ಗ್ರಾಮಾಂತರ ಪ್ರದೇಶಗಳಲ್ಲಿ ಭಾರೀ ಮಳೆ; ಮನೆಗೆ ನುಗ್ಗಿದ ನೀರು, ಅಲ್ಲಲ್ಲಿ ಹಾನಿ

ಇಂದು-ನಾಳೆ ರೆಡ್‌ ಅಲರ್ಟ್‌ ಘೋಷಣೆ: ಭಾರೀ ಮಳೆಗೆ ಮುನ್ನೆಚ್ಚರಿಕೆ ಇರಲಿ

Team Udayavani, Aug 7, 2019, 5:00 AM IST

s-32

ಉಳ್ಳಾಲ: ಉಳ್ಳಾಲ, ಮುಡಿಪು ಸಹಿತ ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಗಾಳಿ ಸಹಿತ ಮಳೆಯಿಂದಾಗಿ ಕೃತಕ ನೆರೆ ಸೃಷಿಯಾಗಿ ಮನೆ ಸಹಿತ ಅಂಗಡಿ ಮುಗ್ಗಟ್ಟುಗಳಿಗೆ ಹಾನಿಯಾಗಿದೆ. ಅಲ್ಲದೇ ತಡೆಗೋಡೆ, ಗುಡ್ಡ ಕುಸಿದು ಎರಡು ಮನೆಗಳಿಗೆ ಹಾನಿಯಾಗಿದೆ.

ಕೊಣಾಜೆಯ ದಾಸರಮೂಲೆ ಬಳಿ ಸಿಪ್ರಿಯನ್‌ ಡಿ’ಸೋಜಾ ಅವರ ಮನೆ ಮೇಲಿನ ಆವರಣಗೋಡೆ ಕುಸಿದು ಬಿದ್ದು ಮನೆಗೆ ಹಾನಿಯಾದರೆ ಪಜೀರಿನ ಕಂಬಳಪದವು ಬಳಿ ಗ್ರೇಷನ್‌ ಕುಟಿನೋ ಅವರ ಮನೆಗೆ ಹಿಂಬದಿಯ ಗುಡ್ಡ ಕುಸಿದು ಮನೆಗೆ ಹಾನಿಯಾಗಿದೆ.

ಮುಡಿಪುವಿನಲ್ಲಿ ಕೃತಕ ನೆರೆ
ಮುಡಿಪುವಿನಲ್ಲಿ ಕೃತಕ ನೆರೆಯಾಗಿದ್ದು ಸಾಂಬಾರ್‌ತೋಟ ಮಸೀದಿ ಬಳಿ ನಿವಾಸಿ ಎಸ್‌.ಕೆ. ಖಾದರ್‌ ಅವರ ಮನೆಗೆ ತಡರಾತ್ರಿ ನೀರು ನುಗ್ಗಿ ಮನೆಮಂದಿ ಆತಂಕದಲ್ಲಿ ರಾತ್ರಿ ಕಳೆಯುವಂತಾಯಿತು. ಮುಡಿಪಿನ್ನಾರ್‌ ದೇವಸ್ಥಾನ ಬಳಿಯೂ ಕೃತಕ ನೆರೆಯಿಂದ ಪ್ರವೀಣ್‌ ಡಿ’ಸೋಜಾ ಅವರ ಮನೆ ಸಹಿತ ಎರಡು ಮನೆಗಳಿಗೆ ಕೃತಕ ನೆರೆಯಾಗಿದ್ದು ಸ್ಥಳೀಯ ನಿವಾಸಿಗಳು ಸಮಸ್ಯೆ ಎದುರಿಸುವಂತಾಗಿದೆ. ಸ್ಥಳೀಯವಾಗಿ ಅಭಿವೃದ್ಧಿ ಕಾಮಗಾರಿ ಮತ್ತು ಮಾನವ ನಿರ್ಮಿತ ತಡೆಗೋಡೆಗಳಿಂದ ಈ ಸಮಸ್ಯೆ ಉದ್ಭವಿಸಿದ್ದು, ಇನ್ಫೋಸಿಸ್‌ ಸಂಸ್ಥೆಗೆ ಸೇರಿದ ಸ್ಥಳದ ಎತ್ತರದ ಪ್ರದೇಶದಿಂದ ನೀರು ರಭಸವಾಗಿ ಹರಿದು ಬಂದಿದ್ದರಿಂದ ಈ ಘಟನೆ ನಡೆದಿದೆ. ಸಾಂಬಾರ್‌ತೋಟ ಸಹಿತ ಸುಮಾರು ಮೂರು ಕಡೆ ಇನ್ಫೋಸಿಸ್‌ ಆವರಣ ಗೋಡೆ ಕುಸಿದಿದೆ. ನವಗ್ರಾಮದಲ್ಲಿಯೂ ಕೃತಕ ನೆರೆಯಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗಿದೆ.

ಮಂಗಳೂರು ವಿಧಾನ ಸಭಾ ಕ್ಷೇತ್ರದ ಮುಡಿಪು ಕಂಬಳಪದವು ಬಳಿ ಭಾರೀ ಮಳೆಯಿಂದಾಗಿ ಮನೆಗೆ ನೀರು ನುಗ್ಗಿದ್ದ ಮನೆಗಳಿಗೆ ಶಾಸಕ ಯು.ಟಿ. ಖಾದರ್‌ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ತಹಶೀಲ್ದಾರ್‌, ಸ್ಥಳೀಯ ಜನಪ್ರತಿನಿಧಿಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿ, ಮೆಸ್ಕಾಂ ಅಧಿಕಾರಿಗಳು ಹಾಗೂ ಇನ್ಫೋಸಿಸ್‌ ಅಧಿಕಾರಿಗಳ ತಂಡ ರಚಿಸಿ ಅವಲೋಕನ ನಡೆಸಿ ಶೀಘ್ರ ಸಭೆ ಕರೆದು ಶಾಶ್ವತ ಪರಿಹಾರ ಒದಗಿಸಲು ತಹಶೀಲ್ದಾರರಿಗೆ ಆದೇಶ ನೀಡಿದರು.

ತೊಕ್ಕೊಟ್ಟು ಜಂಕ್ಷನ್‌ ಜಲಾವೃತ
ಮಂಗಳವಾರ ಬೆಳಗ್ಗಿನಿಂದಲೇ ಧಾರಾ ಕಾರವಾಗಿ ಸುರಿದ ಮಳೆಗೆ ತೊಕ್ಕೊಟ್ಟು ಜಂಕ್ಷನ್‌ ಜಲಾವೃತಗೊಂಡಿದ್ದು, ಸುಮಾರು ಐದಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿವೆ. ಮೂರು ವರ್ಷಗಳಲ್ಲಿ ಸತತವಾಗಿ ಜಂಕ್ಷನ್‌ನಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಅಂಗಡಿಗಳಿಗೆ ನೀರು ನುಗ್ಗಿ ಹಾನಿಯಾಗುತ್ತಿದೆ. ಹೋಟೆಲ್, ರೆಸ್ಟೊರೆಂಟ್, ಬಟ್ಟೆ ಅಂಗಡಿ, ಟೈಲರ್‌ ಅಂಗಡಿ, ಎಲೆಕ್ಟ್ರಿಕಲ್ ಶಾಪ್‌ಗೆ ನೀರು ನುಗ್ಗಿ ಹಾನಿಯಾಗಿದೆ.

ಗುರುಪುರ ನದಿಯ ನೀರಿನ ಮಟ್ಟ ಏರಿಕೆ
ಗುರುಪುರ: ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುರುಪುರ ಫಲ್ಗುಣಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಸುತ್ತಲಿನ ಪ್ರದೇಶಗಳಿಗೆ ನೆರೆ ಭೀತಿ ಉಂಟಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು ರಸ್ತೆಯಲ್ಲಿಯೇ ನೀರು ಹರಿದು ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಅದರಲ್ಲೂ ಮುಖ್ಯವಾಗಿ ರಾ.ಹೆ. 169 ಅಗಲ ಕಿರಿದಾಗಿರುವುದಷ್ಟೇ ಅಲ್ಲದೆ ರಸ್ತೆಯಲ್ಲಿ ಅಲ್ಲಲ್ಲಿ ಹೊಂಡ-ಗುಂಡಿಗಳಿರುವುದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು. ದಿಢೀರ್‌ ಮಳೆಯಿಂದ ನೀರಿನ ಮಟ್ಟ ಒಂದೇ ಸಮನೆ ಏರಿಕೆಯಾಗಿದ್ದರಿಂದ ಸಮೀಪದ ಗುರುಪುರ, ಕುಕ್ಕುದಕಟ್ಟೆ ಸೇರಿ ನದಿ ಪಾತ್ರದ ಊರುಗಳಿಗೆ ನೆರೆಭೀತಿ ಉಂಟಾಗಿದೆ. ಅದೇ ರೀತಿ ಮಳಲಿಯ ಸಾಧೂರು ಭಾಗದಲ್ಲೂ ನೀರಿನ ಮಟ್ಟ ಏರಿಕೆಯಾಗಿದ್ದು, ಪಟ್ಲ ಪ್ರದೇಶಗಳಲ್ಲಿ ನೀರು ನಿಂತಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.