ವಲಸೆ ಕಾರ್ಮಿಕರಿಗೆ ಆಹಾರ ಬಡಿಸಿದ ನ್ಯಾಯಾಧೀಶರು!


Team Udayavani, Apr 14, 2020, 5:55 AM IST

ವಲಸೆ ಕಾರ್ಮಿಕರಿಗೆ ಆಹಾರ ಬಡಿಸಿದ ನ್ಯಾಯಾಧೀಶರು!

ಮೂಡುಬಿದಿರೆ: ಲಾಕ್‌ಡೌನ್‌ನಿಂದಾಗಿ ಮೂಡುಬಿದಿರೆ ಸಮಾಜ ಮಂದಿರದಲ್ಲಿ ತಾತ್ಕಾಲಿಕವಾಗಿ ನೆಲೆ ಕಂಡುಕೊಂಡಿರುವ ಕೊಪ್ಪಳ ಜಿಲ್ಲೆಯ 62 ಮಂದಿ ಕೂಲಿ ಕಾರ್ಮಿಕರಿಗೆ ಸಮಾಜ ಮಂದಿರದ ವತಿಯಿಂದ ವಿವಿಧ ಸಂಘಟನೆಗಳು ಹಾಗೂ ದಾನಿಗಳ ಸಹಕಾರದೊಂದಿಗೆ ನಡೆಯುತ್ತಿರುವ ಅನ್ನ ದಾಸೋಹದಲ್ಲಿ ಸೋಮವಾರ ಮೂಡುಬಿದಿರೆ ವಕೀಲರ ಸಂಘದವರು ಭೋಜನದೊಂದಿಗೆ ವಸ್ತ್ರದಾನವನ್ನೂ ಮಾಡಿದರು. ಸ್ವತಃ ಮೂಡುಬಿದಿರೆ ನ್ಯಾಯಾಲಯದ ನ್ಯಾಯಾಧೀಶ ಯಶವಂತ ಕುಮಾರ್‌ ಅವರೇ ಬಡಿಸುವ ಮೂಲಕ ಭೋಜನ ವ್ಯವಸ್ಥೆಗೆ ಚಾಲನೆ ನೀಡಿದರು.

ದಾನಿಗೆ ದಾನ ಮಾಡಿದ ಪುಣ್ಯ ಖಂಡಿತಾ ಲಭಿಸುತ್ತದೆ. ಒಂದಲ್ಲ ಒಂದು ರೂಪದಲ್ಲಿ ಅದು ದಾನಿಗೇ ಬರುವಂತಾಗುತ್ತದೆ ಎಂಬುದು ನಂಬಿಕೆ. ಕೊರೊನಾ ಸಂದರ್ಭದಲ್ಲಿ ನಾವು ಸರಕಾರದ ಆದೇಶಗಳನ್ನು ಪಾಲಿಸಬೇಕು ಎಂದು ಯಶವಂತ ಕುಮಾರ್‌ ಹೇಳಿದರು.

ತಹಶೀಲ್ದಾರ್‌ ಅನಿತಾಲಕ್ಷ್ಮೀ, ವಕೀಲರ ಸಂಘದ ಅಧ್ಯಕ್ಷ ಎಂ. ಎಸ್‌. ತಂತ್ರಿ, ಮಾಜಿ ಅಧ್ಯಕ್ಷ, ಸಮಾಜ ಮಂದಿರದ ಜತೆ ಕಾರ್ಯದರ್ಶಿ ಕೆ. ಆರ್‌. ಪಂಡಿತ್‌, ಜಯಪ್ರಕಾಶ್‌ ಭಂಡಾರಿ, ಮನೋಜ್‌ ಶೆಣೈ, ಪದ್ಮಪ್ರಸಾದ್‌ ಜೈನ್‌ ಸಹಿತ ವಕೀಲರು, ನ್ಯಾಯಾಲಯದ ಸಿಬಂದಿ, ಕಂದಾಯ ಇಲಾಖೆಯ ಪ್ರಕಾಶ್‌, ಸಮಾಜ ಮಂದಿರದ ಅರುಣ್‌ ಉಪಸ್ಥಿತರಿದ್ದರು.

ಕಳೆದ 18 ದಿನಗಳಿಂದ ಬೆಳಗ್ಗೆ ಹಾಗೂ ಸಂಜೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ನೀಡಲಾಗುತ್ತಿದೆ. ನಮಗೆ ಮನೆಯ ವಾತಾವರಣವೇ ಇಲ್ಲಿದೆ ಎಂಬ ಅಭಿಪ್ರಾಯವನ್ನು ಕಾರ್ಮಿಕರು ವ್ಯಕ್ತಪಡಿಸುತ್ತಿ ದ್ದಾರೆ. ಈ ಕಾರ್ಮಿಕರು ರಾತ್ರಿ ಇಲ್ಲೇ ನಿದ್ರಿಸುತ್ತಾರೆ. ಇಲ್ಲಿ ಗದಗದ 9, ರಾಯಚೂರಿನ 11, ಕೊಪ್ಪಳ ಜಿಲ್ಲೆಯ 39, ದಾವಣಗೆರೆಯ ಇಬ್ಬರು ಸಹಿತ 62 ಮಂದಿ ಇಲ್ಲಿದ್ದಾರೆ.

ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಅವರೂ ನಿತ್ಯ ಬಂದು ಕಾರ್ಮಿಕರ ಊಟೋಪಹಾರದ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿದ್ದಾರೆ. ಇವರನ್ನು ಹಾಗೂ ರಾಜ್ಯದ ವಿವಿಧೆಡೆ ಸಿಲುಕಿರುವ ಕಾರ್ಮಿಕರನ್ನು ಊರಿಗೆ ಕಳುಹಿಸಲೂ ಪ್ರಯತ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.