ಕರ್ಣಾಟಕ ಬ್ಯಾಂಕ್‌: ಚೇರ್‌ಮನ್‌ ಆಗಿ ಜಯರಾಮ್‌ ಭಟ್‌, ಎಂಡಿ-ಸಿಇಒ ಆಗಿ ಮಹಾಬಲೇಶ್ವರ ಎಂ.ಎಸ್‌


Team Udayavani, Apr 14, 2020, 10:41 AM IST

ಕರ್ಣಾಟಕ ಬ್ಯಾಂಕ್‌: ಚೇರ್‌ಮನ್‌ ಆಗಿ ಜಯರಾಮ್‌ ಭಟ್‌, ಎಂಡಿ-ಸಿಇಒ ಆಗಿ ಮಹಾಬಲೇಶ್ವರ ಎಂ.ಎಸ್‌

ಮಂಗಳೂರು: ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಅಗ್ರಪಂಕ್ತಿಯಲ್ಲಿರುವ ಕರ್ಣಾಟಕ ಬ್ಯಾಂಕಿನ ಚೇರ್‌ಮನ್‌ ಆಗಿ ಪಿ. ಜಯರಾಮ್‌ ಭಟ್‌ ಹಾಗೂ ಮ್ಯಾನೇಜಿಂಗ್‌ ಡೈರೆಕ್ಟರ್‌ ಮತ್ತು ಚೀಫ್‌ ಎಕ್ಸಿಕ್ಯೂಟಿವ್‌ ಆಫೀಸರ್‌ ಆಗಿ ಮಹಾಬಲೇಶ್ವರ ಎಂ.ಎಸ್‌. ಅವರು ಭಾರತೀಯ ರಿಸರ್ವ್‌ ಬ್ಯಾಂಕಿನ ಅನುಮೋದನೆಯಂತೆ ಎರಡನೇ ಅವಧಿಗೆ ಪುನರಾಯ್ಕೆಗೊಂಡಿದ್ದಾರೆ.

ಈ ಆದೇಶದ ಅನ್ವಯ ಪಿ. ಜಯರಾಮ್‌ ಭಟ್‌ ಅವರು 2021ರ ನ. 13ರ ಅವಧಿಯವರೆಗೆ ಚೇರ್‌ಮನ್‌ ಆಗಿ ಮುಂದುವರಿದರೆ, ಮಹಾಬಲೇಶ್ವರ ಎಂ.ಎಸ್‌. ಅವರು ಮುಂದಿನ ಮೂರು ವರ್ಷಗಳ ಪರ್ಯಂತ ಬ್ಯಾಂಕಿನ ಮ್ಯಾನೇಜಿಂಗ್‌ ಡೈರೆಕ್ಟರ್‌ ಹಾಗೂ ಚೀಫ್‌ ಎಕ್ಸಿಕ್ಯೂಟಿವ್‌ ಆಫೀಸರ್‌ ಆಗಿ ಬ್ಯಾಂಕನ್ನು ಮುನ್ನಡೆಸಲಿದ್ದಾರೆ.

ತಮ್ಮ ಮರು ಆಯ್ಕೆಯ ಬಗ್ಗೆ ಹರ್ಷವ್ಯಕ್ತಪಡಿಸಿದ ಮಹಾಬಲೇಶ್ವರ ಎಂ.ಎಸ್‌. ಅವರು, “ಮೂರು ವರ್ಷಗಳ ಕಾಲ ಬ್ಯಾಂಕಿನ ಚುಕ್ಕಾಣಿಯನ್ನು ಹಿಡಿದು ಮುನ್ನಡೆಸುವ ಅವಕಾಶ ದೊರಕಿದ್ದು ನನ್ನ ಸೌಭಾಗ್ಯ ಮತ್ತು ಹೆಮ್ಮೆಯ ವಿಷಯ.

ಯೋಗಾಯೋಗವೋ ಎಂಬಂತೆ ನನ್ನ ಮಾರ್ಗ ದರ್ಶಕರಾಗಿರುವ ಪಿ. ಜಯರಾಮ್‌ ಭಟ್‌ ಅವರೂ ಎರಡನೇ ಅವಧಿಗೆ ಪುನರಾಯ್ಕೆ ಗೊಂಡು ಇನ್ನೂ ಒಂದೂವರೆ ವರ್ಷ ನಮಗೆ ಮಾರ್ಗದರ್ಶನ ನೀಡಲಿದ್ದಾರೆ. ನಾನು ಮ್ಯಾನೇಜಿಂಗ್‌ ಡೈರೆಕ್ಟರ್‌ ಹಾಗೂ ಚೀಫ್‌ ಎಕ್ಸಿಕ್ಯೂಟಿವ್‌ ಆಫೀಸರ್‌ ಆಗಿ ಆಯ್ಕೆಯಾದಾ ಗಿನಿಂದಲೂ ಪಿ. ಜಯರಾಮ್‌ ಭಟ್‌ ಹಾಗೂ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು ನೀಡಿದ ಸಂಪೂರ್ಣ ಬೆಂಬಲ ಹಾಗೂ ಮಾರ್ಗದರ್ಶನಕ್ಕಾಗಿ ಅವರಿಗೆ ವಿಶೇಷ ಕೃತಜ್ಞತೆಗಳು’ ಎಂದರು.

“ಒಂದು ಕೋಟಿಗೂ ಮಿಕ್ಕಿದ ಸಂತೃಪ್ತ ಗ್ರಾಹಕರ ಆಶೀರ್ವಾದ, ಅಹರ್ನಿಶಿ ದುಡಿಯುವ 8,500ಕ್ಕೂ ಮಿಕ್ಕಿದ ನನ್ನ ಸಹೋದ್ಯೋಗಿಗಳ ಸಹಕಾರಕ್ಕಾಗಿ ನಾನು ಚಿರಋಣಿ. ಭಾರತೀಯ ರಿಸರ್ವ್‌ ಬ್ಯಾಂಕಿನ ಅನನ್ಯ ಬೆಂಬಲ, ಮಾರ್ಗ ದರ್ಶನ ಕ್ಕಾಗಿ ಅಭಿನಂದನೆ’ ಎಂದರು.

ಪ್ರಗತಿಗೆ ಒತ್ತು
ವಿಶ್ವವು ಹಿಂದೆಂದೂ ಕಂಡು ಕೇಳರಿಯದ ಕೋವಿಡ್‌-19 ಎಂಬ ಮಹಾಮಾರಿಗೆ ಸಿಕ್ಕಿ ನಲುಗುತ್ತಿದ್ದು, ಮುಂದೆ ಆರ್ಥಿಕ ಹಿಂಜರಿತಗಳು ವಿಶ್ವದ ಆರ್ಥಿಕತೆಗೆ ದೊಡ್ಡ ಸವಾಲಾಗುವ ಸಂಶಯಗಳು ವ್ಯಕ್ತ ವಾಗುತ್ತಲಿವೆ. ಇಂತಹ ಸಂಕಷ್ಟದ ಸ್ಥಿತಿಯನ್ನು ಎದುರಿಸಲು ಕರ್ಣಾಟಕ ಬ್ಯಾಂಕ್‌ ಸರ್ವ ಸನ್ನದ್ಧವಾಗಿದೆ.

ಉತ್ತಮ ಆಡಳಿತ ವನ್ನು ನೀಡುವುದು ಹಾಗೂ ಬ್ಯಾಂಕಿನ ಸರ್ವ ಪಾಲುದಾರರ ಮೌಲ್ಯ ಸಂವರ್ಧನೆಗೆ ಅವಿರತ ಶ್ರಮಿಸುವುದಲ್ಲದೆ ಬ್ಯಾಂಕನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ನಾವು ಕಟಿಬದ್ಧರಾಗಿದ್ದೇವೆ. ಮುಂಬರುವ ದಿನಗಳು ತುಂಬಾ ಫಲಪ್ರದ ವಾಗುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಿ, ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಲಿದ್ದೇವೆ’ ಎಂದು ಮಹಾಬಲೇಶ್ವರ ಅವರು ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.