ರಸ್ತೆಯಂಚಿಗೆ ವಾಹನ ಇಳಿದರೆ ಎತ್ತಲು ಕ್ರೇನ್‌ ಬರಬೇಕು!

ವಿವಿಧೆಡೆ ಕಾಮಗಾರಿ ಬಳಿಕ ಹಾಕಲಾದ ಮಣ್ಣು ಕುಸಿತ

Team Udayavani, May 21, 2022, 10:12 AM IST

suratkal

ಸುರತ್ಕಲ್‌: ಮಳೆಗಾಲದ ಮುನ್ನ ಒಂದೆರಡು ತಿಂಗಳ ಹಿಂದೆ ರಸ್ತೆಯಂಚು, ರಸ್ತೆ ಮಧ್ಯೆ ಪೈಪ್‌ ಅಳವಡಿಕೆ, ಜಲಸಿರಿ, ಗ್ಯಾಸ್‌ ಪೈಪ್‌ ಮುಂತಾದ ಕಾಮಗಾರಿಗೆ ಅಗೆದು ಹಾಕಲಾದ ಪ್ರದೇಶ ಮಳೆಗಾಲದಲ್ಲಿ ಸಮಸ್ಯೆಯ ಅಗರವಾಗಿದೆ.

ಕಾಮಗಾರಿ ಬಳಿಕ ಹಲವೆಡೆ ಗುಂಡಿ ಮುಚ್ಚಿ ಸಮತಟ್ಟು ಮಾಡಲಾಗಿದ್ದರೂ ಮೇಲ್ಮೈ ಮಣ್ಣು ಹಾಕಿದ್ದರಿಂದ ಒಂದೇ ಮಳೆಗೆ ಮಣ್ಣು ಒಳಕ್ಕೆ ಕುಸಿದಿದೆ. ಎಚ್ಚರ ತಪ್ಪಿ ವಾಹನ ಸೈಡ್‌ ನೀಡಲು ಹೋದರೆ ಮೇಲೆತ್ತಲು ಕ್ರೇನ್‌ ಬಳಸಬೇಕಾದ ಅನಿವಾರ್ಯ ಎದುರಾಗಬಹುದು.

ಇನ್ನು ಹಲವೆಡೆ ಕಾಮಗಾರಿ ಅಪೂರ್ಣಗೊಂಡಿದೆ. ಸುರತ್ಕಲ್‌ ಹೆದ್ದಾರಿ 66ರ ಭಾರತ್‌ ಬ್ಯಾಂಕ್‌ ಮುಂಭಾಗ ಪಾದಚಾರಿಗಳು ನಡೆದಾಡಲು ಆಗುತ್ತಿಲ್ಲ. ಚರ್ಚ್‌ ಮುಂಭಾಗ ರಸ್ತೆ ಅಗೆದು ಹಾಕಲಾಗಿದ್ದು ಇನ್ನೂ ಕಾಮಗಾರಿ ಮುಗಿದಿಲ್ಲ. ಹಲವೆಡೆ ರಸ್ತೆಗಳನ್ನು ಅಗೆದು ಹಾಗೆಯೇ ಬಿಡಲಾಗಿದೆ. ಸುತ್ತ ಸುರಕ್ಷೆ ಟೇಪ್‌ ಕೂಡ ಅಳವಡಿಸಿಲ್ಲ.

ಅಪೂರ್ಣ ಕಾಮಗಾರಿ

ಇದೀಗ ಮಳೆ ಬಂದಾಗ ಚರಂಡಿ, ರಸ್ತೆಯ ಮೇಲೆ ನೀರು ಧಾರಾಕಾರವಾಗಿ ಹರಿ ಯತೊಡಗಿದೆ. ಗುಂಡಿಗಳನ್ನು ತೋಡಿರುವ ಭಾಗದಲ್ಲಿ ನೀರು ತುಂಬುತ್ತಿದ್ದು ಸುತ್ತಲೂ ಮಣ್ಣು ಕುಸಿಯುವ ಸಾಧ್ಯತೆಯಿದೆ. ಕೊಟ್ಟಾರ ಚೌಕಿ ಬಳಿ ರಾಜ ಕಾಲುವೆ ಕಾಮಗಾರಿ ವಿಳಂಬವಾಗಿದ್ದರಿಂದ ಹೆದ್ದಾರಿ ಬದಿವರೆಗೂ ಮಣ್ಣು ಕುಸಿದಿದೆ. ಹೊಸಬೆಟ್ಟು,ಎನ್‌ಐಟಿಕೆ ಮತ್ತಿತರ ಪ್ರದೇಶಗಳಲ್ಲಿ ಕಾಮಗಾರಿ ಅಪೂರ್ಣವಾಗಿದೆ. ಇನ್ನು ಮಳೆಗಾಲದ ಸಂದರ್ಭ ಕಾಮಗಾರಿಯನ್ನು ಪೂರ್ಣ ಗೊಳಿಸುವುದು ಅನುಮಾನವಾಗಿದೆ ಬೃಹತ್‌ ಹೊಂಡ ತೋಡಿರುವ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿಯಾದರೂ ಬ್ಯಾರಿಕೇಡ್‌ ಗಳನ್ನು ಅಳವಡಿಸಿ ರಾತ್ರಿಯ ವೇಳೆ ವಾಹನಗಳು ಪಾದಚಾರಿಗಳು ವಾಹನಗಳು ಅಪಾಯಕ್ಕೆ ಒಳಗಾಗುವುದನ್ನು ತಪ್ಪಿಸಬೇಕಿದೆ. ತತ್‌ಕ್ಷಣ ಗುಂಡಿ ಮುಚ್ಚಲು ಸಾಧ್ಯವಾಗದಿದ್ದರೂ ಅಗೆದು ಹಾಕಲಾದ ಸ್ಥಳದಲ್ಲಿ ವಾಹನ ಸವಾರರಿಗೆ ತಿಳಿಯುವಂತೆ ಅಪಾಯ ಸೂಚಕಗಳನ್ನು ಅಳವಡಿಸಿ ಮುನ್ನೆಚ್ಚರಿಕೆ ವಹಿಸುವಂತೆ ಮಾಡಬೇಕಿದೆ.

ಓಡಾಟಕ್ಕೆ ಅಯೋಗ್ಯವಾದ ಸರ್ವಿಸ್‌ ರಸ್ತೆ

ಸುರತ್ಕಲ್‌ ಜಂಕ್ಷನ್‌ನಿಂದ ಉಡುಪಿ ಕಡೆ ಹೋಗುವ ಸರ್ವಿಸ್‌ ರಸ್ತೆ ಉಪಯೋಗಕ್ಕೆ ಅಯೋಗ್ಯವಾಗಿ ಪರಿಣಮಿಸಿದೆ. ಕಾರು ಚಲಿಸಿದರೆ ಅಡಿ ಭಾಗಕ್ಕೆ ಹಾನಿಯಾಗುತ್ತಿದೆ ಮಾತ್ರವಲ್ಲ ದ್ವಿಚಕ್ರ ಸವಾರರು ವಾಹನ ಬ್ಯಾಲೆನ್ಸ್‌ ಮಾಡಲು ಕಷ್ಟ ಪಡುತ್ತಿದ್ದಾರೆ. ಎಂಆರ್‌ಪಿಎಲ್‌ ಸಹಿತ ವಿವಿಧೆಡೆ ಟ್ಯಾಂಕರ್‌, ಬಸ್‌ಗಳು ಇದರಲ್ಲೇ ಸಂಚರಿಸುವ ಕಾರಣ ತತ್‌ಕ್ಷಣ ಪಾಲಿಕೆಯಾದರೂ ತುರ್ತು ದುರಸ್ತಿ ಕೈಗೊಳ್ಳಬೇಕಿದೆ.

ಇತ್ಯರ್ಥಕ್ಕೆ ಕ್ರಮ

ವಿವಿಧ ಯುಜಿಡಿ ಪೈಪ್‌ ಅಳವಡಿಸುವ ಕಾಮಗಾರಿಗಾಗಿ ಮಣ್ಣು ಅಗೆದು ಹಾಕಿ ಜನಸಂಚಾರಕ್ಕೆ ತೊಡಕಾಗುತ್ತಿದೆ. ಸುರಿಯುತ್ತಿರುವ ಮಳೆಯಿಂದ ಸಮಸ್ಯೆಯೂ ಉದ್ಭವಿಸುತ್ತಿದೆ. ಜನವಸತಿ, ವಾಹನ ಓಡಾಟ ಪ್ರದೇಶಗಳಲ್ಲಿ ಯಾವುದಾದರೂ ಸಮಸ್ಯೆಗಳಿದ್ದರೆ ತ್ವರಿತವಾಗಿ ಇತ್ಯರ್ಥ ಪಡಿಸಲು ಪಾಲಿಕೆಯ ಆಧಿಕಾರಿಗಳಿಗೆ ಸೂಚಿಸಲಾಗುವುದು. -ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.