ಜಲಸಿರಿ ಯೋಜನೆಯಿಂದ ನೀರು ಸರಬರಾಜು ಸರಾಗ: ಶಾಸಕ ಕಾಮತ್
ಹೋಲಿಹಿಲ್: ಜಲಸಂಗ್ರಹಾಗಾರ ನಿರ್ಮಾಣ: ಪೂಜೆ
Team Udayavani, Apr 18, 2022, 11:11 AM IST
ಮರೋಳಿ: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 24×7 ಕುಡಿಯುವ ನೀರು ಒದಗಿಸುವ ಜಲಸಿರಿ ಯೋಜನೆಯಡಿ 10 ಲಕ್ಷ ಲೀ. ಸಂಗ್ರಹಣಾ ಸಾಮರ್ಥ್ಯದ ಮೇಲ್ಮಟ್ಟದ ಜಲಸಂಗ್ರಹಾಗಾರ ನಿರ್ಮಾಣಕ್ಕೆ ಮರೋಳಿಯ ಹೋಲಿಹಿಲ್ ಬಳಿ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಬಳಿಕ ಅವರು ಮಾತನಾಡಿ, ಹೋಲಿಹಿಲ್ ಬಳಿ 2.30 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ವಾಗುವ ಜಲಸಂಗ್ರಹಾಗಾರ ದಿಂದ ಮರೋಳಿ, ವೆಲೆನ್ಸಿಯಾ, ಅಳಪೆ ಉತ್ತರ ವಾರ್ಡ್ನ 1723 ಮನೆಗಳಿಗೆ ನೀರು ಪೂರೈಸಲಾಗುತ್ತದೆ. ಪಾಲಿಕೆ ವ್ಯಾಪ್ತಿಯ 3 ವಾರ್ಡ್ನ ಪ್ರತಿ ಮನೆಗೂ ನೀರು ಪೂರೈಸಲು ಮೇಲ್ಮಟ್ಟದ ಜಲಸಂಗ್ರಹಾಗಾರ ನಿರ್ಮಾಣ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ನೀರಿನ ಸರಬರಾಜು ಸುಲಭಗೊಳಿಸಲು ಇದು ಪೂರಕವಾಗಲಿದೆ ಎಂದರು.
ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಉಪಮಹಾಪೌರರಾದ ಸುಮಂಗಲಾ ರಾವ್, ಪಾಲಿಕೆ ಸ್ಥಾಯೀ ಸಮಿತಿಯ ಅಧ್ಯಕ್ಷ ಸಂದೀಪ್ ಗರೋಡಿ, ಪಾಲಿಕೆ ಸದಸ್ಯರಾದ ಕೇಶವ ಮರೋಳಿ, ರೂಪಶ್ರೀ ಪೂಜಾರಿ, ಮುಖಂಡರಾದ ಕಿರಣ್ ಮರೋಳಿ, ಕೃಷ್ಣ ಎಸ್.ಆರ್., ಜಗದೀಶ್ ಶೆಣೈ, ವಸಂತ್ ಜೆ.ಪೂಜಾರಿ, ಜಗನ್ನಾಥ್ ಆಡುಮನೆ, ಪ್ರಶಾಂತ್ ಮರೋಳಿ, ರಾಘು, ಅರುಣ್ ಶೆಟ್ಟಿ, ರವಿ ಸತೀಶ್, ತೇಜಾಕ್ಷ ಸುವರ್ಣ, ಹರಿಣಾಕ್ಷ, ನಾಗೇಶ್ ದೇವಾಡಿಗ, ಅಂಬುಜಾಕ್ಷ ಆಚಾರ್ಯ, ಜನಾರ್ದನ, ಅನುಪಮಾ, ಫ್ರಾನ್ಸಿಸ್, ಶಿವಪ್ಪ ಅಮೀನ್, ಭೋಜ ಅಮೀನ್, ಜೆರೋಮ್ ಫೆರ್ನಾಂಡಿಸ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ