ಹಂಪನಕಟ್ಟೆಯಲ್ಲಿ ಎ. 27ರಂದು ಶಂಕುಸ್ಥಾಪನೆ

ಸ್ಥಳಾಂತರಗೊಂಡಿದ್ದ ಬೊಕ್ಕಪಟ್ಣ ಸರಕಾರಿ ಪ.ಪೂ. ಕಾಲೇಜಿಗೆ ನೂತನ ಸುಸಜ್ಜಿತ ಕಟ್ಟಡ

Team Udayavani, Apr 27, 2022, 10:30 AM IST

inauguration

ಮಹಾನಗರ: ಹಂಪನಕಟ್ಟೆಗೆ ನಾಲ್ಕು ವರ್ಷಗಳ ಹಿಂದೆ ಸ್ಥಳಾಂತರ ಗೊಂಡಿದ್ದ ಬೊಕ್ಕಪಟ್ಣ ಸರಕಾರಿ ಪದವಿಪೂರ್ವ ಕಾಲೇಜಿಗೆ ನೂತನ ಸುಸಜ್ಜಿತ ಕಟ್ಟಡದ ಕನಸು ಸಾಕಾರಗೊಳ್ಳುತ್ತಿದ್ದು, ನೂತನ ಕಾಲೇಜು ಕಟ್ಟಡದ ಶಂಕುಸ್ಥಾಪನೆ ಎ. 27ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಒಟ್ಟು 4.80 ಕೋ.ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡದ ಶಿಲಾನ್ಯಾಸವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ನೆರವೇರಿಸಲಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ಸುನಿಲ್‌ ಕುಮಾರ್‌, ಅಂಗಾರ ಎಸ್‌, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್‌ ಕುಮಾರ್‌ ಕಟೀಲು ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾಲೇಜು ಬೊಕ್ಕಪಟ್ಣದಿಂದ ಅಭ್ಯಾಸಿ ಪ್ರೌಢಶಾಲಾ ಆವರಣಕ್ಕೆ ಸ್ಥಳಾಂತರಗೊಂಡ ಬಳಿಕ ತರಗತಿ ಕೊಠಡಿಗಳ ಸಮಸ್ಯೆ ಎದುರಾಗಿತ್ತು. ಜತೆಗೆ ವಿದ್ಯಾರ್ಥಿಗಳ ಸಂಖ್ಯೆಯಲ್ಲೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗತೊಡಗಿತ್ತು. ಇದಲ್ಲದೆ ಕಾಲೇಜಿಗೆ ಸುಸಜ್ಜಿತ ಕಟ್ಟಡ ಕೊರತೆ ಹಿನ್ನೆಲೆಯಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಅಳವಡಿಸಿ ಉನ್ನತೀಕರಣಕ್ಕೆ ಸಮಸ್ಯೆಯಾಗಿತ್ತು. ಹಾಗಾಗಿ ಶಾಸಕ ವೇದವ್ಯಾಸ ಕಾಮತ್‌ ಅವರು ಕಾಲೇಜಿಗೆ ನೂತನ ಕಟ್ಟಡ ಮಂಜೂರು ಮಾಡುವಂತೆ ಆಗಿನ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿದ್ದ ಸುರೇಶ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿ ಶೀಘ್ರ ಮಂಜೂರುಗೊಳಿಸುವಂತೆ ಆಗ್ರಹಿಸಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು ಕಾಲೇಜಿಗೆ 4.80 ಕೋ.ರೂ.ವೆಚ್ಚದ ನೂತನ ಕಟ್ಟಡ ಮಂಜೂರುಗೊಳಿಸಿದ್ದರು.

ಕಲಾ, ವಾಣಿಜ್ಯ ತರಗತಿಗಳನ್ನು ಒಳಗೊಂಡಿದ್ದ ಸರಕಾರಿ ಪ.ಪೂ. ಕಾಲೇಜು ಸರಕಾರಿ ಅಭ್ಯಾಸಿ ಪ್ರೌಢಶಾಲಾ ಆವರಣಕ್ಕೆ 2018ರಲ್ಲಿ ಸ್ಥಳಾಂತರಗೊಂಡು 19 ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಿತ್ತು. ಬಳಿಕ ಸಾರ್ವಜನಿಕ ಕಂಪೆನಿಗಳ ಸಿಎಸ್‌ಆರ್‌ ನಿಧಿಯಿಂದ ಎರಡು ಕೊಠಡಿಗಳನ್ನು ನಿರ್ಮಿಸಲಾಗಿತ್ತು. 2019ರಲ್ಲಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿ 56, 2020ರಲ್ಲಿ 58 ಆಗಿತ್ತು. ಈ ವರ್ಷ ಈಗಾಗಲೇ ನೂರಾರು ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.

ನೂತನವಾಗಿ ನಿರ್ಮಾಣಗೊಳ್ಳಲಿರುವ ಕಾಲೇಜು ಕಟ್ಟಡ ನೆಲ, 2 ಅಂತಸ್ತುಗಳನ್ನು ಒಳಗೊಂಡಿದೆ. ನೆಲಅಂತಸ್ತಿನಲ್ಲಿ ಸರಕಾರಿ ಅಭ್ಯಾಸಿ ಪ್ರೌಢಶಾಲೆ ಕಾರ್ಯಾಚರಿಸಲಿದ್ದು, ಮೇಲಿನ ಎರಡು ಅಂತಸ್ತು ಕಾಲೇಜು ಕಾರ್ಯಾಚರಿಸಲಿದೆ. ಪ್ರಸ್ತುತ ಇರುವ ಕಲಾ ಮತ್ತು ವಾಣಿಜ್ಯ ತರಗತಿಗಳ ಜತೆಗೆ ಮುಂದಿನ ವರ್ಷಗಳಲ್ಲಿ ವಿಜ್ಞಾನ ತರಗತಿಯನ್ನು ಕೂಡ ಇಲ್ಲಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. ನೂತನ ಕಟ್ಟಡ ಕಲಾ, ವಾಣಿಜ್ಯ, ವಿಜ್ಞಾನ ತರಗತಿಗಳಿಗೆ ಸುಸುಜ್ಜಿತ ಕೊಠಡಿ, ಲ್ಯಾಬ್‌, ಗ್ರಂಥಾಲಯ, ಕಚೇರಿ, ಪ್ರಾಂಶುಪಾಲರ, ಉಪನ್ಯಾಸಕರ ಕೊಠಡಿಗಳು, ವಾಶ್‌ರೂಂಗಳನ್ನು ಒಳಗೊಳ್ಳಲಿದೆ.

ಸುಸಜ್ಜಿತ ಕಟ್ಟಡ ನಿರ್ಮಾಣ ಸಂಕಲ್ಪ

ಹಂಪನಕಟ್ಟೆಯ ಸರಕಾರಿ ಅಭ್ಯಾಸಿ ಪ್ರೌಢಶಾಲೆಯ ಆವರಣದಲ್ಲಿ ಕಾರ್ಯಾಚರಿಸುತ್ತಿರುವ ಬೊಕ್ಕಪಟ್ಣ ಸರಕಾರಿ ಪ.ಪೂ. ಕಾಲೇಜಿಗೆ ಸುಸಜ್ಜಿತ ಕಟ್ಟಡ ನಿರ್ಮಾಣದ ಬಗ್ಗೆ ಹಿಂದಿನ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ 4.80 ಕೋ.ರೂ. ವೆಚ್ಚದ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದು ಅನುಮೋದನೆಗೊಂಡು ಇದೀಗ ನೂತನ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಶೀಘ್ರದಲ್ಲಿ ಇದರ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ದೊರಕುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು. -ವೇದವ್ಯಾಸ ಕಾಮತ್‌, ಶಾಸಕರು, ಮಂಗಳೂರು ದಕ್ಷಿಣ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.