ಬೂತ್‌ ಹೊರಗೆ ಮಾಹಿತಿ ಕೇಂದ್ರ: ಸೆಂಥಿಲ್‌


Team Udayavani, May 10, 2018, 6:00 AM IST

s-3.jpg

ಮಂಗಳೂರು: ಜಿಲ್ಲೆಯಲ್ಲಿ ಶೇ. 80ರಷ್ಟು ಮತದಾರರಿಗೆ ಭಾವಚಿತ್ರವಿರುವ ಚೀಟಿ ವಿತರಿಸಲಾಗಿದೆ. ಮತದಾರರ ಚೀಟಿ ಇಲ್ಲದಿದ್ದರೂ ಮತದಾರರ ಗುರುತು ಚೀಟಿ ತೋರಿಸಿ ಅಥವಾ ಚುನಾವಣಾ ಆಯೋಗ ನಿಗದಿಪಡಿಸಿದ ದಾಖಲೆ ತೋರಿಸಿ ಮತದಾನ ಮಾಡಬಹುದಾಗಿದೆ. ಮತದಾರರಿಗೆ ನೆರವಾಗಲು ಮತಗಟ್ಟೆಯ ಹೊರಭಾಗದಲ್ಲಿ ಮಾಹಿತಿ ಕೇಂದ್ರ ಸ್ಥಾಪಿಸಲಾಗುವುದು. ಇದರಲ್ಲಿ ಆಯಾ ಮತಗಟ್ಟೆಯ ಕ್ಷೇತ್ರದ ಬಗ್ಗೆ ವಿವರ, ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಲಗತ್ತಿಸಲಾಗುವುದು ಎಂದು ದ.ಕ. ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಶಶಿಕಾಂತ ಸೆಂಥಿಲ್‌ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಪರೀಕ್ಷಾ ಮತ
ಮತದಾರರು ವಿವಿಪ್ಯಾಟ್‌ನಲ್ಲಿ ಮತ ಚಲಾವಣೆ ಖಾತ್ರಿಪಡಿಸಿಕೊಳ್ಳುವಾಗ ತನ್ನ ಆಯ್ಕೆಯ ಅಭ್ಯರ್ಥಿಗೆ ಮತ ಚಲಾವಣೆ ಆಗಿಲ್ಲವೆಂದು ದೂರು ನೀಡಿದರೆ ಮತಗಟ್ಟೆಯ ಅಧ್ಯಕ್ಷಾಧಿಕಾರಿ ಮತದಾರನಿಂದ ಘೋಷಣೆ ಯನ್ನು ಪಡೆದು ಪರೀಕ್ಷೆ ಮತ (ಟೆಸ್ಟ್‌ ಓಟು) ಮಾಡಲು ಅವಕಾಶ ಕಲ್ಪಿಸುತ್ತಾರೆ. ಇದನ್ನು ಅಧ್ಯಕ್ಷಾಧಿ ಕಾರಿ ಹಾಗೂ ಚುನಾವಣಾ ಏಜೆಂಟ್‌ ಸಮ್ಮುಖ ದಲ್ಲಿ ನಡೆಸಲಾಗುವುದು. ಮತದಾರ ಸುಳ್ಳು ಮಾಹಿತಿ ನೀಡಿದಲ್ಲಿ ಐಪಿಸಿ ಕಲಂ 177ರ ಪ್ರಕಾರ 1,000 ರೂ. ದಂಡ ಹಾಗೂ ಜೈಲು ಶಿಕ್ಷೆ ಇದೆ ಎಂದವರು ಹೇಳಿದರು.

ಕ್ಲಿಷ್ಟ ಮತಗಟ್ಟೆಗಳು
ಜಿಲ್ಲೆಯಲ್ಲಿರುವ ಒಟ್ಟು 517 ಕ್ಲಿಷ್ಟ ಮತಗಟ್ಟೆಗಳ ಪೈಕಿ 97 ಮತಗಟ್ಟೆಗಳಿಗೆ ವೆಬ್‌ ಕೆಮರಾಗಳನ್ನು ಅಳವಡಿಸ ಲಾಗಿದೆ. 221 ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್ಸ್‌ ನೇಮಕ ಮಾಡಲಾಗಿದೆ ಹಾಗೂ ಉಳಿದ ಮತಗಟ್ಟೆಗಳಿಗೆ ಕೇಂದ್ರ ಅರೆ ಸೈನಿಕ ಪಡೆ ಸಿಬಂದಿ ಮತ್ತು ವೀಡಿಯೋಗ್ರಾಫರ್‌ಗಳನ್ನು ನಿಯೋ ಜಿಸ ಲಾಗುವುದು. ಈಗಾಗಲೇ 8 ಕ್ಷೇತ್ರಗಳಿಗೆ 6 ಮಂದಿ ಚುನಾವಣಾ ವೀಕ್ಷಕರಿದ್ದು, ಇದರೊಂದಿಗೆ ಮತ ಎಣಿಕೆಗೂ ವೀಕ್ಷಕರನ್ನು ನೇಮಕ ಮಾಡಲಾಗಿದೆ. ತಾಂತ್ರಿಕ ದೋಷಗಳು ಸಂಭವಿಸಿದಲ್ಲಿ ಪರ್ಯಾಯ ವ್ಯವಸ್ಥೆಯಾಗಿ ಶೇ. 40ರಷ್ಟು ಇವಿಎಂ ಮತ್ತು ವಿವಿಪ್ಯಾಟ್‌ ಗಳನ್ನು ಹಾಗೂ ಶೇ.30ರಷ್ಟು ಕಂಟ್ರೋಲ್‌ ಯೂನಿಟ್‌ಗಳನ್ನು ಮೀಸಲಿರಿಸಲಾಗಿದೆ ಎಂದರು.

ಜಿಪಿಎಸ್‌ ವ್ಯವಸ್ಥೆ
ಮತದಾನದ ಕೊನೆಯ 72 ಗಂಟೆಗಳಲ್ಲಿ ವಿವಿಧ ಜಾಗೃತ ತಂಡಗಳು ಸಕ್ರಿಯವಾಗಿ ಕಾರ್ಯ ನಿರ್ವ ಹಿಸುವಂತೆ ಕ್ರಮ ವಹಿಸಲಾಗಿದೆ. ಜಿಪಿಎಸ್‌ ಆಧಾರಿತ ವಾಹನ ವ್ಯವಸ್ಥೆ ಮಾಡಲಾಗಿದ್ದು, ಅವರ ಚಲನ ವಲನ ಗಳನ್ನು ಜಿಲ್ಲೆಯ ಕಂಟ್ರೋಲ್‌ರೂಂನಿಂದ ವೀಕ್ಷಿಸ ಲಾಗುವುದು. ಮತಗಟ್ಟೆಗಳಲ್ಲಿ ಸಮಸ್ಯೆ ತಲೆ  ದೋರಿ ದರೆ ಸಮೀಪವಿರುವ ಜಾಗೃತ ತಂಡಕ್ಕೆ ಜಿಪಿಎಸ್‌ ಮೂಲಕ ಮಾಹಿತಿ ನೀಡಲಾಗುವುದು ಎಂದರು.

ಮತದಾರರಿಗೆ ಬಸ್‌ ವ್ಯವಸ್ಥೆ
ಬಸ್‌ ಸಂಚಾರ ವಿರಳವಿರುವ ಕಡೆಗಳಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಉಚಿತ ಬಸ್‌ ವ್ಯವಸ್ಥೆ ಮಾಡಲಾಗುವುದು. ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಮುಂತಾದ ಕ್ಷೇತ್ರಗಳ 23 ರೂಟ್‌ಗಳನ್ನು ಗುರುತಿಸಲಾಗಿದೆ. 2ರಿಂದ 3 ಬಾರಿ ಬಸ್‌ ಸಂಚರಿಸುತ್ತವೆ. ಮತಗಟ್ಟೆಗಳಿಗೆ ಮತದಾನ ಸಾಮಗ್ರಿಗಳು ಹಾಗೂ ಸಿಬಂದಿ ಒಯ್ಯುವ ಬಸ್‌ಗಳನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

ಮೊಬೈಲ್‌ಗೆ ಅವಕಾಶವಿಲ್ಲ
ಮತದಾರ ಮತಗಟ್ಟೆಯೊಳಗೆ ಮೊಬೈಲ್‌ ಫೋನ್‌ ಒಯ್ಯಲು ಅವಕಾಶವಿಲ್ಲ. ಮತಗಟ್ಟೆ ಅಧಿಕಾರಿಗಳು ತಮ್ಮ ಮೊಬೈಲ್‌ ಫೋನ್‌ ಅನ್ನು ಸೈಲೆಂಟ್‌ ಮೋಡ್‌ನ‌ಲ್ಲಿ ಇರಿಸಬೇಕು ಹಾಗೂ ಇದನ್ನು ಚುನಾವಣಾ ಕರ್ತವ್ಯದ ಉದ್ದೇಶಕ್ಕೆ ಮಾತ್ರ ಬಳಸಬೇಕು ಎಂದು ಚುನಾವಣಾಧಿಕಾರಿ ಶಶಿಕಾಂತ ಸೆಂಥಿಲ್‌ ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.