ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವು : ವೈದ್ಯರ ನಿರ್ಲಕ್ಷ್ಯ ಕಾರಣ: ಕುಟುಂಬಸ್ಥರ ಆರೋಪ
Team Udayavani, May 29, 2020, 9:10 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದುಬಾೖಯಿಂದ ಬಂದು ಕ್ವಾರಂಟೈನ್ನಲ್ಲಿದ್ದ ಗರ್ಭಿಣಿಗೆ ವೈದ್ಯರಿಂದ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎಂದು ಆಕೆ ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಈ ಆರೋಪ ಸುಳ್ಳು ಎಂದಿರುವ ಲೇಡಿಗೋಶನ್ ಆಸ್ಪತ್ರೆಯ ವೈದ್ಯರು, ಮಗುವಿನ ಕುಂಠಿತ ಬೆಳವಣಿಗೆ ಹಾಗೂ ತಾಯಿಯ ಪ್ರಾಣಕ್ಕೆ ಅಪಾಯವಿದ್ದ ಕಾರಣಕ್ಕೆ ಕುಟುಂಬದವರೊಂದಿಗೆ ಚರ್ಚಿಸಿ ಅನಂತರವೇ “ಟರ್ಮಿನೇಶನ್ ಡೆಲಿವರಿ’ ಮಾಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ದುಬಾೖಯಿಂದ ಮೇ 12ರಂದು ಮಂಗಳೂರಿಗೆ ಆಗಮಿಸಿದ್ದ ಮಂಗಳೂರು ಮೂಲದ ಗರ್ಭಿಣಿ ಖಾಸಗಿ ಹೊಟೇಲ್ನಲ್ಲಿ ಕ್ವಾರಂಟೈನ್ ಆಗಿದ್ದರು. ವೈದ್ಯರ ಪ್ರಕಾರ, ಆಕೆಯ ಮೊದಲ ಗಂಟಲ ದ್ರವ ಮಾದರಿ ವರದಿ ಬಂದ ತತ್ಕ್ಷಣ 5ನೇ ದಿನದಿಂದಲೇ ಲೇಡಿಗೋಶನ್ ಆಸ್ಪತ್ರೆ ಮತ್ತು ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞರು ಗರ್ಭಿಣಿಯ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ. ಆಗ ಆಕೆಯಲ್ಲಿ ಅಧಿಕ ರಕ್ತದೊತ್ತಡ ಇರುವುದೂ ಪತ್ತೆಯಾಗಿದ್ದು, ಇದೇ ಕಾರಣದಿಂದ ಮಗುವಿನ ಬೆಳವಣಿಗೆಯೂ ಕುಂಠಿತಗೊಂಡಿತ್ತು. ಬಳಿಕ ಮೇ 26ರಂದು ಗರ್ಭಿಣಿಯನ್ನು ಕ್ವಾರಂಟೈನ್ನಿಂದ ಬಿಡುಗಡೆಗೊಳಿಸಲಾಗಿದ್ದು, ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಅದೇದಿನ ಆಕೆಗೆ ಸ್ಕ್ಯಾನಿಂಗ್ ಕೂಡ ನಡೆಸಲಾಗಿದೆ. ಸ್ಕ್ಯಾನಿಂಗ್ನಲ್ಲಿ ಮಗು ಜೀವಂತ ಇರುವುದು ಗೊತ್ತಾಗಿತ್ತು ಎನ್ನುವುದು ವೈದ್ಯರ ವಾದ.
ಆದರೆ ಮಗುವಿನ ಬೆಳವಣಿಗೆ ಕುಂಠಿತವಾಗಿರುವುದರಿಂದ ಮತ್ತು ತಾಯಿಯಲ್ಲಿ ಅಧಿಕ ರಕ್ತದೊತ್ತಡವಿರುವ ಪರಿಣಾಮ ಮಗುವಿನ ಮುಂದಿನ ಬೆಳವಣಿಗೆಗೂ ಸಮಸ್ಯೆಯಾಗುವುದನ್ನರಿತು ಹಾಗೂ ತಾಯಿಯ ಜೀವ ಉಳಿಯಬೇಕಾದರೆ ಮಗುವನ್ನು “ಟರ್ಮಿನೇಶನ್ ಡೆಲಿವರಿ’ ಮುಖಾಂತರ ತೆಗೆಯುವುದು ಅನಿವಾರ್ಯ ವಾದ ಹಿನ್ನೆಲೆಯಲ್ಲಿ ವೈದ್ಯರು ಆಕೆಯ ಕುಟುಂಬಿಕರೊಂದಿಗೆ ಚರ್ಚಿಸಿ ಮೇ 27ರಂದು “ಟರ್ಮಿನೇಶನ್ ಡೆಲಿವರಿ’ ಮುಖಾಂತರ ಮಗುವನ್ನು ಹೊರ ತೆಗೆದಿ ದ್ದಾರೆ. ಈ ವೇಳೆ ಭ್ರೂಣದ ಜೀವ ಹೋಗಿತ್ತು. ಈ ಬಗ್ಗೆ ಕುಟುಂಬದವರಿಗೆ ಮನವರಿಕೆ ಮಾಡಲಾಗಿದೆ ಎಂದು ಲೇಡಿಗೋಶನ್ ಆಸ್ಪತ್ರೆ ವೈದ್ಯರೋರ್ವರು ತಿಳಿಸಿದ್ದಾರೆ.
ಕುಟುಂಬಸ್ಥರ ಆರೋಪ
ಕ್ವಾರಂಟೈನ್ನಲ್ಲಿ ಇದ್ದಾಗ ವೈದ್ಯರು ಆಕೆ ಗರ್ಭಿಣಿ ಎಂದು ಹೆಚ್ಚಿನ ಕಾಳಜಿ ವಹಿಸಿದ್ದರೆ ಹೀಗಾಗುತ್ತಿರಲಿಲ್ಲ. ಟರ್ಮಿನೇಶನ್ ಡೆಲಿವರಿಗೂ ಒಂದು ಗಂಟೆ ಮೊದಲು ಮಗು ಹೊಟ್ಟೆಯಲ್ಲೇ ಸತ್ತು ಹೋಗಿತ್ತು ಎಂದಿದ್ದಾರೆ.
ಅಪಾರ್ಟ್ಮೆಂಟ್ಗೆ ಮನಪಾ ನೋಟಿಸ್
ಕ್ವಾರಂಟೈನ್ನಲ್ಲಿದ್ದ ಗರ್ಭಿಣಿಯನ್ನು ಆಕೆ ವಾಸಿಸುತ್ತಿದ್ದ ಅಪಾರ್ಟ್ಮೆಂಟ್ನೊಳಗೆ ಪ್ರವೇಶಿಸಲು ನಿರಾಕರಿಸಿದ್ದ ಕಾರಣಕ್ಕೆ ಶಿವಬಾಗ್ನ ಅಪಾರ್ಟ್ ಮೆಂಟ್ಗೆ ಮಹಾನಗರ ಪಾಲಿಕೆ ನೋಟಿಸ್ ಜಾರಿಗೊಳಿಸಿದೆ. ಮೂರು ದಿನದೊಳಗೆ ಸೂಕ್ತ ಸಮಜಾಯಿಷಿ ನೀಡಬೇಕು. ಜತೆಗೆ ತತ್ಕ್ಷಣಕ್ಕೆ ಅಪಾರ್ಟ್ ಮೆಂಟ್ಗೆ ಹೋಗಲು ಆಕೆಗೆ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದರೆ ಅಪಾರ್ಟ್ಮೆಂಟ್ನ ಅಸೋಸಿಯೇಶನ್ ವಿರುದ್ಧ ಕಾನೂನು ಕ್ರಮ ಕೈಕೊಳ್ಳ ಲಾಗುವುದು ಎಂದು ನೋಟಿಸ್ನಲ್ಲಿ ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!