ನ.5ರಂದು ಮಂಗಳೂರಿನಲ್ಲಿ ನಡೆಯಲಿದೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ
Team Udayavani, Nov 1, 2020, 3:55 PM IST
ಮಂಗಳೂರು: ನಗರದಲ್ಲಿ ನ.5ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ ಜರಗಲಿದ್ದು ಇದರಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸೇರಿದಂತೆ ಪಕ್ಷದ 120 ಮಂದಿ ಪ್ರಮುಖರು ಭಾಗವಹಿಸಲಿದ್ದಾರೆ.
ಸಭೆಯ ಸಿದ್ದತೆ ಹಾಗೂ ಕಾರ್ಯಸೂಚಿ ಕುರಿತು ರವಿವಾರ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುದರ್ಶನ ಎಂ.ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಇದನ್ನೂ ಓದಿ:ಉತ್ತರಪ್ರದೇಶದಂತೆ ಬಿಹಾರದಲ್ಲೂ ‘ಯುವರಾಜ’ರನ್ನು ಜನತೆ ಮನೆಗೆ ಕಳುಹಿಸುತ್ತಾರೆ: ಪ್ರಧಾನಿ ಮೋದಿ
ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯುವ ಸಭೆಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂತಾದವರು ಭಾಗವಹಿಸಲಿದ್ದಾರೆ.