ವ್ಯಾಪಕ ಜಾಗೃತಿಯ ನಡುವೆಯೂ ಬಿದ್ದಿಲ್ಲ ಕಡಿವಾಣ

ಮಂಗಳೂರು ನಗರದಲ್ಲಿ ಡ್ರಗ್ಸ್‌ ದಂಧೆ

Team Udayavani, Sep 17, 2020, 6:00 AM IST

ವ್ಯಾಪಕ ಜಾಗೃತಿಯ ನಡುವೆಯೂ ಬಿದ್ದಿಲ್ಲ ಕಡಿವಾಣ

ಮಂಗಳೂರು: ಮಂಗಳೂರು ನಗರದಲ್ಲಿ ಕಳೆದ ಒಂದೂವರೆ ದಶಕದಿಂದ ಮಾದಕ ವಸ್ತುಗಳ ದಂಧೆ ನಡೆಯುತ್ತಿದ್ದು, 7 ವರ್ಷಗಳ ಹಿಂದೆ ಪದವಿಪೂರ್ವ ತರಗತಿಯ ವಿದ್ಯಾರ್ಥಿನಿಯೊಬ್ಬಳು ಡ್ರಗ್ಸ್‌ಗೆ ಬಲಿಯಾಗಿರುವುದು ಈಗ ಇತಿಹಾಸ. ಈ ಪಿಡುಗಿನ ಬಗ್ಗೆ ಸಾಕಷ್ಟು ಜಾಗೃತಿ ಅಭಿಯಾನಗಳು ನಡೆದಿದ್ದರೂ ಡ್ರಗ್ಸ್‌ ವ್ಯವಹಾರಕ್ಕೆ ಕಡಿವಾಣ ಬಿದ್ದಿಲ್ಲ. ಈಗಲೂ ಅದು ಎಗ್ಗಿಲ್ಲದೆ ಮುಂದುವರಿದಿದೆ.

ಡ್ರಗ್ಸ್‌ ಸೇವನೆಯಿಂದ ವ್ಯಕ್ತಿ ಮತ್ತು ಸಮಾಜದ ಮೇಲಾಗುವ ದುಷ್ಪರಿಣಾಮಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಒದಗಿಸುವ ಕಾರ್ಯ ಪೊಲೀಸ್‌ ತಂಡದಿಂದ ಪ್ರತಿ ವರ್ಷ ನಡೆಯುತ್ತಿದೆ. ವಿವಿಧ ಸಂಘ-ಸಂಸ್ಥೆಗಳು ಜಾಗೃತಿ ಸಭೆ, ಬೀದಿ ನಾಟಕಗಳನ್ನು ನಡೆಸಿವೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವೂ ಈ ದಿಶೆಯಲ್ಲಿ ಕಾರ್ಯೋನ್ಮುಖವಾಗಿ ವಿದ್ಯಾರ್ಥಿಗಳನ್ನು ಎಚ್ಚರಿಸುವ ಕೆಲಸ ಮಾಡಿದೆ.

2011ರಲ್ಲಿ ಡ್ರಗ್ಸ್‌ ಸೇವನೆಯ ಹವ್ಯಾಸ ಮೈಗೂಡಿಸಿಕೊಂಡಿದ್ದ ವಿದ್ಯಾರ್ಥಿನಿಯೋರ್ವಳನ್ನು ಮುಂಬಯಿಗೆ ಕರೆದೊಯ್ಯುವ ಯತ್ನ ಬೆಳಕಿಗೆ ಬಂದಾಗ ಬಹಳಷ್ಟು ಜಾಗೃತಿ ಕಾರ್ಯಕ್ರಮಗಳು ನಡೆದಿದ್ದವು. ಡ್ರಗ್ಸ್‌ ವ್ಯವಹಾರ ನಡೆಸುವವರ ವಿರುದ್ಧ ಗೂಂಡಾ ಕಾಯ್ದೆಯಂತಹ ಕಠಿನ ಕ್ರಮ ಜರಗಿಸುವುದಾಗಿ ಆಗ ಪೊಲೀಸ್‌ ಆಯುಕ್ತರು ಎಚ್ಚರಿಕೆ ನೀಡಿದ್ದರು. ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟಕ್ಕೆ ಸಂಬಂಧಿಸಿ ಶಿಕ್ಷಣ ಸಂಸ್ಥೆಗಳಿಂದ ಡಿಬಾರ್‌ ಅಥವಾ ಅಮಾನತುಗೊಂಡ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ನೀಡುವಂತೆಯೂ ಸೂಚಿಸಿದ್ದರು.

ಇಷ್ಟೆಲ್ಲ ಕ್ರಮಗಳು ಆಗಿದ್ದರೂ ಡ್ರಗ್ಸ್‌ ದಂಧೆಗೆ ಕಡಿವಾಣ ಬಿದ್ದಿರಲಿಲ್ಲ. 2013ರ ಫೆ. 3ರಂದು ಪದವಿನಂಗಡಿಯ ನಿವಾಸಿ, ಪದವಿಪೂರ್ವ ವಿದ್ಯಾರ್ಥಿನಿ ಡ್ರಗ್ಸ್‌ ಗುಂಗಿನಿಂದ ಹೊರ ಬರಲಾಗದೆ ಬೆಡ್‌ರೂಂನಲ್ಲಿ ನೇಣಿಗೆ ಶರಣಾದ ಘಟನೆ ಸಂಭವಿಸಿ ರಾಜ್ಯಾದ್ಯಂತ ಸುದ್ದಿ ಮಾಡಿತ್ತು. ಈ ಬಗ್ಗೆ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದನ್ನು ಹೊರತುಪಡಿಸಿದರೆ ಹೆಚ್ಚೇನೂ ಆಗಿಲ್ಲ.

ಈ ಘಟನೆಯಿಂದ ಮತ್ತೂಮ್ಮೆ ಜಿಲ್ಲೆಯ ಜನರಲ್ಲಿ ಡ್ರಗ್ಸ್‌ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಜನ ಜಾಗೃತಿ ಸಭೆಗಳು ನಡೆದಿದ್ದವು. ಪೊಲೀಸರು ಕೆಲವು ಶಿಕ್ಷಣ ಸಂಸ್ಥೆಗಳ ಆಸುಪಾಸಿನ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿದ್ದರು. ಆದರೆ ಆಗ ಅವರಿಗೆ ಸಿಕ್ಕಿದ್ದು, ಬೀಡಿ, ಸಿಗರೇಟು ಮಾತ್ರ; ಗಾಂಜಾ ಮತ್ತಿತರ ಮಾದಕ ದ್ರವ್ಯಗಳು ಎಲ್ಲಿಯೂ ಪತ್ತೆ ಆಗಿರಲಿಲ್ಲ. ಸುಮಾರು ಒಂದು ತಿಂಗಳು ಕಾಲ ಜಿಲ್ಲಾಡಳಿತ ಸ್ವಲ್ಪ ಹೆಚ್ಚು ಜಾಗೃತ ಸ್ಥಿತಿಯಲ್ಲಿತ್ತು. ಇದೀಗ ಬೆಂಗಳೂರಿನ ಡ್ರಗ್ಸ್‌ ಪ್ರಕರಣದಿಂದಾಗಿ ಮಂಗಳೂರಿನ ಡ್ರಗ್ಸ್‌ ವ್ಯವಹಾರವೂ ಮುನ್ನೆಲೆಗೆ ಬಂದಿದೆ.

ಕೋವಿಡ್ ಸಂಕಟ ಆರಂಭವಾದ ಬಳಿಕ ಡ್ರಗ್ಸ್‌ ಜಾಗೃತಿ ಕಾರ್ಯಕ್ರಮಗಳಿಗೆ ತಡೆ ಬಿದ್ದಿದೆ. ಅಲ್ಲದೆ ಈಗ ಶಾಲಾ ಕಾಲೇಜುಗಳೂ ತೆರೆದಿಲ್ಲ. ಜನ ಸೇರಿಸಿ ಕಾರ್ಯಕ್ರಮ ನಡೆಸಲು ಅವಕಾಶವೂ ಇಲ್ಲ. ಶಾಲಾ ಕಾಲೇಜು ಆರಂಭವಾದ ಬಳಿಕ ಜನ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದು. ಡ್ರಗ್ಸ್‌ ಸಂಬಂಧಿತ ದಾಳಿ ಕಾರ್ಯಾಚರಣೆ ನಿರಂತರ ನಡೆಯಲಿದೆ.
– ವಿಕಾಸ್‌ ಕುಮಾರ್‌, ಪೊಲೀಸ್‌ ಆಯುಕ್ತರು, ಮಂಗಳೂರು

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.