ಪರ್ಸ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ: ಪೊಲೀಸ್ ಆಯುಕ್ತರಿಂದ ಸನ್ಮಾನ
Team Udayavani, Oct 15, 2021, 4:05 PM IST
ಮಂಗಳೂರು : ನಗರದ ಅತ್ತಾವರದ ಬಿಗ್ ಬಜಾರ್ ಬಳಿ ಸಿಕ್ಕ ಪರ್ಸ್ ಒಂದನ್ನು ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕರೊಬ್ಬರಿಗೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಪ್ರಶಂಸಿಸಿ ಸನ್ಮಾನ ಮಾಡಿದ ಘಟನೆ ಶುಕ್ರವಾರ ನಡೆದಿದೆ.
ಮಹಮದ್ ಹನೀಫ್ ಅವರು ಪ್ರಾಮಾಣಿಕತೆ ಮೆರೆದ ಆಟೋ ಚಾಲಕರಾಗಿದ್ದು, ಕಳೆದ ೧೫ ವರ್ಷಗಳಿಂದ ಇವರು ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ದುಷ್ಯಂತ್ ಎನ್ನುವ ವಿದ್ಯಾರ್ಥಿ ಪರ್ಸ್ ಕಳೆದುಕೊಂಡಿದ್ದು, ಅದರಲ್ಲಿ 10,200 ರೂಪಾಯಿ ಹಣ ಸೇರಿದಂತೆ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ಸೇರಿ ಕೆಲವು ಅಗತ್ಯ ಕಾರ್ಡ್ ಗಳಿದ್ದವು.
ತಮಗೆ ಸಿಕ್ಕಿದ ಪರ್ಸನ್ನು ಆಯುಕ್ತರ ಕಚೇರಿಗೆ ತಂದು ಕೊಡುವ ಮೂಲಕ ಹನೀಫ್ ಅವರು ಮಾದರಿಯಾಗಿದ್ದಾರೆ. ಜನರು ಆಟೋ ಚಾಲಕರ ಕುರಿತಾಗಿ ಆರೋಪ ಮಾಡುವ ವೇಳೆ ಇವರು ಮಾಡಿದ ಕೆಲಸ ಎಲ್ಲರೂ ಮೆಚ್ಚುವಂತಹದ್ದು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ