ಕೈಗಾರಿಕೆಗಳನ್ನು ಅಡಕತ್ತರಿಯಲ್ಲಿ ನಿಲ್ಲಿಸಿದ ಪಾಲಿಕೆ ಆಸ್ತಿ ತೆರಿಗೆ!

ಖಾತಾ ಸಿಗಬೇಕಾದರೆ ಪಾಲಿಕೆ ತೆರಿಗೆ ಪಾವತಿಗೆ ಸೂಚನೆ

Team Udayavani, Apr 18, 2022, 9:58 AM IST

cooperation

ಮಹಾನಗರ: ಕೊರೊನಾ ಸಂಕಷ್ಟದಿಂದ ಪಾರಾಗಿ ವ್ಯಾಪಾರ-ವಹಿ ವಾಟು ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿಯೇ ಮಂಗಳೂರು ಪಾಲಿಕೆಯ ಸ್ವಯಂ ಘೋಷಿತ ಆಸ್ತಿ ತೆರಿಗೆ (ಎಸ್‌ಎಎಸ್‌) ನಿಯಮಾವಳಿಯು ಇದೀಗ ಬೈಕಂಪಾಡಿಯ ಕೈಗಾರಿಕೆಗಳನ್ನು ಅಡಕತ್ತರಿಯಲ್ಲಿ ನಿಲ್ಲಿಸಿದೆ!

ಕೆಐಎಡಿಬಿಗೆ ವಾರ್ಷಿಕವಾಗಿ ಹಣ ಪಾವತಿ ಮಾಡುತ್ತಿದ್ದ ಕೈಗಾರಿಕೆಗಳು ಇದೀಗ ಖಾತಾ ಪಡೆಯಲು ಪಾಲಿಕೆ ಯನ್ನು ವಿಚಾರಿಸಿದರೆ 2008ರಿಂದ ತಮ್ಮ ಸ್ವಯಂಘೋಷಿತ ಆಸ್ತಿ ತೆರಿಗೆ ಬಾಕಿ ಉಳಿಸಿ ಕೊಂಡ ಸಂಗತಿ ಮುನ್ನೆಲೆಗೆ ಬಂದಿದೆ. ಬ್ಯಾಂಕ್‌ ಲೋನ್‌, ಕೈಗಾರಿಕೆ ಮಾರಾಟ ಸಹಿತ ಕೆಲವು ಸಂದರ್ಭಕ್ಕೆ ಅಗತ್ಯವಾಗಿರುವ ಖಾತಾ ಪಡೆಯಲು ಇದೀಗ ಕೈಗಾರಿಕೆಯವರು ತೆರಿಗೆ ಹೊರೆ ಎದುರಿಸುತ್ತಿದ್ದಾರೆ.

ಏನಿದು ಸಮಸ್ಯೆ?

ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾ ಮಾಡ ಬೇಕಾದ ಹಿನ್ನೆಲೆಯಲ್ಲಿ ಕೆಲವು ಕೈಗಾರಿಕೆ ಗಳ ಮಾಲಕರು ಪಾಲಿಕೆಗೆ ಬಂದಾಗ ಆಶ್ಚರ್ಯ ಕಾದಿತ್ತು. 2008ರಿಂದ ಸ್ವಯಂ ಘೋಷಿತ ಆಸ್ತಿ ತೆರಿಗೆ ಜಾರಿಗೆ ಬಂದಿದ್ದು, ಬೈಕಂಪಾಡಿ ವ್ಯಾಪ್ತಿಯ ಕೈಗಾರಿಕೆಗಳು ಇದನ್ನು ಪಾವತಿಸಿಲ್ಲ; ಹೀಗಾಗಿ ಇ ಖಾತಾ ಸಿಗಬೇಕಾದರೆ 2008 ರಿಂದ ಇಲ್ಲಿಯವರೆಗೆ ದಂಡ ಸಹಿತ ಆಸ್ತಿ ತೆರಿಗೆ ಪಾವತಿಸಬೇಕು. ಇಲ್ಲವಾದರೆ ಖಾತಾ ಸಹಿತ ಯಾವುದೇ ಪ್ರಯೋಜನ ಲಭಿಸುವುದಿಲ್ಲ.

2 ವರ್ಷ ಪಾವತಿಗೆ ಅವಕಾಶ ಕೊಡಿ

2008ರಿಂದ ತೆರಿಗೆ ಪಾವತಿಸುವುದಾದರೆ ಕೈಗಾರಿಕೆಗಳು ಲಕ್ಷಾಂತರ ರೂ. ಪಾವತಿಸ ಬೇಕು; ಸದ್ಯ ಕೈಗಾರಿಕೆಗಳು ಸಂಕಷ್ಟ ಕಾಲ ದಿಂದ ಚೇತರಿಕೆಗೆ ಬರುವ ಹಂತದಲ್ಲಿವೆ. ಈ ವೇಳೆ ತೆರಿಗೆ ಹೊರೆ ಸರಿಯಲ್ಲ. ಸರಕಾರದ ಅಂಗ ಸಂಸ್ಥೆ ಕೆಐಎಡಿಬಿಗೆ ವಾರ್ಷಿಕವಾಗಿ ಕೈಗಾರಿಕೆಯಿಂದ ಹಣ ನೀಡಲಾಗುತ್ತಿದೆ. ಇಷ್ಟಿದ್ದರೂ 2 ವರ್ಷಗಳ ತೆರಿಗೆ ಪಾವತಿಸಿದರೆ ಖಾತಾ ನೀಡುವಂತೆ ಎಂದು ಕೈಗಾರಿಕೆಯವರು ಪಾಲಿಕೆಯನ್ನು ಕೋರಿದ್ದಾರೆ.

ಬಂದ್‌ ಮಾಡಬೇಕಾದ ಪರಿಸ್ಥಿತಿ

ಭಾರತೀಯ ಕೈಗಾರಿಕೆ ಒಕ್ಕೂಟದ ಮಂಗಳೂರು ಘಟಕದ ಅಧ್ಯಕ್ಷ ಗೌರವ್‌ ಹೆಗ್ಡೆ ಅವರು ‘ಸುದಿನ’ ಜತೆಗೆ ಮಾತನಾಡಿ, ಬೈಕಂಪಾಡಿಯಲ್ಲಿ ಕೆಐಎಡಿಬಿ ವ್ಯಾಪ್ತಿಯ ಕೈಗಾರಿಕೆ ಪ್ರದೇಶದ ಎಲ್ಲ ನಿರ್ವಹಣೆಯನ್ನು ಕೆಐಎಡಿಬಿಯೇ ನಡೆಸುತ್ತಿದೆ. ಅನುಮೋದನೆ ಕೂಡ ಅಲ್ಲಿಂದಲೇ ಪಡೆಯಲಾಗುತ್ತಿದೆ. ಪಾಲಿಕೆ ಡೋರ್‌ ನಂಬರ್‌ ಕೂಡ ನೀಡಿಲ್ಲ. ಹೀಗಾಗಿ ಪಾಲಿಕೆಗೆ ತೆರಿಗೆ ಪಾವತಿ ವಿಚಾರ ಬಂದಿಲ್ಲ. ಆದರೆ ಪಾಲಿಕೆಗೆ ಗರಿಷ್ಠ ನೀರಿನ, ತ್ಯಾಜ್ಯ ತೆರಿಗೆಯನ್ನು ಕೈಗಾರಿಕೆಗಳು ಪಾವತಿ ಸುತ್ತಿವೆ. ಇದೀಗ ಖಾತಾ ಪಡೆಯುವ ಸಂದರ್ಭ ಪಾಲಿಕೆಯಿಂದ ತೆರಿಗೆ ಪಾವತಿಸುವ ಬಗ್ಗೆ ಸೂಚನೆ ಬಂದಿದೆ. 2008ರಿಂದ ಇಲ್ಲಿಯವರೆಗೆ ದಂಡ ಸಹಿತ ತೆರಿಗೆ ಪಾವತಿಸಿದರೆ ಕೋಟ್ಯಂತರ ರೂ. ನೀಡಿ ಬೈಕಂಪಾಡಿಯ ಕೈಗಾರಿಕೆಗಳು ಮುಚ್ಚಬೇಕಾಗುತ್ತದೆ. 20 ಸಾವಿರ ಉದ್ಯೋಗಿಗಳು ಬೀದಿಗೆ ಬರುವ ಪರಿಸ್ಥಿತಿ ಇದೆ. ಹೀಗಾಗಿ ಕೈಗಾರಿಕೆಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಿ 2 ವರ್ಷಗಳ ತೆರಿಗೆ ಪಾವತಿಸಿದರೆ ಖಾತಾ ನೀಡಲು ಅನುಕೂಲ ಕಲ್ಪಿಸಬೇಕಾಗಿದೆ’ ಎಂದರು.

ತೆರಿಗೆ ರಿಯಾಯಿತಿಗೆ ಮನವಿ

ಕೈಗಾರಿಕೆಗಳು ಈಗತಾನೆ ಚೇತರಿಕೆಯ ಹಂತಕ್ಕೆ ಬರುತ್ತಿವೆ. ಈ ಸಂದರ್ಭ ಖಾತಾ ಪಡೆಯುವ ಕಾರಣದಿಂದ ಪಾಲಿಕೆಯನ್ನು ಸಂಪರ್ಕಿಸಿದರೆ ಎಸ್‌ಎಎಸ್‌ ಬಾಕಿ ಇರುವುದನ್ನು ಪಾವತಿಸಲು ತಿಳಿಸಿರುವುದು, ಕೈಗಾರಿಕೆಯವರಿಗೆ ದೊಡ್ಡ ಹೊಡೆತ ನೀಡಿದೆ. ಕೆಐಎಡಿಬಿಗೆ ನಿಯಮಿತವಾಗಿ ನಾವು ಹಣ ಪಾವತಿ ಮಾಡಿದ್ದೇವೆ. ಆದರೆ ಈಗ ಪಾಲಿಕೆಯಿಂದ ತೆರಿಗೆ ಹೊರೆ ಬಿದ್ದಿದೆ. ಸಾವಿರಾರು ಉದ್ಯೋಗಿಗಳಿಗೆ ಅವಕಾಶ ಕಲ್ಪಿಸಿದ ಕೈಗಾರಿಕೆಗಳ ರಕ್ಷಣೆಗಾಗಿ ತೆರಿಗೆಯಲ್ಲಿ ರಿಯಾಯಿತಿ ಪ್ರಕಟಿಸಬೇಕಾಗಿದೆ. 2 ವರ್ಷಗಳ ತೆರಿಗೆ ಪಾವತಿಸಲು ನಾವು ಬದ್ಧರಾಗಿದ್ದೇವೆ. -ಐಸಾಕ್‌ ವಾಜ್‌, ಅಧ್ಯಕ್ಷರು, ಕೆನರಾ ಇಂಡಸ್ಟ್ರೀಸ್‌ ಅಸೋಸಿಯೇಶನ್‌

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.