ಮಂಗಳೂರು: ಬೈಕ್ ಸವಾರನ ಪ್ರಾಣ ಉಳಿಸಿದ ಹೆಲ್ಮೆಟ್
Team Udayavani, Apr 30, 2023, 7:25 AM IST
ಮಂಗಳೂರು: ಹೆಲ್ಮೆಟ್ ಧರಿಸಿದ್ದರಿಂದ ಪವಾಡಸದೃಶವೆಂಬಂತೆ ಸವಾರನೋರ್ವ ಪ್ರಾಣ ಉಳಿಸಿಕೊಂಡಿದ್ದಾರೆ.
ನಗರದ ಲಾಲ್ಭಾಗ್ ಸಿಗ್ನಲ್ ಬಳಿ ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಲೇಡಿಹಿಲ್ ಕಡೆಯಿಂದ ಬರುತ್ತಿದ್ದ ಬೈಕ್ವೊಂದು ಸ್ಕಿಡ್ ಆಗಿ ಬಿತ್ತು. ಅದರಲ್ಲಿದ್ದ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಆದರೆ ಅವರ ತಲೆಯಲ್ಲಿದ್ದ ಹೆಲ್ಮೆಟ್ ಬೇರ್ಪಟ್ಟಿರಲಿಲ್ಲ. ಇದರಿಂದಾಗಿ ಅವರಿಗೆ ಗಂಭೀರ ಗಾಯವಾಗದೆ ಪಾರಾದರು. ಕಾಂಕ್ರೀಟ್ ರಸ್ತೆಗೆ ಬೈಕ್ ಉರುಳಿಬಿದ್ದ ದೃಶ್ಯ ಭೀಕರವಾಗಿತ್ತು. ಒಂದು ವೇಳೆ ಹೆಲ್ಮೆಟ್ ಧರಿಸದೆ ಇದ್ದಿದ್ದರೆ ಅಥವಾ ಸಮರ್ಪಕವಾಗಿ ಲಾಕ್ ಮಾಡದೆ ಇರುತ್ತಿದ್ದರೆ ಪ್ರಾಣಕ್ಕೆ ಅಪಾಯವುಂಟಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಸ್ತೆಯಲ್ಲಿ ಡ್ರೈನೇಜ್ ನೀರು ಹರಿಯುತ್ತಿದ್ದುದೆ ಬೈಕ್ ಸ್ಕಿಡ್ ಆಗಲು ಕಾರಣ ಎಂದು ತಿಳಿದುಬಂದಿದೆ. ಬೈಕ್ ಉರುಳಿ ಬೀಳುವಾಗ ಅಕ್ಕಪಕ್ಕದಲ್ಲಿ ವಾಹನ, ಪಾದಚಾರಿಗಳು ಇರದಿದ್ದುರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ