ಪಶು ಆಸ್ಪತ್ರೆ ಜಂಕ್ಷನ್‌ನಲ್ಲಿ ಸಂಚಾರ ಗೊಂದಲ; ಸಂಭಾವ್ಯ ಅಪಾಯ ತಡೆಗೆ ಬೇಕಿದೆ ತುರ್ತು ಕ್ರಮ

ಜೈಲ್‌ ರಸ್ತೆ: ಪಶು ಆಸ್ಪತ್ರೆ ಜಂಕ್ಷನ್‌ನಲ್ಲಿ ಸಂಚಾರ ಗೊಂದಲ;

Team Udayavani, Nov 8, 2022, 5:02 PM IST

14

ಮಹಾನಗರ: ನಗರದ ಎಂಜಿ ರಸ್ತೆಯ ಕೆನರಾ ಕಾಲೇಜಿನಿಂದ ಜಿಲ್ಲಾ ಕಾರಾಗೃಹದ ಮುಂಭಾಗವಾಗಿ ಕಪುಚಿನ್‌ ಚರ್ಚ್‌ ವರೆಗಿನ ರಸ್ತೆಯನ್ನು ಇತ್ತೀಚೆಗಷ್ಟೇ ಸ್ಮಾರ್ಟ್‌ ಸಿಟಿಯಿಂದ ಅಭಿವೃದ್ಧಿಪಡಿಸಲಾಗಿದೆ.

ಸಂಚಾರ ಯೋಗ್ಯವಾದ ಕಾಂಕ್ರೀಟ್‌ ರಸ್ತೆ ಇಲ್ಲಿ ನಿರ್ಮಾಣವಾಗಿದ್ದು, ಹಿಂದೆ ಇದ್ದ ಡಾಮರು ರಸ್ತೆಗಿಂತ ಅಗಲವಾಗಿ, ಸಂಚಾರ ದಟ್ಟಣೆ ನಿವಾರಿಸುವಲ್ಲಿಯೂ ಸಹಕಾರಿಯಾಗಿದೆ. ಆದರೆ ಸರಕಾರಿ ಪಶು ಆಸ್ಪತ್ರೆ ಜಂಕ್ಷನ್‌ನಲ್ಲಿ ವಾಹನ ಸವಾರರಿಗೆ ತುಸು ಗೊಂದಲ ಮೂಡಿಸುತ್ತದೆ.

ಪಶು ಆಸ್ಪತ್ರೆ ಬಳಿ ಕರಂಗಲಪಾಡಿ ಕಡೆಯ ರಸ್ತೆಯೂ ಈ ರಸ್ತೆಗೆ ಸಂಧಿಸುತ್ತದೆ. ಜೈಲು ರಸ್ತೆಯಿಂದ ಕರಂಗಲಪಾಡಿ ಕಡೆಗೆ ಹೋಗುವವರು ಅಲ್ಲಿ ಬಲಕ್ಕೆ ತಿರುಗಬೇಕಿದ್ದು, ಬಿಜೈ ಚರ್ಚ್‌ ರಸ್ತೆಯಿಂದ ಬರುವ ವಾಹನ (ಬಹುತೇಕ ವಾಹನಗಳು ವೇಗವಾಗಿಯೇ ಬರುತ್ತವೆ)ಗಳಿಂದಾಗಿ ಕೆಲ ಹೊತ್ತು ನಿಲ್ಲಬೇಕಾಗುತ್ತದೆ. ಈ ವೇಳೆ ಹಿಂದಿನ (ಕೆನರಾ ಕಾಲೇಜು ಕಡೆಯಿಂದ) ಬರುವ ವಾಹನಗಳಿಗೆ ಇದು ಅಡ್ಡಿಯಾಗುತ್ತದೆ. ಮಾತ್ರವಲ್ಲದೆ ಕರಂಗಲಪಾಡಿ ಕ್ರಾಸ್‌ ರಸ್ತೆಯಿಂದ ಬರುವ ವಾಹನಗಳೂ ವೇಗವಾಗಿ ಬರುವುದರಿಂದ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯವುಂಟಾಗುವ ಸಾಧ್ಯತೆಯಿದೆ.

ಜಂಕ್ಷನ್‌ನಲ್ಲಿ ಒಂದು ಬದಿಯಲ್ಲಿ ಟ್ರಾಫಿಕ್‌ ಐಲ್ಯಾಂಡ್‌ ರಚಿಸಲಾಗಿದ್ದರೂ, ಅದರಿಂದ ಹೆಚ್ಚೇನು ಪ್ರಯೋಜನವಾಗಿಲ್ಲ. ಈ ರಸ್ತೆಯಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ಇಲ್ಲಿನ ಹೆಚ್ಚಿನ ವಾಹನ ಸಂಚಾರ ಇರುತ್ತದೆ. ಜತೆಗೆ ಪಿವಿಎಸ್‌-ಕರಂಗಲಪಾಡಿ ರಸ್ತೆಯಲ್ಲಿ ಹೆಚ್ಚಿನ ದಟ್ಟಣೆ ಉಂಟಾದಾಗ ಈ ರಸ್ತೆಯನ್ನು ಹೆಚ್ಚಿನ ಸವಾರರು ಬಳಸುತ್ತಾರೆ. ವಾಹನಗಳ ಸುಗಮ ಸಂಚಾರಕ್ಕೆ ಇಲ್ಲಿ ಸೂಕ್ತ ಮಾರ್ಪಾಡು ಮಾಡಬೇಕಾದ ಅವಶ್ಯಕತೆಯಿದೆ. ಸಣ್ಣ ವೃತ್ತ, ವೇಗ ತಡೆಗೆ ಹಂಪ್‌ ಅಳವಡಿಸಿದರೆ ಅನುಕೂಲವಾಗಲಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಟ್ರಾಫಿಕ್‌ ಐಲ್ಯಾಂಡ್‌ಗೆ ಹಾನಿ

ಸ್ಥಳದಲ್ಲಿ ನಿರ್ಮಿಸಲಾಗಿರುವ ಟ್ರಾಫಿಕ್‌ ಐ ಲ್ಯಾಂಡ್‌ ಈಗಾಗಲೇ ಹಾನಿಯಾಗಿದೆ. ಯಾವುದೋ ವಾಹನ ಢಿಕ್ಕಿಯಾಗಿರುವ ಸಾಧ್ಯತೆಯಿದ್ದು, ಕಲ್ಲುಗಳು ಎದ್ದು ಹೋಗಿವೆ. ಇತ್ತೀಚೆಗಷ್ಟೇ ಇದಕ್ಕೆ ಕಪ್ಪು- ಹಳದಿ ಬಣ್ಣ ಬಳಿಯಲಾಗಿತ್ತು. ಇಲ್ಲಿ ವಾಹನ ಸಂಚಾರ ಹೆಚ್ಚು ಅಪಾಯಕರವಾಗಿದೆ ಎನ್ನುವುದಕ್ಕೆ ಇದು ಕೂಡ ಉದಾಹರಣೆಯಾಗಿದೆ.

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.