ಮಾನಸಿಕ ಸದೃಢತೆಗೆ ಆಚರಣೆಗಳು ಪೂರಕ: ದಯಾನಂದ ಕತ್ತಲ್‌ಸಾರ್‌


Team Udayavani, Jul 22, 2018, 12:46 PM IST

22-july-9.jpg

ಮಹಾನಗರ: ತುಳುವರು ಪ್ರಕೃತಿ ಆರಾಧಕರು. ದೈಹಿಕ ವ್ಯಾಧಿ ಉಂಟಾದಲ್ಲಿ ಪ್ರಕೃತಿಯಲ್ಲಿ ಸಾವಿರಾರು ಔಷಧ ಸಸ್ಯಗಳಿವೆ. ಅದೇ ರೀತಿಯಲ್ಲಿ ಮಾನಸಿಕವಾಗಿ ವ್ಯಕ್ತಿಯೊಬ್ಬನು ಸದೃಢವಾಗಿರಲು ಉತ್ತಮ ಆಚರಣೆಗಳಿವೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ದಯಾನಂದ ಕತ್ತಲ್‌ಸಾರ್‌ ಅಭಿಪ್ರಾಯಪಟ್ಟರು.

ನಗರದ ಬೆಸೆಂಟ್‌ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ಬೆಸೆಂಟ್‌ ಪದವಿಪೂರ್ವ ಕಾಲೇಜಿನಲ್ಲಿ ಜು. 21ರಂದು ಆಯೋಜಿಸಿದ್ದ ಅಂತರ್‌ ಕಾಲೇಜು ತುಳು ಪಾಡ್ದನ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅವ್ಯಕ್ತ ಶಕ್ತಿಯೊಂದು ಪ್ರಕೃತಿಯಲ್ಲಿದೆ. ಅದು ಜಾತಿ ಭೇದ ಇಲ್ಲದೆ ಎಲ್ಲರಿಗೂ ಸಲ್ಲುವ ಶಕ್ತಿ ಎಂದರು.

ಪಾಡ್ದನಗಳನ್ನು ಹೇಗೆ, ಎಲ್ಲಿ ಮತ್ತು ಏಕೆ ಹಾಡಬಹುದೆಂದು ವಿವರಿಸಿ ರಾಗ ಮತ್ತು ಶಬ್ದಗಳ ಅಪಬ್ರಂಶವಾಗದೆ ಸಂದರ್ಭಕ್ಕೆ ತಕ್ಕಂತೆ ಸರಿಯಾದ ದಾಟಿಯಲ್ಲಿ ಹಾಡುವುದರಿಂದ ಜನಪದ ಸೊಗಡನ್ನು ಉಳಿಸಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಹಳೆಯದರಲ್ಲಿ ಹೊಸತು ಕಾಣಿ
ಶೈಕ್ಷಣಿಕ ಸಲಹೆಗಾರ್ತಿ ಲಲಿತಾ ಜಿ. ಮಲ್ಯ ಅವರು, ಹಳೆಯದರಲ್ಲಿ ಹೊಸತನ್ನು ಕಾಣುವ ಮನೋಭಾವ ಬೆಳೆಯಬೇಕೆಂದು ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ವಿವರಿಸಿದರು. ಡಾ| ಅನ್ನಿಬೆಸೆಂಟ್‌ ಅವರ ಮಹಿಳಾ ಶಿಕ್ಷಣ ಬಗೆಗಿನ ಸಾಧನೆಗಳನ್ನು ವಿವರಿಸಿ ಮಾನವೀಯ ಕಳಕಳಿಗೆ ದೇಶಗಳ ಮೇರೆಗಳಿಲ್ಲ ಎಂದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕಾತ್ಯಾಯಿನಿ ಸೀತಾರಾಂ ಅವರು ಬೆಸೆಂಟ್‌ ಶಾಲೆಯ ಶತಮಾನೋತ್ಸವ ಕಟ್ಟಡದ ಬಗ್ಗೆ ವಿವರಿಸಿದರು. ಪಿಯುಸಿ ವಿದ್ಯಾರ್ಥಿಗಳಿಗಾಗಿ ಅಂತರ್‌ ಕಾಲೇಜು ಡಾ| ಅನ್ನಿಬೆಸೆಂಟ್‌ ರವರ ಪೆನ್ಸಿಲ್‌ ಸ್ಕೆಚ್‌ ಹಾಗೂ ತುಳು ಪಾಡªನ ಸ್ಪರ್ಧೆ ನಡೆಯಿತು. ಸುಮಾರು 50 ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಕಾಲೇಜಿನ ಪ್ರಾಂಶುಪಾಲರಾದ ಡಾ| ನಾಯಕ್‌ರೂಪ ಸಿಂಗ್‌ ಜಿ. ಸ್ವಾಗತಿಸಿದರು. ವಿಮೆನ್ಸ್‌ ನ್ಯಾಷನಲ್‌ ಎಜುಕೇಶನ್‌ ಸೊಸೈಟಿಯ ಉಪಾಧ್ಯಕ್ಷ ಮಣೇಲ್‌ ಅಣ್ಣಪ್ಪ ನಾಯಕ್‌, ಕಾರ್ಯದರ್ಶಿ ದೇವಾನಂದ ಪೈ, ಬೆಸೆಂಟ್‌ ಪದವಿಪೂರ್ವ ಕಾಲೇಜಿನ ಸಂಚಾಲಕ ಎಂ. ಸುರೇಶ್‌ ಎನ್‌. ಮಲ್ಯ, ಹಳೆ ವಿದ್ಯಾರ್ಥಿ ಓಂ ಪ್ರಕಾಶ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕಿ ಕೃಪಾಕ್ಷಿ ವಂದಿಸಿದರು.

ಸಮ್ಮಾನ 
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಜನಪದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಹಾಗೂ ನೈಸರ್ಗಿಕ ರೀತಿಯಲ್ಲಿ 250ಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ ಸಾಂಪ್ರದಾಯಿಕ ಸೂಲಗಿತ್ತಿ ಹಾಗೂ ಪಾಡ್ದನ ಗಾಯಕಿ ಭವಾನಿ ಪೆರ್ಗಡೆ ಅವರನ್ನು ಸಮ್ಮಾನಿಸಲಾಯಿತು. ಭವಾನಿ ಪೆರ್ಗಡೆಯವರು ಪಾಡ್ದನಗಳನ್ನು ಹಾಡಿದರು. 

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.