ತ್ಯಾಜ್ಯ ತುಂಬಿ ನಿಂತಿವೆ ಹೆದ್ದಾರಿ ಬದಿಯ ತೋಡುಗಳು

ಸುರತ್ಕಲ್‌: ಪೆಪ್‌ಲೈನ್‌ ಕಾಮಗಾರಿ ಅವಾಂತರ, ಹೂಳು, ಕಸಕಡ್ಡಿ

Team Udayavani, Apr 4, 2022, 11:36 AM IST

suratkal

ಸುರತ್ಕಲ್‌: ಪಾಲಿಕೆಗೆ ಸೇರಿದ ರಾಜಕಾಲುವೆಯ ಸಮಸ್ಯೆಯಂತೆಯೇ ಹೆದ್ದಾರಿ ಇಲಾಖೆಯು ಚತುಷ್ಪಥ ರಸ್ತೆಯ ಇಕ್ಕೆಲಗಳಲ್ಲಿ ನಿರ್ಮಿಸಿದ ತೋಡುಗಳೂ ದುಃಸ್ಥಿತಿಯಲ್ಲಿವೆ. ಮಳೆ ನೀರು ರಸ್ತೆ ಮತ್ತು ಇಕ್ಕೆಲಗಳ ತಗ್ಗು ಪ್ರದೇಶಗಳಿಗೆ ನುಗ್ಗುವುದರಲ್ಲಿ ಅನುಮಾನವಿಲ್ಲ.

ಸುರತ್ಕಲ್‌ ಭಾಗದಲ್ಲಿ ಗ್ಯಾಸ್‌ ಪೈಪ್‌ ಲೈನ್‌, ಜಲಸಿರಿ, ಕೇಬಲ್‌ ಅಳವಡಿಕೆ ಹೀಗೆ ವಿವಿಧ ಕಾರಣಗಳಿಗಾಗಿ ಹೆದ್ದಾರಿ ಬದಿ ಹೊಂಡ ತೋಡಿ ಬಿಡಲಾಗಿದ್ದು, ಮಳೆಗೆ ಹೆದ್ದಾರಿ ಬದಿ ತೋಡು ಪಾಲಾಗಿದೆ. ಭೂಗತ ಗ್ಯಾಸ್‌ ಪೈಪ್‌ಲೈನ್‌ ಕೊರೆಯುವ ಸಂದರ್ಭ ಮೇಲೆ ಬಂದ ಕೆಸರು ಮಿಶ್ರಿತ ನೀರು ಮಣ್ಣು ಸಮೀಪದ ತೋಡು ಸೇರಿ ಭರ್ತಿಯಾಗಿದೆ. ಸುರತ್ಕಲ್‌ನ ತಡಂಬೈಲ್‌ ಮತ್ತು ಸರ್ವಿಸ್‌ ರಸ್ತೆಯ ನಡುವೆ ಕಾಮಗಾರಿ ನಡೆದ ಹಲವು ಕಡೆ ಇದೇ ಸ್ಥಿತಿಯಿದೆ. ಪೂರ್ವ ಮುಂಗಾರು ಇನ್ನೇನು ಆರಂಭವಾಗಲಿದ್ದು, ಇದುವರೆಗೆ ತೋಡು ಸ್ವತ್ಛಗೊಳಿಸುವ ಕೆಲಸಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿಲ್ಲ. ಅಧಿಕಾರಿಗಳು ಕನಿಷ್ಠ ಪಕ್ಷ ಸರ್ವಿಸ್‌ ರಸ್ತೆ, ತೋಡುಗಳ ಸ್ಥಿತಿಗತಿ ಪರಿಶೀಲನೆಯನ್ನೂ ನಡೆಸಿಲ್ಲ. ಹಲವು ಕಡೆ ವಿವಿಧ ಬಡಾವಣೆ, ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ಸಂಪರ್ಕ ಕಲ್ಪಿಸಲು ತೋಡಿಗೆ ಮಣ್ಣು ಸುರಿಯಲಾಗಿದೆ. ಇನ್ನು ಹಲವೆಡೆ ಹೆದ್ದಾರಿ ಬದಿ ತೋಡುಗಳು ತ್ಯಾಜ್ಯ ಎಸೆಯುವ ಗುಂಡಿಯಾಗಿ ಮಾರ್ಪಟ್ಟಿವೆ. ಮಳೆನೀರಿನ ಜತೆಗೆ ತ್ಯಾಜ್ಯ ಸೇರಿಕೊಂಡು ಸರಾಗ ಹರಿವಿಗೆ ಅಡ್ಡಿಯಾಗಿ ಉಕ್ಕೇರುವುದು ಖಚಿತ. ಇನ್ನು ಹಲವು ಕಡೆ ತೋಡು ಬ್ಲಾಕ್‌ ಆಗಿ ಮಳೆ ನೀರು ಸರ್ವಿಸ್‌ ರಸ್ತೆಯಲ್ಲಿ ಹರಿದು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗುವ ಭೀತಿಯಿದೆ. ಹೆದ್ದಾರಿ ಇಲಾಖೆಯ ಅನುಮತಿಯೊಂದಿಗೆ ರಸ್ತೆ ಅಗೆದಿದ್ದರೂ ಪಾಲಿಕೆ ವ್ಯಾಪ್ತಿಯ ಬಡಾ ವಣೆಗಳಿಗೆ ಮಳೆಗಾಲದಲ್ಲಿ ಸಮಸ್ಯೆ ಆಗಲಿ ರುವುದರಿಂದ ಪಾಲಿಕೆ ಅಧಿಕಾರಿಗಳು ತೋಡುಗಳ ಸ್ವತ್ಛತೆಗೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಬೇಕಿದೆ.

ಮುಕ್ಕ ಪ್ರದೇಶದಲ್ಲಿ ಬೃಹತ್‌ ರಾಜ ಕಾಲುವೆಯ ಕಾಮಗಾರಿಗೆ ಹೆದ್ದಾರಿ ಇಲಾಖೆ ಮುಂದಾಗಿದ್ದು, ಮಳೆಗಾಲಕ್ಕೆ ಮುನ್ನ ಪೂರ್ಣಗೊಳಿಸಲು ಹೆಣಗಾಡುತ್ತಿದೆ. ಬೈಕಂಪಾಡಿ ಪ್ರದೇಶದಲ್ಲಿ ಇದ್ದ ತೋಡುಗಳು ಹೂಳು ತುಂಬಿ ಕಾಣದಂತಾಗಿವೆ. ಘನ ಟ್ರಕ್‌ಗಳ ಸಂಚಾರದಿಂದ ಈ ತೋಡುಗಳು ಸರ್ವನಾಶವಾಗಿವೆ. ವಿವಿಧೆಡೆ ಅಂಗಡಿ ಮುಂಗಟ್ಟುಗಳ ಮುಂಭಾಗ ತೋಡುಗಳಿಗೆ ಅಡ್ಡಲಾಗಿ ಪೈಪ್‌ಗ್ಳನ್ನು ಅಳವಡಿಸಿದೆ. ಇಲ್ಲಿ ಕಟ್ಟಿಕೊಂಡಿರುವ ತ್ಯಾಜ್ಯ ರಾಶಿಯನ್ನು ಸ್ವತ್ಛಗೊಳಿಸಿಲ್ಲ. ಬೈಕಂಪಾಡಿ ಜಂಕ್ಷನ್‌ ಭಾಗದಲ್ಲಿ ತೋಡುಗಳ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿದು ಸ್ಥಳೀಯ ಕಾಲುವೆ ಸೇರುತ್ತದೆ. ಇದರಿಂದ ಒಳ ರಸ್ತೆಗಳ ಡಾಮರು ಎದ್ದು ಹೋಗಿದೆ.

ಹೆದ್ದಾರಿ ಬದಿಯ ತೋಡುಗಳ ನಿರ್ಮಾಣ ಅವೈಜ್ಞಾನಿಕವಾಗಿದ್ದು, ಚಿತ್ರಾಪುರ, ಕುಳಾಯಿ ಭಾಗದಲ್ಲಿ ಮಳೆ ನೀರು ತೋಡಿನಲ್ಲಿಯೇ ನಿಂತು ನುಸಿ ಕಾಟಕ್ಕೆ ಕಾರಣವಾಗುತ್ತಿದೆ.

ಹೆದ್ದಾರಿ ಅಧಿಕಾರಿಗಳೇ ಹೊಣೆ

ಹೆದ್ದಾರಿ ಬದಿ ತೋಡುಗಳು ಹೂಳು, ಕಸ ಕಡ್ಡಿ ಸ್ವತ್ಛತೆಗೆ ಹೆದ್ದಾರಿ ಇಲಾಖೆಯೇ ಮುಂದಾಗಬೇಕು. ಈ ಬಗ್ಗೆ ಪಾಲಿಕೆಯು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವ ಕೆಲಸ ಮಾಡಲಿದೆ. ಮಳೆಗಾಲದಲ್ಲಿ ಮನೆ, ಬಡಾವಣೆಗೆ ಕೃತಕ ನೀರು ನುಗ್ಗಿದರೆ ಹೆದ್ದಾರಿ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. -ಪ್ರೇಮಾನಂದ ಶೆಟ್ಟಿ, ಮೇಯರ್‌, ಮಂಗಳೂರು ಮನಪಾ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.