ಮಹಾಕಾಲೇಶ್ವರನ ವಿಗ್ರಹಕ್ಕಾಗಿ ಬೃಹತ್‌ ಏಕಶಿಲೆ ಆಗಮನ


Team Udayavani, May 18, 2020, 4:58 AM IST

ಮಹಾಕಾಲೇಶ್ವರನ ವಿಗ್ರಹಕ್ಕಾಗಿ ಬೃಹತ್‌ ಏಕಶಿಲೆ ಆಗಮನ

ಮಂಗಳೂರು: ಗುರುಪುರ ಗೋಳಿದಡಿಗುತ್ತಿನ ಚಾವಡಿಯ ಹತ್ತಿರದಲ್ಲಿರುವ ಫಲ್ಗುಣಿ ನದಿತಟದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಮಹಾಕಾಲೇಶ್ವರ ಬಯಲು ಆಲಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಶ್ರೀ ಮಹಾಕಾಲೇಶ್ವರ ದೇವರ ವಿಗ್ರಹ ರಚನೆಗಾಗಿ ಮೇ 11ರಂದು ಬೃಹತ್‌ ಏಕಶಿಲಾ ದಿಬ್ಬವನ್ನು ವೇಣೂರಿನಿಂದ ತರಲಾಯಿತು.

ಮುಂದಿನ ಎರಡು ಸಂವತ್ಸರದಲ್ಲಿ ಏಕಶಿಲೆಯಲ್ಲಿ ತಲೆಎತ್ತಲಿರುವ ಶಿವನ ಬಯಲು ದೇವಾಲಯವು ದಕ್ಷಿಣ ಭಾರತಕ್ಕೆ ಪ್ರಥಮವಾಗಲಿದೆ. ವೇಣೂರಿಗೆ ಹತ್ತಿರದ ಕಾಶಿಪಟ್ಣ ಗ್ರಾಮದ ರೋಡಿಯಲ್ಲಿ  ಹೊರತೆಗೆಯಲಾದ ಸರಿಸುಮಾರು 150 ಟನ್‌ ಭಾರದ 22 ಅಡಿ ಉದ್ದ, ಒಂಬತ್ತುವರೆ ಅಡಿ ಅಗಲ ಹಾಗೂ ಆರೂವರೆ ಅಡಿ ದಪ್ಪದ ಏಕಶಿಲಾ ದಿಬ್ಬವನ್ನು ಮೂಡುಬಿದಿರೆಯಿಂದ ಮಿಜಾರು, ಗಂಜಿಮಠ, ಕೈಕಂಬವಾಗಿ ಗುರುಪುರಕ್ಕೆ ಟ್ರಕ್‌ನಲ್ಲಿ ಸರಳ ಮೆರವಣಿಗೆಯಲ್ಲಿ ತರಲಾಯಿತು.

ನದಿ ತೀರದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಮಹಾಕಾಲೇಶ್ವರನ ಭವ್ಯಮೂರ್ತಿ 18 ಅಡಿ ಇದ್ದರೆ, ವಿಗ್ರಹದ ಪದ್ಮಪೀಠ ಎರಡು ಅಡಿ ಎತ್ತರವಿರುತ್ತದೆ. ಒಟ್ಟು 20 ಅಡಿ ಎತ್ತರದ ಈ ವಿಗ್ರಹ ಇರಲಿದೆ. ಭಕ್ತರು ದೇವಾಲಯದ ಮೇಲೇರಿ, ಆರು ಹಸ್ತಗಳಿರುವ ಶಿವನ ಸ್ಪರ್ಶಿಸಿ ಪೂಜಿಸಬ ಹುದು. ವೇಣೂರಿನ ಕೃಷಿಕ ಕುಟುಂಬದ ವೀರಪ್ಪ ಪೂಜಾರಿ ಮತ್ತು ಸಹೋದರರು ತಮ್ಮ ವರ್ಗ ಜಾಗದಲ್ಲಿರುವ ಈ ಶಿಲಾ ದಿಬ್ಬವನ್ನು ಉಚಿತವಾಗಿ ನೀಡಿದ್ದಾರೆ. ಬೆಳ್ತಂಗಡಿ ಲಾಯಿಲದ ಮಂಜುಶ್ರೀ ಶಿಲ್ಪಕಲಾ ಶಾಲೆಯ ವೆಂಕಟೇಶ ಆಚಾರ್ಯ,ಶಿಲ್ಪಕಲಾ ಅನುಭವಿ ತಂಡದವರು ಮುಂದಿನ ಒಂದೂವರೆ ವರ್ಷದಲ್ಲಿ ಭವ್ಯ ವಿಗ್ರಹ ನಿರ್ಮಿಸಲಿದ್ದಾರೆ. ಶ್ರೀ ಮಹಾಕಾಲೇಶ್ವರ ರಿಲೀಜಿಯಸ್‌, ಚಾರಿಟೆಬಲ್‌ ಟ್ರಸ್ಟ್‌ ಗೋಳಿದಡಿಗುತ್ತು ಗುರುಪುರ ಇದರ ಉಸ್ತುವಾರಿಯಲ್ಲಿ ನಿರ್ಮಾಣ ಗೊಳ್ಳಲಿರುವ ಶ್ರೀ ಮಹಾಕಾಲೇಶ್ವರ ಬಯಲು ಆಲಯಕ್ಕೆ ಚಿಕ್ಕಮಗಳೂರು ವೇದ ವಿಜ್ಞಾನ ಮಂದಿರದ ಕೆ.ಎಸ್‌. ನಿತ್ಯಾನಂದ ಮಾರ್ಗದರ್ಶಕರಾಗಿದ್ದಾರೆ. 2022ರಲ್ಲಿ ದೇವಾಲಯದ ನಿರ್ಮಾಣಕಾರ್ಯ ಪೂರ್ಣಗೊಳ್ಳಲಿದೆ ಎಂದು ಗೋಳಿದಡಿಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.