ನದಿ ದಾಟಲು ಹಿಂದೂ- ಕ್ರಿಶ್ಚಿಯನ್ ಸಮುದಾಯಗಳ ಸೌಹಾರ್ದತೆಯ ಸೇತುಬಂಧನ


Team Udayavani, Jun 7, 2020, 11:10 AM IST

ನದಿ ದಾಟಲು ಹಿಂದೂ- ಕ್ರಿಶ್ಚಿಯನ್ ಸಮುದಾಯಗಳ ಸೌಹಾರ್ದತೆಯ ಸೇತುಬಂಧನ

ಮಂಗಳೂರು: ಇದು ನಗರದ ಜೀವನಾಡಿ ನೇತ್ರಾವತಿಯ ನಡುವರ ಇರುವ ಪುಟ್ಟ ದ್ವೀಪ. ನದಿಯ ಮಧ್ಯಭಾಗದಲ್ಲಿದ್ದರೂ ಇಲ್ಲಿಗೆ ಹೋಗಲು ಶಾಶ್ವತ ಸೇತುವೆಯ ವ್ಯವಸ್ಥೆಯಿಲ್ಲ. ಹಾಗಾಗಿ ಇಲ್ಲಿಗೆ ಕಾರು, ಬೈಕುಗಳ ಸಂಚಾರವಿಲ್ಲ. ಇಲ್ಲಿರುವ 40ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ನದಿ ದಾಟಲು ದೋಣಿಯನ್ನು ಆಶ್ರಯಿಸಿದರೆ, ಬೇಸಿಗೆ ಕಾಲದಲ್ಲಿ ತಾವೇ ನಿರ್ಮಿಸುವ ಸೇತುವೆಯೇ ಆಧಾರ.

ನಗರದ ಅಡ್ಯಾರ್ ಬಳಿ ನೇತ್ರಾವತಿ ನದಿ ಮಧ್ಯ ಭಾಗದಲ್ಲಿರುವ ಈ ಉಳಿಯ ಎನ್ನುವ ಪ್ರದೇಶದಲ್ಲಿ ಸುಮಾರು ನಲ್ವತ್ತು ಕ್ರಿಶ್ಚಿಯನ್ ಕುಟುಂಬಗಳು ವಾಸಿಸುತ್ತಿದೆ. ಇಲ್ಲಿಗೊಂದು ಶಾಶ್ವತ ಸೇತುವೆ ನಿರ್ಮಿಸಿ ಎನ್ನುವ ಮನವಿಗೆ ಅರ್ಜಿ ಬರೆದು ಸರ್ಕಾರಿ ಕಚೇರಿ ಅಲೆದಾಡಿದರೂ, ಇವರಿಗೆ ಆ ಭಾಗ್ಯ ಇನ್ನೂ ದೊರೆತಿಲ್ಲ. ಈ ಕಾರಣಕ್ಕೆ ಪ್ರತೀ ವರ್ಷವೂ ಇವರು ತಾವೇ ನಿರ್ಮಿಸುವ ತಾತ್ಕಾಲಿಕ ಸೇತುವೆಯ ಮೊರೆ ಹೋಗಬೇಕಾಗುತ್ತದೆ.

ಬೇಸಿಗೆ ಕಾಲದಲ್ಲಿ ನೀರಿನ ಹರಿವು, ರಭಸ ಕಡಿಮೆ ಇರುವ ಕಾರಣ ಕಬ್ಬಿಣದ  ಸರಳುಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡುತ್ತಾರೆ. ಇದರಲ್ಲಿ ಜನರು ನಡೆದುಕೊಂಡು ನದಿ ದಾಟಬಹುದಷ್ಟೇ. ಮಳೆಗಾಲ ಶುರುವಾಗುತ್ತಿದ್ದಂತೆ ಆ ತಾತ್ಕಾಲಿಕ ಸೇತುವೆಯನ್ನು ತೆಗೆಯಲು ಆರಂಭಿಸುತ್ತಾರೆ. ಕಾರಣ ಮಳೆಗಾಲದಲ್ಲಿ ನೇತ್ರಾವತಿಯುಉ ತುಂಬಿ ಹರಿಯುವುದರಿಂದ ಸೇತುವೆಯ ಮುಳುಗಡೆಯ ಭೀತಿಯ ಜೊತೆಗೆ ಕಬ್ಬಿಣದ ಸರಳುಗಳು ನೀರು ಪಾಲಾಗುವ ಭೀತಿ! ಮಳೆಗಾಲದ ಸುಮಾರು ಆರು ತಿಂಗಳು ಇವರಿಗೆ ದೋಣಿಯಾನವೇ ಗತಿ ಎಂಬಂತಾಗಿದೆ.

ವಿಶೇಷ ಏನೆಂದರೆ ಸೇತುವೆಯ ಅಗತ್ಯವೇ ಇರದ ನದಿ ಪಕ್ಕದ ಹಿಂದೂ ಸಮುದಾಯದ ಜನರೂ ಸೇತುವೆಯ ಕೆಲಸಕ್ಕೆ ಕೈ ಜೋಡಿಸುವ ಮೂಲಕ ಅಲ್ಲಿನ ಕ್ರಿಶ್ಚಿಯನ್ ಸಮುದಾಯಕ್ಕೆ ಹೆಗಲು‌ ನೀಡುವ ಕೆಲಸ ಮಾಡಿದ್ದಾರೆ.

ಹಿಂದೂ- ಕ್ರಿಶ್ಚಿಯನ್ ಸಮುದಾಯಗಳ ಸೌಹಾರ್ದತೆಯ ಸೇತುಬಂಧನ

ಸೇತುವೆ ನಿರ್ಮಿಸಲು ಒಂದಾಗುವ ಆ ಊರು

ಆ ಉಳಿಯದಲ್ಲಿಸುಮಾರು 40 ಕುಟುಂಬಗಳು ವಾಸಿಸುತ್ತಿದೆ. ಬಹುತೇಕರು ಕ್ರಿಶ್ಚಿಯನ್ ಸಮುದಾಯದವರು. ಆದರೆ ಸೇತುವೆ ನಿರ್ಮಾಣ ಮತ್ತು ಸೇತುವೆ ತೆಗೆಯುವ ಕಾರ್ಯಕ್ಕೆ ನದಿಯ ಮತ್ತೊಂದು ದಡದ ಹಿಂದೂಗಳು ಕೈ ಜೋಡಿಸುತ್ತಾರೆ.

ಹಿಂದೂ- ಕ್ರಿಶ್ಚಿಯನ್ ಸಮುದಾಯಗಳ ಸೌಹಾರ್ದತೆಯ ಸೇತುಬಂಧನ

ವರ್ಷವೂ ಕೆಲವೇ ಹಿಂದೂ ಯುವಕರು ಇವರ ಈ ಸೇತುವೆ ಕಟ್ಟುವ ಕೆಲಸದ ಜೊತೆ ಸೇರುತ್ತಿದ್ದರೆ ಈ ಬಾರಿ ವಿಶೇಷವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಯುವಕರು ಬೆಳಗ್ಗಿನ ಜಾವದಲ್ಲಿ ಕ್ರಿಶ್ಚಿಯನ್ ಸಮುದಾಯದ ಜೊತೆ ನಿಂತು ಅವರಿಗೆ ಸಾಥ್ ನೀಡಿದ್ದಾರೆ. ತಮ್ಮ ಕಷ್ಟವನ್ನು ಸರ್ಕಾರದ ಬಳಿ ತೋಡಿಕೊಂಡು ಸೊರಗಿ ಹೋಗಿದ್ದ ಇಲ್ಲಿನ ಕ್ರಿಶ್ಚಿಯನ್ ಸಮುದಾಯಕ್ಕೆ ಹಿಂದೂಗಳ ಈ ಸಹಕಾರ ತಮ್ಮ ಕಷ್ಟದ ಜೊತೆ ಯಾರು ಇಲ್ಲ ಎನ್ನುವ ಕೊರಗನ್ನು ದೂರ ಮಾಡಿದೆ. ಸೇತುವೆ ಎರಡು ಸಮುದಾಯದ ಸೇತುಬಂಧಕ್ಕೆ ಕಾರಣವಾಗಿದೆ.

 ಸೌಹಾರ್ದತೆಯ ಸೇತುಬಂಧನ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.