ಕೋವಿಡ್ ಸಾವಿನ ಪ್ರಕರಣ ಹೆಚ್ಚಳ; ವಿದ್ಯುತ್‌ ಚಿತಾಗಾರದ ಕೊರತೆ ನೀಗಿಸಲು ಪಾಲಿಕೆ ವ್ಯವಸ್ಥೆ


Team Udayavani, Jul 28, 2020, 10:59 AM IST

MLRmuncipalti

ಸಾಂದರ್ಭಿಕ ಚಿತ್ರ

ಮಹಾನಗರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಶವಗಳ ಅಂತ್ಯಸಂಸ್ಕಾರ ನೆರವೇರಿಸಲು ಸೂಕ್ತ ಚಿತಾಗಾರದ ಕೊರತೆ ಉಂಟಾಗಿದ್ದು, ಈ ಸಮಸ್ಯೆ ನಿವಾರಿಸಲು ಮನಪಾ ತುರ್ತು ಕ್ರಮಕ್ಕೆ ಮುಂದಾಗಿದೆ. ಪ್ರಸ್ತುತ ಜಿಲ್ಲೆಯ ಯಾವುದೇ ಪ್ರದೇಶದವರು ಕೂಡ ಕೊರೊನಾದಿಂದಾಗಿ ಮೃತಪಟ್ಟರೆ ಅವರ ಅಂತ್ಯಸಂಸ್ಕಾರ ಹಿಂದೂ ಧರ್ಮದ ವಿಧಿ-ವಿಧಾನದಂತೆ ನಡೆಯುವುದಾದರೆ ಬೋಳೂರಿನಲ್ಲಿರುವ ವಿದ್ಯುತ್‌ ಚಿತಾಗಾರದಲ್ಲಿಯೇ ನಡೆಸಲಾಗುತ್ತಿದೆ. ಹೆಚ್ಚು ಸುರಕ್ಷಿತ ಎಂಬ ಕಾರಣಕ್ಕೆ ವಿದ್ಯುತ್‌ ಚಿತಾಗಾರವನ್ನೇ ಬಳಸಲಾಗುತ್ತಿದೆ. ಆದರೆ ಒಂದು ವಾರದಿಂದ ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾದಿಂದಾಗಿ ಸರಾಸರಿ 4-5 ಮಂದಿ ಮೃತಪಡುತ್ತಿದ್ದಾರೆ. ನಗರದಲ್ಲಿ ಇರುವುದು ಒಂದೇ ವಿದ್ಯುತ್‌ ಚಿತಾಗಾರ. ವಿದ್ಯುತ್‌ ಚಿತಾಗಾರದಲ್ಲಿ ಒಂದು ಶವ ಸುಟ್ಟ ಅನಂತರ ಇನ್ನೊಂದು ಶವ ಸುಡಲು ಕನಿಷ್ಠ 2 ಗಂಟೆಗಳ ಕಾಲ ಕಾಯಬೇಕು. ಅಲ್ಲಿನ ಶಾಖದಿಂದಾಗಿ ಕೂಡಲೇ ಇನ್ನೊಂದು ಶವ ಸುಡಲು ಹತ್ತಿರ ಹೋಗುವುದಕ್ಕೆ ಸಾಧ್ಯವಾಗುವುದಿಲ್ಲ. ಇದರಿಂದಾಗಿ ಸಮಸ್ಯೆಯಾಗಿದೆ. ಇದಕ್ಕಾಗಿ ಮಹಾನಗರ ಪಾಲಿಕೆ ಬೋಳೂರಿನಲ್ಲಿರುವ ವಿದ್ಯುತ್‌ ಚಿತಾಗಾರದಲ್ಲಿ ಏಕಕಾಲದಲ್ಲೇ ಅಥವಾ ಕಡಿಮೆ ಸಮಯದ ಅಂತರದಲ್ಲಿ 2 ಶವ ಗಳನ್ನು ಸುಡಲು ಸಾಧ್ಯವಾಗುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.

ಸಂಬಂಧಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ
ಕೋವಿಡ್ ಸೋಂಕಿನಿಂದ ಮೃತ ಪಟ್ಟವರ ಅಂತಿಮ ದರ್ಶನ ಪಡೆಯಲು ಕುಟುಂಬಿಕರಿಗೆ ಅವಕಾಶವಿದೆ. ಸಾಮಾನ್ಯ ವಾಗಿ ಮೃತದೇಹವನ್ನು ಚಿತಾಗಾರ ಅಥವಾ ದಫ‌ನ ಸ್ಥಳಕ್ಕೆ ತೆಗೆದುಕೊಂಡು ಹೋಗುವ ಮೊದಲು ಆ್ಯಂಬುಲೆನ್ಸ್‌ ಗೆ ಹಾಕುವ ಸಂದರ್ಭ ಕುಟುಂಬಿಕರು ಅಂತಿಮ ದರ್ಶನ ಪಡೆಯಬಹುದು. 1ರಿಂದ 2 ಮೀ. ದೂರದಲ್ಲಿ ನಿಂತು ದರ್ಶನ ಪಡೆಯಬಹುದು. ಆದರೆ ಮಾಸ್ಕ್ ಧರಿಸಿರಬೇಕು. ಪಿಪಿಇ ಕಿಟ್‌ ಧರಿಸಬೇಕಾಗಿಲ್ಲ. ಮೃತದೇಹದ ಮುಖದ ಭಾಗವನ್ನು ಪಾರದರ್ಶಕವಾದ ಪ್ಲಾಸ್ಟಿಕ್‌ನಿಂದ ಕವರ್‌ ಮಾಡಲಾಗಿರುತ್ತದೆ. ಹಾಗಾಗಿ, ಮುಖ ನೋಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಚಂದ್ರ ಬಾಯರಿ ಅವರು “ಸುದಿನ’ಕ್ಕೆ ತಿಳಿಸಿದ್ದಾರೆ.

ಬೋಳೂರು ಚಿತಾಗಾರಕ್ಕೆ ಅಗತ್ಯ ವ್ಯವಸ್ಥೆ
ಬೋಳೂರಿನ ವಿದ್ಯುತ್‌ ಚಿತಾಗಾರದಲ್ಲಿ ಏಕ ಕಾಲಕ್ಕೆ 2 ಶವಗಳನ್ನು ದಹನ ಮಾಡಲು ಬೇಕಾದ ವ್ಯವಸ್ಥೆಯನ್ನು ಆದಷ್ಟು ಬೇಗ ಮಾಡಲಾಗುವುದು. ಇದಕ್ಕೆ 65 ಲ.ರೂ. ವೆಚ್ಚದ ಕಾಮಗಾರಿ ನಡೆಸಲು ಟೆಂಡರ್‌ ಪ್ರಕ್ರಿಯೆ ನಡೆದಿದೆ. ಅಲ್ಲದೆ ನಂದಿಗುಡ್ಡೆಯಲ್ಲಿ ಸುಮಾರು 1.15 ಕೋ.ರೂ. ವೆಚ್ಚದಲ್ಲಿ ಇನ್ನೊಂದು ಹೊಸ ವಿದ್ಯುತ್‌ ಚಿತಾಗಾರವನ್ನು ನಿರ್ಮಿಸಲಾಗುವುದು. ಇದಕ್ಕೆ ಪ್ರತ್ಯೇಕ ಕಟ್ಟಡವೂ ನಿರ್ಮಾಣವಾಗಬೇಕಿರುವುದರಿಂದ ಈ ಯೋಜನೆ ಪೂರ್ಣಗೊಳ್ಳಲು ಹೆಚ್ಚು ಕಾಲಾವಧಿಬೇಕಾಗುತ್ತದೆ.
– ದಿವಾಕರ್‌ ಪಾಂಡೇಶ್ವರ, ಮೇಯರ್‌, ಮಹಾನಗರ ಪಾಲಿಕೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.