ತೋಟಗಾರಿಕೆ ಇಲಾಖೆ ನರ್ಸರಿ: ನಿರ್ವಹಣೆ ಕೊರತೆ

ಅಡ್ಡಾದಿಡ್ಡಿಯಾಗಿ ಬಿದ್ದಿವೆ ಕುಂಡಗಳು; ಸೊಳ್ಳೆ ಉತ್ಪಾದನ ಕೇಂದ್ರವಾಗುವ ಆತಂಕ

Team Udayavani, Oct 10, 2020, 10:04 PM IST

ತೋಟಗಾರಿಕೆ ಇಲಾಖೆ ನರ್ಸರಿ: ನಿರ್ವಹಣೆ ಕೊರತೆ

ನರ್ಸರಿಯಲ್ಲಿ ಎಸೆದ ಕುಂಡಗಳಲ್ಲಿ ನೀರು ತುಂಬಿಕೊಂಡಿರುವುದು.

ಮಹಾನಗರ: ಅಡ್ಡಾದಿಡ್ಡಿ ಯಾಗಿ ಬಿದ್ದಿರುವ ಹೂ ಕುಂಡಗಳಲ್ಲಿ ನೀರು ತುಂಬಿ ಸೊಳ್ಳೆ ಉತ್ಪಾದನ ಕೇಂದ್ರಗಳಾಗುತ್ತಿವೆ. ನರ್ಸರಿಯಲ್ಲಿ ಇರಬೇಕಾದ ಗಿಡಗಳಿಗಿಂತ ಕಳೆಗಳೇ ಹೆಚ್ಚಿವೆ. ಗಿಡ ನೆಟ್ಟಿರುವ ಪ್ಲಾಸ್ಟಿಕ್‌ಗಳು ಗಿಡ, ಮಣ್ಣು ಸಮೇತ ನೆಲಕ್ಕುರುಳಿವೆ!

ಇದು ಬೆಂದೂರ್‌ವೆಲ್‌ನಲ್ಲಿರುವ ತೋಟಗಾರಿಕೆ ಇಲಾಖೆಯ ನರ್ಸರಿಯ ದುಃಸ್ಥಿತಿ. ಸಾಮಾನ್ಯವಾಗಿ ನರ್ಸರಿ ಅಂದರೆ ಆಲಂಕಾರಿಕ, ಔಷಧೀಯ, ತರಕಾರಿ, ಹಣ್ಣು ಸಹಿತ ಇತರ ತೋಟ ಗಾರಿಕೆ ಬೆಳೆಗಳಿಗೆ ಸಂಬಂಧಿಸಿದ ಗಿಡ, ಬೀಜಗಳಿಂದ ತುಂಬಿರುತ್ತವೆ. ಆದರೆ ಬೆಂದೂರ್‌ವೆಲ್‌ನಲ್ಲಿರುವ ತೋಟಗಾರಿಕೆ ಇಲಾಖೆಯ ನರ್ಸರಿ ಇದಕ್ಕೆ ವ್ಯತಿರಿಕ್ತ ವಾಗಿದೆ. ಇಲ್ಲಿ ಬಳಕೆಗೆ ಯೋಗ್ಯವಾದ ಗಿಡಗಳಿಗಿಂತ ಹೆಚ್ಚು ಬೇಡವಾದ ಕಳೆ ಗಿಡಗಳೇ ತುಂಬಿ ಹೋಗಿದ್ದು, ನರ್ಸರಿ ಇದೆಯೇ ಎಂಬ ಬಗ್ಗೆ ಸಂಶಯ ಉಂಟು ಮಾಡುವಂತಿದೆ.

ಸೊಳ್ಳೆ ಉತ್ಪತ್ತಿಗೂ ಪೂರಕ ಗಿಡಗಳನ್ನು ನೆಡಲೆಂದು ನರ್ಸರಿಯಲ್ಲಿ ಇಟ್ಟಿರುವ ಕುಂಡಗಳು ಅಡ್ಡಾದಿಡ್ಡಿಯಾಗಿ ಬಿದ್ದುಕೊಂಡಿವೆ. ಮಳೆಯಿಂದಾಗಿ ಈ ಕುಂಡಗಳಲ್ಲಿ ನೀರು ತುಂಬಿದ್ದು, ಸೊಳ್ಳೆ ಉತ್ಪತ್ತಿಗೂ ಪೂರಕವಾಗಿದೆ. ಕೆಲವು ಕುಂಡಗಳು ಕೆಳಭಾಗದಲ್ಲಿ ಒಡೆದು ಹೋಗಿದ್ದು, ಅವುಗಳನ್ನು ನರ್ಸರಿಯಲ್ಲೇ ಬಿಸಾಡಲಾಗಿದೆಯೇ ಹೊರತು ಸೂಕ್ತ ವಿಲೇವಾರಿ ಮಾಡಿಲ್ಲ. ಇದರಿಂದ ನಳನಳಿಸಬೇಕಾದ ನರ್ಸರಿ ಕಳೆಗುಂದಿದೆ. ಕಪ್ಪು ಬಣ್ಣದ ಪ್ಲಾಸ್ಟಿಕ್‌ಗಳಲ್ಲಿ ನೆಟ್ಟಿರುವ ಗಿಡಗಳು ಪ್ಲಾಸ್ಟಿಕ್‌, ಮಣ್ಣು ಸಮೇತ ನೆಲಕ್ಕುರುಳಿವೆ.

ಜಿಲ್ಲೆಯಲ್ಲಿ 9 ನರ್ಸರಿ
ದ.ಕ. ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯಡಿ ಒಟ್ಟು 14 ನರ್ಸರಿಗಳಿದ್ದು, ಪ್ರಸ್ತುತ 9 ನರ್ಸರಿಗಳು ಕೆಲಸ ನಿರ್ವಹಿ ಸುತ್ತಿವೆ. ಮಂಗಳೂರಿನಲ್ಲಿ ಬೆಂದೂರ್‌ವೆಲ್‌ನಲ್ಲಿರುವ ತೋಟಗಾರಿಕೆ ಇಲಾಖೆ ಎದುರುಗಡೆ ಒಂದು ನರ್ಸರಿ ಹಾಗೂ ಇನ್ನೊಂದು ಪಡೀಲಿನಲ್ಲಿದೆ. ಇಲಾಖೆ ಮುಂಭಾಗದಲ್ಲೇ ಇರುವ ಪಡೀಲಿನ ನರ್ಸರಿಯಲ್ಲಿಯೂ ನಿರ್ವಹಣೆ ಸಮಸ್ಯೆ ತೋರಿ ಬರುತ್ತಿದೆ.

ಲಾರ್ವಾ ಉತ್ಪತ್ತಿ ಭೀತಿ!
ಮಳೆಗಾಲದಲ್ಲಿ ಅಲ್ಲಲ್ಲಿ ನೀರು ನಿಂತು ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಲಾರ್ವಾ ಉತ್ಪತ್ತಿಯಾಗುವ ಆತಂಕವಿರುವುದರಿಂದ ಹೂ ಕುಂಡಗಳನ್ನು ಎಲ್ಲೆಂದರಲ್ಲಿ ಎಸೆಯದೆ, ಅದನ್ನು ಮಗುಚಿ ಹಾಕಬೇಕು ಎಂಬುದಾಗಿ ಆರೋಗ್ಯ ಇಲಾಖೆ ಎಚ್ಚರಿಸುತ್ತಲೇ ಬರುತ್ತಿದೆ. ಆದರೆ ಸರಕಾರಿ ವ್ಯವಸ್ಥೆಯಲ್ಲೇ ಇರುವ ತೋಟಗಾರಿಕೆ ಇಲಾಖೆ ಮುಂಭಾಗದಲ್ಲೇ ಇರುವ ನರ್ಸರಿಯಲ್ಲಿ ಕುಂಡಗಳನ್ನು ಎಸೆದಿದ್ದು, ನೀರು ನಿಲ್ಲುತ್ತಿರುವುದು ಪ್ರತಿದಿನ ಅಧಿಕಾರಿಗಳಿಗೆ ಕಾಣು ವಂತಿದ್ದರೂ ನಿರ್ಲಕ್ಷé ವಹಿಸಲಾಗುತ್ತಿದೆ. ಪ್ರಸ್ತುತ ಬಿಸಿಲು-ಮಳೆ ಬರುತ್ತಿರುವುದ ರಿಂದ ಇಂತಹ ಕುಂಡಗಳು ಇನ್ನಷ್ಟು ಅಪಾಯಕಾರಿಯಾಗಿವೆ.

ಮಳೆ ಮುಗಿದ ತತ್‌ಕ್ಷಣ ನಿರ್ವಹಣೆ
ತೋಟಗಾರಿಕೆ ಇಲಾಖೆಯ ನರ್ಸರಿಯನ್ನು ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿದೆ. ಆಲಂಕಾರಿಕ ಗಿಡಗಳು ಹೆಚ್ಚಿನ ಸಂಖ್ಯೆಯಲ್ಲಿ ನರ್ಸರಿಯಲ್ಲಿವೆ. ಪ್ರಸ್ತುತ ಮಳೆಗಾಲವಾದ್ದರಿಂದ ಗಿಡಗಂಟಿಗಳು ಬೆಳೆದಿವೆ. ಮಳೆ ಮುಗಿದ ತತ್‌ಕ್ಷಣ ಕಳೆ ಗಿಡಗಳನ್ನು ಕಿತ್ತು ನರ್ಸರಿಯನ್ನು ಸುಸ್ಥಿತಿಯಲ್ಲಿಡಲಾಗುವುದು.
-ಜಾನಕಿ, ಹಿರಿಯ ಸಹಾಯಕ ನಿರ್ದೇಶಕರು, ದ.ಕ. ತೋಟಗಾರಿಕೆ ಇಲಾಖೆ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.