“ಜನರ ಜೀವನ ಉತ್ತಮಗೊಳಿಸಲು ಹಕ್ಕುಪತ್ರ ವಿತರಣೆ’


Team Udayavani, Sep 16, 2020, 8:12 AM IST

MLABHarat-shetty

ಶಾಸಕ ಡಾ| ಭರತ್‌ ಶೆಟ್ಟಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸಿದರು.

ಕೈಕಂಬ: ಸರಕಾರದ ಅನುದಾನದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ರಸ್ತೆ ಸಹಿತ ಮೂಲಸೌಕರ್ಯಗಳನ್ನು ಒದಗಿಸ ಲಾಗುತ್ತಿದೆ. ಇನ್ನೂ ಜನರ ಜೀವನವನ್ನು ಉತ್ತಮಗೊಳಿಸಲು ಅವರಿಗೆ ಹಕ್ಕುಪತ್ರ, ಕೃಷಿ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಹೇಳಿದರು.

ಎಡಪದವು ಶ್ರೀರಾಮ ಮಂದಿರದ ಸಭಾಭವನದಲ್ಲಿ ಮಂಗಳವಾರ ಎಡಪದವು ಜಿ.ಪಂ. ಕ್ಷೇತ್ರ ವ್ಯಾಪ್ತಿಯ 94ಸಿಸಿ ಹಕ್ಕುಪತ್ರ ವಿತರಣೆ, ವಿಪತ್ತು ಪರಿಹಾರಧನ, ವಿವಿಧ ವೇತನ ಮಂಜೂರಾತಿ, ಅಲೆಮಾರಿ ಜನಾಂಗದವರಿಗೆ ನಿವೇಶನ ಮಂಜೂರಾತಿ ಪತ್ರ, ಕೃಷಿ ಯಂತ್ರೋಪಕರಣಗಳನ್ನು ವಿತರಿಸಿ ಅವರು ಮಾತನಾಡಿದರು. ಹಕ್ಕುಪತ್ರ ವಿತರಣೆಯಿಂದ ಅವರ ಜೀವನಮಟ್ಟ ಸುಧಾರಿಸಲು ಸಾಧ್ಯವಾಗುತ್ತದೆ ಎಂದರು.

ಸಕ ಡಾ| ಭರತ್‌ ಶೆಟ್ಟಿ ಅವರು ಎಡಪದವು ಜಿ.ಪಂ. ಕ್ಷೇತ್ರ  ವ್ಯಾಪ್ತಿಯ ಎಡಪದವು, ಕುಪ್ಪೆಪದವು, ಮುತ್ತೂರು, ಮುಚ್ಚಾರು, ಪಡುಪೆರಾರ ಗ್ರಾ.ಪಂ. ವ್ಯಾಪ್ತಿಯ 92 ಮಂದಿಗೆ ಹಕ್ಕುಪತ್ರ, 20 ಮಂದಿ ಫಲಾನುಭವಿಗಳಿಗೆ ವಿವಿಧ ವೇತನ ಮಂಜೂರಾತಿ ಪತ್ರ, 18 ಪ್ರಾಕೃತಿಕ ವಿಕೋಪ ಪರಿಹಾರ ಚೆಕ್‌, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಲೆಮಾರಿ ಜನಾಂಗದ 9ಮಂದಿಗೆ ನಿವೇಶನ ಮಂಜೂರಾತಿ ಅದೇಶ ಪತ್ರ, ಕೃಷಿ ಇಲಾಖೆಯ ವತಿಯಿಂದ 5 ಮಂದಿಗೆ ಪವರ್‌ ವಿಡರ್‌ ಹಾಗೂ ಒಂದು ಮಿನಿ ಟ್ರ್ಯಾಕ್ಟರ್‌ನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಡಾ| ಭರತ್‌ ಶೆಟ್ಟಿ ಅವರು ಮಿನಿ ಟ್ರ್ಯಾಕ್ಟರ್‌ನ ಬಗ್ಗೆ ಮಾಹಿತಿ ತಿಳಿದುಕೊಂಡು ಸ್ವತಃ ಚಲಾಯಿಸಿದರು. ಅನಂತರ ಟ್ರ್ಯಾಕ್ಟರ್‌ನ್ನು ಕೊಂಪದವು ರೈತ ರಾಜೇಂದ್ರ ಪಿಂಟೋ ಅವರಿಗೆ ವಿತರಿಸಿದರು.

ಜಿ.ಪಂ. ಸದಸ್ಯ ಜನಾರ್ದನ ಗೌಡ ಅವರು ಪ್ರಸ್ತಾವಿಸಿ, ಅಲೆಮಾರಿ ಜನಾಂಗಕ್ಕೆ ನಿವೇಶನ ನೀಡುವ ಕಾರ್ಯ ಪ್ರಥಮವಾಗಿ ಕ್ಷೇತ್ರದಲ್ಲಿ ಅಗಿದೆ. 20 ವರ್ಷಗಳಿಂದ ಸಿಗದ ಹಕ್ಕುಪತ್ರಗಳು ಈ ಬಾರಿ ಜನರಿಗೆ ಸಿಗುವಂತಾಗಿದೆ. 94ಸಿಸಿಯಲ್ಲಿ ಉಳಿಕೆಯ ಅದವರಿಗೂ ಹಕ್ಕುಪತ್ರ ನೀಡುವ ಕಾರ್ಯ ಮುಂದೆ ಆಗಲಿದೆ. ಕ್ಷೇತ್ರದಲ್ಲಿ ನಿವೇಶನ ಹಂಚುವ ಕಾರ್ಯ ವೇಗ ಪಡೆದಿದೆ ಎಂದು ಅವರು ಹೇಳಿದರು.
ತಹಶೀಲ್ದಾರ ಗುರುಪ್ರಸಾದ್‌, ಹಿಂದು ಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಸಚಿನ್‌, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ ಉಪಸ್ಥಿತರಿದ್ದರು. ಗುರುಪುರ ಹೋಬಳಿಯ ಉಪ ತಹಶೀಲ್ದಾರ ಶಿವಪ್ರಸಾದ್‌ ಸ್ವಾಗತಿಸಿದರು. ಕುಶಾಲ ನಿರೂಪಿಸಿದರು. ಎಡಪದವು ಗ್ರಾ.ಪಂ. ಲೆಕ್ಕ ಪರಿಶೋಧಕ ಇಸ್ಮಾಯಿಲ್‌ ವಂದಿಸಿದರು.

ಜವಾಬ್ದಾರಿ ನಿರ್ವಹಿಸಿದ್ದೇನೆ
ಯಾವುದೇ ಅಭಿವೃದ್ಧಿ ಕಾರ್ಯಗಳು ಬಂದಾಗ ರಾಜಕೀ ಯವನ್ನು ಬದಿಗಿಟ್ಟು, ಪ್ರಜೆಗಳ ಕಷ್ಟ, ಆಕಾಂಕ್ಷೆಗಳಿಗೆ ಸ್ಪಂದಿ ಸುವ ಜವಾಬ್ದಾರಿಯನ್ನು ಅದಷ್ಟು ನಿರ್ವಹಿಸಿದ್ದೇನೆ ಎಂದು ಶಾಸಕ ಡಾ| ಭರತ್‌ ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

karch

Forbes Adviser list; ಪಾಕಿಸ್ತಾನದ ಈ ನಗರ ಪ್ರವಾಸಿಗರಿಗೆ ಅತ್ಯಂತ ಅಪಾಯಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

6-bng

Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.