ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!


Team Udayavani, Sep 22, 2023, 6:35 PM IST

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!

ಮಹಾನಗರ: ಹದಗೆಟ್ಟ ರಸ್ತೆಗಳು, ಇಲ್ಲದ ಬಸ್‌ ನಿಲ್ದಾಣ, ಹೆಸರಿಗೆ ಮಾತ್ರ ಎನ್ನುವಂತಿರುವ ಬಸ್‌ ತಂಗುದಾಣ, ಇನ್ನೂ ನಿರ್ಮಾಣವಾಗದ ಒಳಚರಂಡಿ… ಇದು ಬಜಾಲ್‌ನ ಜಲ್ಲಿಗುಡ್ಡೆ ಪ್ರದೇಶದ ಸಮಸ್ಯೆಗಳ ಸಾರ.

2002ರಲ್ಲಿ ವಾರ್ಡ್‌ ವಿಸ್ತರಣೆ ಸಂದರ್ಭ ಈ ಪ್ರದೇಶ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗಿತ್ತು. ಆದರೆ ಹೆಸರಿಗೆ ಮಾತ್ರ ನಗರವಾಗಿ, ಒಳ ಹೊಕ್ಕು ನೋಡಿದರೆ ಕುಗ್ರಾಮದಂತಿದೆ ಈ ಜಲ್ಲಿಗುಡ್ಡೆ ಪ್ರದೇಶ. ಪಾಲಿಕೆ ವ್ಯಾಪ್ತಿಯ ಅತ್ಯಂತ ಕಡೆಗಣಿಸಲ್ಪಟ್ಟ ಪ್ರದೇಶ ಎನ್ನಬಹುದು. ಸಮಗ್ರ ಅಭಿವೃದ್ಧಿಯ ಕುರಿತಂತೆ ಇಲ್ಲಿನ ಜನರ ಬಹುಕಾಲದ ಬೇಡಿಕೆ ಇನ್ನೂ ಈಡೇರಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಜನ ವಸತಿ ಇರುವ ಈ ಪ್ರದೇಶವನ್ನು ಕಡೆಗಣಿಸಿರುವ ಬಗ್ಗೆ ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಜಲ್ಲಿಗುಡ್ಡೆಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಡಾಮರು ರಸ್ತೆಯಾಗಿದ್ದು, ಅಲ್ಲಲ್ಲಿ ಹೊಂಡ ಗುಂಡಿಗಳಿಂದ ಕೂಡಿದೆ. ಒಳ ರಸ್ತೆಗಳ ಕಥೆಯಂತೂ ಇನ್ನೂ ಶೋಚನೀಯವಾಗಿದೆ. ಜಯನಗರವನ್ನು ಸಂಪರ್ಕಿಸುವ ಡಾಮರು ರಸ್ತೆಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ದೊಡ್ಡ ದೊಡ್ಡ ಹೊಂಡಗಳಿದ್ದು, ಕನಿಷ್ಠ ಹೊಂಡ ಮುಚ್ಚುವ ಕೆಲಸವೂ ಆಗಿಲ್ಲ. ಪಕ್ಕದ ಬಜಾಲ್‌ ಪ್ರದೇಶ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಜಲ್ಲಿಗುಡ್ಡೆ ಪ್ರದೇಶವನ್ನು ಕಡೆಗಣಿಸಲಾಗಿದೆ ಎನ್ನುವುದು ಸ್ಥಳೀಯರ ಮಾತು.

ನಗರದಿಂದ ಜಲ್ಲಿಗುಡ್ಡೆಗೆ ಆರು ಬಸ್‌ಗಳು ಟ್ರಿಪ್‌ ಮಾಡುತ್ತವೆ. ಆದರೆ ರಸ್ತೆ ಬದಿಯಲ್ಲಿ ಒಂದು ತಂಗುದಾಣವೂ ಕಂಡು ಬರುವುದಿಲ್ಲ. ಮಳೆ ಬಿಸಿಲಿಗೆ ರಸ್ತೆ ಬದಿಯ ಅಂಗಡಿಗಳ ಮುಂಭಾಗ ಅಥವಾ ರಸ್ತೆಯಲ್ಲೇ ನಿಂತು ಕಾಯಬೇಕಾಗುತ್ತದೆ. ಬಸ್ಸಿನ ಕೊನೆಯ ಸ್ಟಾಪ್‌ ಇರುವಲ್ಲಿ ಬಸ್‌ ನಿಲ್ದಾಣವಿದ್ದು, ಇಲ್ಲಿ ಬಸ್‌ಗಳು ಕೆಲವು ಹೊತ್ತು ನಿಲ್ಲುತ್ತವೆ. ಪ್ರಯಾಣಿಕರಿಗೆ
ಕುಳಿತುಕೊಳ್ಳಲು ಬಸ್‌ಗಳಿಗೆ ತಂಗಲು ಸೂಕ್ತ ವ್ಯವಸ್ಥೆಯಿಲ್ಲ. ಸಣ್ಣ ಮೈದಾನದಂತಹ ಜಾಗದಲ್ಲಿ ಬಸ್‌ಗಳನ್ನು ಚಾಲಕರು ನಿಲ್ಲಿಸುತ್ತಾರೆ.

ಒಳಚರಂಡಿ ಸಂಪರ್ಕವಿಲ್ಲ
ನಗರದ ಪ್ರದೇಶದಲ್ಲಿರಬೇಕಾದ ಪ್ರಮುಖ ಮೂಲ ಸೌಕರ್ಯಗಳಲ್ಲಿ ಒಂದು ಸಮರ್ಪಕ ಒಳಚರಂಡಿ ವ್ಯವಸ್ಥೆ. ಆದರೆ ಜಲ್ಲಿಗುಡ್ಡೆ ಪ್ರದೇಶದಲ್ಲಿ ಇನ್ನೂ ಒಳಚರಂಡಿ ಸೌಲಭ್ಯ ಕಲ್ಪಿಸಲಾಗಿಲ್ಲ. ಮನೆಯವರು ಪಿಟ್‌ ಬಳಸುತ್ತಿದ್ದು, ತುಂಬಿದ ಬಳಿಕ ಅದರ ವಿಲೇವಾರಿಯನ್ನೂ ಅವರೇ ದುಡ್ಡು ಹಾಕಿ ಮಾಡುವಂತಾಗಿದೆ. ಶೀಘ್ರ ಒಳಚರಂಡಿ ಜಾಲವನ್ನು ನಿರ್ಮಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಜಲ್ಲಿಗುಡ್ಡೆ ಪ್ರದೇಶದ ಅಭಿವೃದ್ಧಿಗೆ ಬದ್ಧ ಜಲ್ಲಿಗುಡ್ಡೆ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳಡಿ
ಅನುದಾನ ಪಡೆದು ಕೆಲಸ ಮಾಡಲಾಗಿದೆ. ಹದಗೆಟ್ಟಿರುವ ಜಯನಗರದ ಒಳರಸ್ತೆ ಸದ್ಯದಲ್ಲೇ ಡಾಮರು ಹಾಕಲಾಗುವುದು. ಮಳೆ ನಿಂತ ತತ್‌ ಕ್ಷಣ ಈ ಕೆಲಸ ಆರಂಭಿಸಲಾಗುವುದು. ಬಸ್‌ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಸ್ಥಳದ ಕೊರತೆಯಿದ್ದು, ಸದ್ಯ ಖಾಸಗಿ ಸ್ಥಳದಲ್ಲಿ ಬಸ್‌ಗಳು ತಂಗುತ್ತವೆ. ಒಳ ಚರಂಡಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲೂ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಆರಂಭಿಸುವ ಪ್ರಯತ್ನ ಮಾಡಲಾಗುವುದು.
ಅಶ್ರಫ್‌ ಬಜಾಲ್‌, ಕಾರ್ಪೋರೆಟರ್‌

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.