“ಮಹಿಳೆಯರನ್ನು ಅವಮಾನಿಸುವುದು ಸಹಿಸಲಾಗದು’


Team Udayavani, Dec 30, 2020, 3:00 AM IST

Udayavani Kannada Newspaper

ಕಾಸರಗೋಡು: ಇತ್ತೀಚಿನ ದಿನಗಳಲ್ಲಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಅವಮಾನಿಸುವ ಕೃತ್ಯಗಳು ಅತ್ಯಧಿಕಗೊಳ್ಳುತ್ತಿದೆ. ಅಪಮಾನವನ್ನು ಯಾವ ಕಾರಣಕ್ಕೂ ಸಹಿಸಲಾಗದು ಎಂದು ರಾಜ್ಯ ಮಹಿಳಾ ಆಯೋಗದ ಸದಸ್ಯೆ ಷಾಹಿದಾ ಕಮಾಲ್‌ ಅವರು ಹೇಳಿದರು.

ಕಾಸರಗೊಡು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಆಯೋಗದ ಅದಾಲತ್‌ ಅನಂತರ ಅವರು ಮಾತನಾಡಿದರು. ಮಹಿಳೆಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಣ, ಸೈಬರ್‌ ಕಾನೂನು ಪ್ರಬಲಗೊಳಿಸಬೇಕಾದುದು ಇಂದು ಅನಿವಾರ್ಯವಾಗಿದೆ. ಸಾಮಾಜಿಕ ಜಾಲ ತಾಣಗಳ ಮೂಲಕ ಮಹಿಳೆಯರನ್ನು ಸಮಾಜದ ಮುಂದೆ ಕೀಳುಮಟ್ಟದಲ್ಲಿ ಚಿತ್ರಿಸುವ ಮೂಲಕ ಅವರನ್ನು ಮಾನಸಿ ಕವಾಗಿ ಬೇಟೆಯಾಡುವ ಮನೋ ಭಾವ ಇಂಥಾ ಕೃತ್ಯಗಳಿಗೆ ಕಾರಣ ಎಂದವರು ತಿಳಿಸಿದರು.

ಲಾಕ್‌ಡೌನ್‌ಗಿಂತ ಹಿಂದೆ ಲಭಿಸಿದ್ದ ದೂರಗಳೇ ಅಧಿಕವಾಗಿದ್ದುವು. ಲಾಕ್‌ಡೌನ್‌ ಅವಧಿಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಪರಿಶೀಲನೆಗೆ ಅರ್ಹವಾದ ಯಾವುದೇ ದೂರುಗಳು ಲಭಿಸಿಲ್ಲ ಎಂದು ಮಹಿಳಾ ಆಯೋಗದ ಸದಸ್ಯರಾದ ಇ.ಎಂ. ರಾಧಾ, ಷಾಹಿಮಾ ಕಮಾಲ್‌ ತಿಳಿಸಿದರು. ಲಾಕ್‌ ಡೌನ್‌ ಅವಧಿಯಲ್ಲಿ ಲಭಿಸಿದ್ದ ಕೆಲವು ದೂರುಗಳನ್ನು ಆಯಾ ಪೊಲೀಸ್‌ ಠಾಣೆಗಳ ಹೌಸ್‌ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಸಮಸ್ಯೆ ಪರಿಹಾರಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಂಡಿರು ವುದಾಗಿ ಮಹಿಳಾ ಆಯೋಗ ತಿಳಿಸಿದೆ.

ಅದಾಲತ್‌ನಲ್ಲಿ ಪರಿಶೀಲಿಸಲಾದ ದೂರುಗಳಲ್ಲಿ ಬಹುತೇಕ ಕುಟುಂಬ ಕಲಹ, ನೌಕರಿ ಸಂಸ್ಥೆಗಳಲ್ಲಿನ ಸಮಸ್ಯೆ, ಆರ್ಥಿಕ ಸಮಸ್ಯೆ ಇತ್ಯಾದಿಗಳಿಗೆ ಸಂಬಂಧಿಸಿದ್ದುವು. ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಓರ್ವ ವಿರುದ್ಧ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನಡೆಸಿದ್ದ ಸೈಬರ್‌ ದೌರ್ಜನ್ಯ ಸಂಬಂಧ ಲಭಿಸಿರುವ ದೂರನ್ನು ಮುಂದಿನ ಅದಾಲತ್‌ನಲ್ಲಿ ಪರಿಶೀಲಿಸಲಾಗುವುದು ಎಂದು ಆಯೋಗದ ಸದಸ್ಯರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರ ನೇತೃತ್ವದಲ್ಲಿ ನಡೆಯಿತು. ಕಾಸರಗೋಡು ಮಹಿಳಾ ಘಟಕದ ಎಸ್‌. ಐ. ಸಿ. ಭಾನುಮತಿ, ನ್ಯಾಯವಾದಿಗಳಾದ ಎ.ಪಿ. ಉಷಾ, ರೇಣುಕಾದೇವಿ, ಸೀನಿಯರ್‌ ಸಿ.ಪಿ.ಒ.ಪಿ. ಶೀಲಾ, ಸಿ.ಪಿ.ಒ. ಜಯಶ್ರೀ, ಸದಸ್ಯೆ ರಮ್ಯಾ ಚಟುವಟಿಕೆ ನಡೆಸಿದರು.

37 ದೂರುಗಳ ಪರಿಶೀಲನೆ: 12 ಕೇಸುಗಳಲ್ಲಿ ತೀರ್ಪು
ಸೋಮವಾರ ನಡೆದ ಮಹಿಳಾ ಆಯೋಗದ ಅದಾಲತ್‌ನಲ್ಲಿ 37 ದೂರುಗಳ ಪರಿಶೀಲನೆ ನಡೆಸಲಾಗಿದ್ದು, 12 ದೂರುಗಳಿಗೆ ತೀರ್ಪು ನೀಡಲಾಗಿದೆ. 4 ದೂರುಗಳಲ್ಲಿ ವಿವಿಧ ಇಲಾಖೆಗಳ ವರದಿ ಆಗ್ರಹಿಸಲಾಗಿದ್ದು, ಮುಂದಿನ ಅದಾಲತ್‌ನಲ್ಲಿ ಪರಿಶೀಲಿಸಲಾಗುವುದು.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.