ಕದ್ರಿ ಸಂಗೀತ ಕಾರಂಜಿ; ಪ್ರವಾಸಿಗರಿಗೆ ತೆರೆದಿದ್ದಕ್ಕಿಂತ ಮುಚ್ಚಿದ್ದೇ ಹೆಚ್ಚು !


Team Udayavani, Feb 10, 2022, 7:41 PM IST

ಕದ್ರಿ ಸಂಗೀತ ಕಾರಂಜಿ; ಪ್ರವಾಸಿಗರಿಗೆ ತೆರೆದಿದ್ದಕ್ಕಿಂತ ಮುಚ್ಚಿದ್ದೇ ಹೆಚ್ಚು !

ಕದ್ರಿ: ದ.ಕ. ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿ ಸುವ ನಿಟ್ಟಿನಲ್ಲಿ ಕದ್ರಿ ಜಿಂಕೆ ಪಾರ್ಕ್‌ನಲ್ಲಿ ನಿರ್ಮಾಣ ಗೊಂಡ ಸಂಗೀತ ಕಾರಂಜಿ ಪ್ರವಾಸಿಗರಿಗೆ ತೆರೆದಿದ್ದಕ್ಕಿಂತ ಮುಚ್ಚಿದ್ದೇ ಹೆಚ್ಚು !

ನಾಲ್ಕು ವರ್ಷಗಳ ಹಿಂದೆ ಕದ್ರಿಯಲ್ಲಿ ಸಂಗೀತ ಕಾರಂಜಿ ಉದ್ಘಾಟನೆ ಗೊಂಡಿತ್ತು. ಈ ಪೈಕಿ ಎರಡು ವರ್ಷಗಳ ಕಾಲ ಕೋವಿಡ್‌ ಕಾರಣ ದಿಂದ ಪ್ರದರ್ಶನ ಸ್ಥಗಿತಗೊಂಡಿತ್ತು. ಉಳಿದ ಎರಡು ವರ್ಷಗಳಲ್ಲಿ ಮಳೆಗಾಲದ ನಿಟ್ಟಿನಲ್ಲಿ ಪ್ರತೀ ವರ್ಷ ಸುಮಾರು 4 ತಿಂಗಳ ಬಾಗಿಲು ಮುಚ್ಚಿತ್ತು. ಕೋವಿಡ್‌ ತೀವ್ರತೆ ಕಡಿಮೆಯಾದರೂ ಸಂಗೀತ ಕಾರಂಜಿಯಲ್ಲಿ ಸದ್ಯಕ್ಕೆ ನೀರು ಚಿಮ್ಮುವುದು ಅನುಮಾನ ಎನ್ನಲಾಗಿದೆ. ಕಾರಂಜಿ ಶೋ ಸಹಿತ ಮೂಲಸೌಕರ್ಯಕ್ಕೆಂದು ಟೆಂಡರ್‌ ಕರೆದರೂ, ಅದನ್ನು ವಹಿಸಲು ಬಿಡ್‌ದಾರರು ಮುಂದೆ ಬರದೆ ಅಂತಿಮಗೊಳ್ಳುತ್ತಿಲ್ಲ. ಮತ್ತೂಂದೆಡೆ ಸಂಘ-ಸಂಸ್ಥೆಗಳ ಸಿಎಸ್‌ಆರ್‌ ಅನುದಾನದಲ್ಲಿ ಅಥವಾ ಮುಡಾ ಮುಖೇನ ಅಭಿವೃದ್ಧಿ ಮಾಡಲು ಮಾತುಕತೆ ನಡೆಯುತ್ತಿದೆ. ಆದರೂ ಇನ್ನೂ ಅಂತಿಮಗೊಂಡಿಲ್ಲ.

ಕದ್ರಿ ಸಂಗೀತ ಕಾರಂಜಿಯಿಂದ ತಿಂಗಳಿಗೆ ಸುಮಾರು 70 ಸಾವಿರ ರೂ. ನಿರ್ವಹಣೆಯ ಖರ್ಚು ತಗಲುತ್ತದೆ. ಖರ್ಚಿನ ಶೇ. 10ರಷ್ಟು ಕೂಡ ಆದಾಯ ಬರುವುದಿಲ್ಲ.

ತಿಂಗಳಿಗೆ ಸುಮಾರು 35,000 ರೂ. ನಷ್ಟು ವಿದ್ಯುತ್‌ ಬಿಲ್‌ ಬರುತ್ತಿದೆ. ಅದರಂತೆ ಟೆಕ್ನೀಶಿಯನ್‌, ಸಿಬಂದಿಗೆ ತಿಂಗಳಿಗೆ ಒಟ್ಟಾರೆ ಸುಮಾರು 60 ಸಾವಿರ ರೂ. ಹಣ ಬೇಕು. ಕೋವಿಡ್‌ಗೂ ಮುನ್ನ ವಾರದಲ್ಲಿ ಒಂದು ದಿನ ಮಾತ್ರ ಕಾರಂಜಿ ಶೋ ನಡೆಯುತ್ತಿತ್ತು. ಕೇವಲ 5-7 ಮಂದಿ ವೀಕ್ಷಣೆಗೆ ಬರುತ್ತಿದ್ದಾರೆ. ಹೀಗಿದ್ದಾಗ ತಿಂಗಳಿಗೆ 5 ಸಾವಿರ ರೂ. ಕೂಡ ಆದಾಯ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಉಂಟಾಗಿತ್ತು. ಅದನ್ನು ಸರಿದೂಗಿಸಿ ಪ್ರವಾಸಿಗರಿಗೆ ಆಕರ್ಷಿಸುವುದು ಇನ್ನೂ ಸವಾಲಾಗಿಯೇ ಇದೆ.

ಥೀಮ್‌ನಲ್ಲೂ ಬದಲಾವಣೆ ಅಗತ್ಯ
ನೀರಿನ ನರ್ತನ ಜತೆಗೆ ಯಕ್ಷಗಾನ, ಭೂತಾರಾಧನೆ, ಕಂಬಳ, ನಾಗಮಂಡಲ ಸಹಿತ ತುಳುನಾಡಿನ ಸಂಸ್ಕೃತಿ, ಪರಂಪರೆ, ಆಚರಣೆ ಸೇರಿದಂತೆ ವಿವಿಧ ಬಗೆಯ ಥೀಮ್‌ನಲ್ಲಿ ಸಂಗೀತ ಕಾರಂಜಿ ಪ್ರದರ್ಶನಗೊಳಿಸಲಾಗುತ್ತಿತ್ತು. ಶೋ ಪ್ರಾರಂಭವಾದಾಗಿನಿಂದಲೂ ಒಂದೇ ಕಲ್ಪನೆಯಲ್ಲಿ ಶೋ ಪ್ರದರ್ಶನಗೊಳಿಸಲಾಗುತ್ತಿದ್ದು, ವೀಕ್ಷಕರು ಕಡಿಮೆಯಾಗಲು ಇದು ಕೂಡ ಕಾರಣ ಎಂದು ಹೇಳಬಹುದು.

ಕದ್ರಿ ಸಂಗೀತ ಕಾರಂಜಿ ಉದ್ಘಾಟನೆಯಾದ ಬಳಿಕ ಮೂರು ತಿಂಗಳುಗಳ ಕಾಲ ಪ್ರವೇಶ ದರ ನಿಗದಿಪಡಿಸಿರಲಿಲ್ಲ. ಆದರೆ 2018ರ ಎ. 20 ರಿಂದ ಪ್ರದರ್ಶನಕ್ಕೆ ವಯಸ್ಕರಿಗೆ 50 ರೂ. ಮತ್ತು ಮಕ್ಕಳಿಗೆ 25 ರೂ. ನಿಗದಿಪಡಿಸಲಾಗಿತ್ತು. ಪ್ರವಾಸಿಗರ ಸಂಖ್ಯೆ ಕಡಿಮೆಯಾದ ಹಿನ್ನೆಲೆಯಲ್ಲಿ ಶೋ ದರ ಇಳಿಕೆಯಾಗಿದ್ದು, 6-12 ವರ್ಷದೊಳಗಿನವರಿಗೆ 15 ರೂ., ವಯಸ್ಕರಿಗೆ 30 ರೂ. ನಿಗದಿಯಾಗಿದೆ. ದರ ಕಡಿಮೆಯಾದರೂ, ಪ್ರವಾಸಿಗರ ಸಂಖ್ಯೆಯಲ್ಲೇನೂ ಗಮನಾರ್ಹ ಏರಿಕೆ ಕಂಡಿರಲಿಲ್ಲ.

5 ಕೋಟಿ ರೂ.ನಲ್ಲಿ ನಿರ್ಮಾಣ
ಕದ್ರಿ ಜಿಂಕೆ ಪಾರ್ಕ್‌ ಬಳಿ ಹಳೆ ಮೃಗಾಲಯದಲ್ಲಿ ಮುಡಾ ವತಿಯಿಂದ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಸಂಗೀತ ಕಾರಂಜಿಯನ್ನು 2018ರ ಜ. 7ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಕಾಮಗಾರಿ ಪೂರ್ಣಗೊಂಡು ಆರು ತಿಂಗಳ ಬಳಿಕ ಕಾರಂಜಿ ಉದ್ಘಾಟಿಸಲಾಗಿತ್ತು. ಅಂದಿನ ಶಾಸಕ ಜೆ.ಆರ್‌. ಲೋಬೋ ಅವರ ನೇತೃತ್ವದಲ್ಲಿ ಸಂಗೀತ ಕಾರಂಜಿ ತಲೆ ಎತ್ತಿತ್ತು. ಕಾರಂಜಿ ಕಾಮಗಾರಿಯನ್ನು ಬೆಂಗಳೂರಿನ ಬಿಎನ್‌ಎ ಟೆಕ್ನಾಲಜಿ ಕಂಪೆನಿ ವಹಿಸಿತ್ತು. ಇಲ್ಲಿ ಬಣ್ಣದ ಕಾರಂಜಿ ಮಾತ್ರವಲ್ಲದೆ, ಲೇಸರ್‌ ಲೈಟ್‌ ತಂತ್ರಜ್ಞಾನ ವ್ಯವಸ್ಥೆಯನ್ನು ಬಳಸಲಾಗಿದೆ.

ಸೊಳ್ಳೆ ಉತ್ಪತ್ತಿ ತಾಣವಾಗುತ್ತಿದೆ ಕಾರಂಜಿ ಕೊಳ
ಕದ್ರಿಯ ಜಿಂಕೆ ಉದ್ಯಾನವನದಲ್ಲಿರುವ ಸಂಗೀತ ಕಾರಂಜಿಯಲ್ಲಿ ನೀರು ಚಿಮ್ಮದೆ ಎರಡು ವರ್ಷ ಕಳೆಯುತ್ತಿದೆ. ಕಾರಂಜಿ ಕೊಳದಲ್ಲಿ ಪೈಪ್‌ಲೈನ್‌ ಸುತ್ತಮುತ್ತ ಕೊಳಚೆ ನೀರು ತುಂಬಿಕೊಂಡಿದೆ. ಸುತ್ತಲೂ ಪಾಚಿಯಿಂದಾಗಿ ಸೊಳ್ಳೆ ಉತ್ಪತ್ತಿ ತಾಣವಾಗಿ ಮಾರ್ಪಾಡಾಗುತ್ತಿದೆ. ಇದಕ್ಕೆ ಹೊಂದಿಕೊಂಡಿರುವ ಪಾರ್ಕ್‌ಗೆ ಪ್ರತೀ ದಿನ ಹತ್ತಾರು ಮಂದಿ ಆಗಮಿಸುತ್ತಿದ್ದು, ಆ ಪ್ರದೇಶದಲ್ಲಿ ಸೊಳ್ಳೆ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ ಎನ್ನುತ್ತಾರೆ ಸ್ಥಳೀಯರು.

ಕಾರಂಜಿ ಆರಂಭಗೊಂಡಿಲ್ಲ
ಕದ್ರಿಯ ಜಿಂಕೆ ಪಾರ್ಕ್‌ ಮಾತ್ರ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿದೆ. ಆದರೆ, ಕೋವಿಡ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸಂಗೀತ ಕಾರಂಜಿ ಇನ್ನೂ ಆರಂಭಗೊಂಡಿಲ್ಲ. ಕಾರಂಜಿಯ ನಿರ್ವಹಣೆಯ ಕುರಿತಂತೆ ಟೆಂಡರ್‌ ಇನ್ನೂ ಅಂತಿಮಗೊಂಡಿಲ್ಲ. ಈ ಬಗ್ಗೆ ಜಿಲ್ಲಾಡಳಿತದ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ.
-ಜಾನಕಿ,
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.