ಕಿಂಡಿ ಅಣೆಕಟ್ಟು ಕಾಮಗಾರಿ ಶೇ. 90ರಷ್ಟು ಪೂರ್ಣ
ಮುಚ್ಚೂರು ಕಾನ :4 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯ
Team Udayavani, May 3, 2022, 10:05 AM IST
ಬಜಪೆ: ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಮುಚ್ಚಾರು ಕಾನ ಕಿಂಡಿ ಅಣೆಕಟ್ಟು ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಈ ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಮುಚ್ಚಾರು, ನಿಡ್ಡೋಡಿ, ತೆಂಕ ಮಿಜಾರು ಗ್ರಾಮದ ಸುಮಾರು 2 ಸಾವಿರ ಎಕರೆ ಕೃಷಿ ಜಮೀನಿಗೆ ಇದು ಪ್ರಯೋಜನವಾಗಲಿದೆ. ಜತೆಗೆ ಗ್ರಾ.ಪಂ. ಕುಡಿಯುವ ನೀರಿನ ಕೊಳವೆ ಬಾವಿಗಳಿಗೆ ಹಾಗೂ ಸುತ್ತಮುತ್ತ ಬಾವಿಗಳಿಗೆ ಅಂತರ್ಜಲ ವೃದ್ಧಿಗೂ ಸಹ ಅನುಕೂಲವಾಗಲಿದೆ.
ಜಿ.ಪಂ. ಮಾಜಿ ಸದಸ್ಯ ಜನಾರ್ದನ ಗೌಡ ಪ್ರಸ್ತಾವನೆಯ ಮೇರೆಗೆ ಶಾಸಕ ಡಾ|ಭರತ್ ಶೆಟ್ಟಿ ವೈ. ಅವರು ಸಣ್ಣ ನೀರಾವರಿ ಯೋಜನೆಗೆ ಅನುದಾನ ನೀಡಿದ್ದರು. ಫೆ. 15ಕ್ಕೆ ಈ ಕಾಮಗಾರಿಯ ಕಾರ್ಯ ಆರಂಭ ಗೊಂಡಿತ್ತು. ಮೇ 15ರಂದು ಅಣೆಕಟ್ಟಿನ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಗುತ್ತಿಗೆದಾರ ಉದಯ ಕುಮಾರ್ ಶೆಟ್ಟಿ ಕುಂದಾಪುರ ತಿಳಿಸಿದ್ದಾರೆ.
ಕಿಂಡಿ ಅಣೆಕಟ್ಟು ಸುಮಾರು 32 ಮೀ. ಉದ್ದ ಹಾಗೂ 4 ಮೀ. ಎತ್ತರವಿದೆ. ಕಂಬದಿಂದ ಕಂಬಕ್ಕೆ ಸುಮಾರು 2 ಮೀಟರ್ ಅಂತರವಿದೆ. 4 ವರ್ಷಗಳ ಹಿಂದೆ ಮುಚ್ಚಾರು ಕಾನದ ಹಳೆಯ ಕಿಂಡಿ ಅಣೆಕಟ್ಟು ಶಿಥಿಲ ಗೊಂಡ ಕಾರಣ ಮುಚ್ಚಾರು ಗ್ರಾ.ಪಂ. ವಾಪ್ತಿಯಲ್ಲಿ ಕುಡಿಯುವ ನೀರಿನ ಕೊಳವೆ ಬಾವಿಗಳಿಗೆ, ಕೃಷಿಕರಿಗೆ ಬಹಳ ಸಮಸ್ಯೆಯಾಗಿತ್ತು. ಈ ಯೋಜನೆಯಿಂದ ಕೃಷಿಕರಿಗೆ ಹಾಗೂ ಕೊಳವೆ ಬಾವಿಗಳಿಗೆ ಬಹಳ ಉಪಯೋಗವಾಗಲಿದೆ. ನಾವು ಸಲ್ಲಿಸಿದ ಬೇಡಿಕೆಗೆ ನಮ್ಮ ಶಾಸಕ ಡಾ| ಭರತ್ ಶೆಟ್ಟಿ ವೈ. ಯೋಜನೆಗೆ ಅನುದಾನ ಒದಗಿಸಿ ಸಹಕರಿಸಿದ್ದಾರೆ ಎಂದು ಮುಚ್ಚಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಎ.ಎಸ್. ಹೇಳಿದ್ದಾರೆ.
ಜಲಜೀವನ ಮಿಷನ್ ಮೂಲಕ ಗ್ರಾಮ ಗ್ರಾಮಗಳಲ್ಲಿ ಓವರ್ ಹೆಡ್ ಟ್ಯಾಂಕ್ಗಳು, ಅದಕ್ಕೆ ಸಂಪರ್ಕಿಸುವ ಪೈಪ್ಲೈನ್ಗಳು ನಿರ್ಮಾಣವಾಗುತ್ತಿದೆ. ಇನ್ನೊಂದೆಡೆ ಪಶ್ಚಿಮ ವಾಹಿನಿ ಹಾಗೂ ಸಣ್ಣ ನೀರಾವರಿ ಯೋಜನೆಯಡಿ ಕಿಂಡಿ ಅಣೆಕಟ್ಟುಗಳು ನಿರ್ಮಾಣವಾಗುತ್ತಿದೆ. ಕಿಂಡಿ ಅಣೆಕಟ್ಟುಗಳು ಅಂತರ್ಜಲ ವೃದ್ಧಿಗೆ ಸಹಕಾರಿಯಾಗಿದೆ. ಒವರ್ ಹೆಡ್ ಟ್ಯಾಂಕ್ಗಳು ನೀರು ಸರಬರಾಜುಗಳ ಸಂಪರ್ಕ ವ್ಯವಸ್ಥೆಗೆ ಸಹಕಾರಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ