಯಾಹ್ನದವರೆಗೆ ಮಳೆ ಬಿರುಸು ಪಡೆ ದಿದ್ದು, ಬಳಿಕ ತುಸು ಬಿಡುವು ನೀಡಿತ್ತು. ಭಾರೀ ಮಳೆಯ ಪರಿಣಾಮ, ನಗರದ ಕೆಲವೊಂದು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ನಗರದಲ್ಲಿ ಕೆಲವೊಂದು ಕಡೆ ಗಳಲ್ಲಿ ಈಗಾಗಲೇ ಅರ್ಧಂಬರ್ಧ ಕಾಮ ಗಾರಿ ನಡೆದಿದ್ದು, ಇದರಿಂದ ತೊಂದರೆ ಉಂಟಾಗಿತ್ತು. ಮಳೆ ಪರಿಣಾಮ ನಗರದ ಕೆಲವೆಡೆ ಟ್ರಾಫಿಕ್ ಜಾಮ್ ಇತ್ತು.
ಗುರುವಾರ ಬೆಳಗ್ಗೆ ಜಿಲ್ಲಾಡಳಿತದಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ಎಂದು ಘೋಷಿಸುವ ಮೊದಲೇ ಹೆಚ್ಚಿನ ಮಕ್ಕಳು ಶಾಲೆಯನ್ನು ಸೇರಿದ್ದರಿಂದ ಮರಳಿ ಮನೆಗೆ ಮಳೆಯಲ್ಲಿ ಹಿಂದುರುಗಿದ ಘಟನೆ ನಡೆಯಿತು. ಹೊಗೆಬಜಾರ್ ಬಳಿ ಮರದ ಮಿಲ್ ಕುಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಮಿಲ್ಗಳಲ್ಲಿರುವ ಯಂತ್ರ ಗಳು, ಮರಗಳಿಗೆ ಹಾನಿಯಾಗಿವೆ. ಗುಜ್ಜರಕೆರೆ ಕೆರೆ ತಡೆಗೋಡೆ ಕುಸಿದಿದೆ.
ಜಪ್ಪಿನಮೊಗರಿನಲ್ಲಿ ರಸ್ತೆಗೆ ಕೃತಕ ನೆರೆ ಆವರಿಸಿದ್ದು, ಸ್ಥಳೀಯ ಮನಪಾ ಸದಸ್ಯೆ ವೀಣಾ ಮಂಗಳ ನೇತೃತ್ವದಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮಳೆ ಆರಂಭವಾದ ಕಾರಣ ಪಾಲಿಕೆ ವ್ಯಾಪ್ತಿಯಲ್ಲಿ ಹೊಸ ದಾಗಿ ಕಟ್ಟಡ ಕಾಮಗಾರಿ ಆರಂಭಿಸುವುದನ್ನು ನಿಷೇಧಿಸಲಾಗಿದ್ದು, ಮಳೆಗಾಲ ಮುಗಿದ ಅನಂತರ ಕಾಮಗಾರಿ ಯನ್ನು ಪ್ರಾರಂಭಿಸುವಂತೆ ಪಾಲಿಕೆ ಆಯುಕ್ತರು ಈಗಾಗಲೇ ಸೂಚನೆ ನೀಡಿ ದ್ದಾರೆ. ಅದರಂತೆ ಗುಡ್ಡವನ್ನು ಅಗೆದು ಸಮತಟ್ಟುಗೊಳಿಸುವುದು, ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಗ್ಗು ಪ್ರದೇಶ ವಿರುವಲ್ಲಿ ತಡೆಗೋಡೆ ನಿರ್ಮಿಸಿ ಭದ್ರ ಪಡಿಸುವಂತೆ ಪಾಲಿಕೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ