ವಿಶೇಷ ವರದಿ: ಕೊಡಿಯಾಲ್‌ಗ‌ುತ್ತು ಕ್ರಾಸ್‌: ಸಮಸ್ಯೆ ತಪ್ಪಿದ್ದಲ್ಲ

ವರ್ಷದೊಳಗೆ ಒಂದೇ ರಸ್ತೆ ನಾಲ್ಕು ಬಾರಿ ಅಗೆತ !

Team Udayavani, May 25, 2020, 10:03 AM IST

ಕೊಡಿಯಾಲ್‌ಗ‌ುತ್ತು ಕ್ರಾಸ್‌: ಸಮಸ್ಯೆ ತಪ್ಪಿದ್ದಲ್ಲ

ಮಂಗಳೂರು: ಮಂಗಳೂರು ನಗರದ ಜೈಲು ರಸ್ತೆಯಿಂದ ಬಿಜೈಗೆ ಸಂಪರ್ಕ ಕಲ್ಪಿಸುವ ಕೊಡಿಯಾಲ್‌ಗ‌ುತ್ತು ಕ್ರಾಸ್‌ ರಸ್ತೆ ಅಕ್ಕ-ಪಕ್ಕದಲ್ಲೇ ಕಳೆದ ಒಂದು ವರ್ಷಗಳಿಂದ ನಾಲ್ಕು ಬಾರಿ ಕಾಮಗಾರಿಯ ನೆಪದಲ್ಲಿ ಅಗೆಯಲಾಗಿದೆ. ಜತೆಗೆ ಸಮಸ್ಯೆಗಳು ಪುನರಾವರ್ತನೆಯಾಗುತ್ತಲೇ ಇವೆ.

ಸ್ಥಳೀಯರಿಗೆ ಕಿರಿಕಿರಿ
ಲಕ್ಷಾಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡುವುದರೊಂದಿಗೆ ರಸ್ತೆಯಲ್ಲಿ ಸಾಗುವ ಸ್ಥಳೀಯರಿಗೆ, ವಾಹನ ಸವಾರರಿಗೆ ಅಡ್ಡಿಯುಂಟಾಗುತ್ತಿದೆ. ಈ ಜಾಗದಲ್ಲಿ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕುವ ಪ್ರಯತ್ನವನ್ನು ಪಾಲಿಕೆ ಮಾಡಿಲ್ಲ ಎನ್ನುವುದು ಆರೋಪ.

ಕೃತಕ ನೆರೆ
ಜೋರಾಗಿ ಮಳೆ ಬಂದರೆ ಈ ಪ್ರದೇಶದ ಸುತ್ತಮುತ್ತಲಿನ ಮನೆಗೆ ಕೃತಕ ನೆರೆ ಉಂಟಾಗುತ್ತದೆ. ಮಳೆ ನೀರು ಹರಿಯುವ ಚರಂಡಿ ವ್ಯವಸ್ಥೆ ಸಮರ್ಪಕವಾಗಿರದ ಕಾರಣ, ಮಳೆ ನೀರು ರಾಜಕಾಲುವೆಯನ್ನು ಸೇರುತ್ತಿಲ್ಲ. ಬದಲಾಗಿ ರಸ್ತೆಯಲ್ಲಿಯೇ ಹರಿದು ಅಕ್ಕ-ಪಕ್ಕದ ಫ್ಲಾಟ್‌, ಮನೆಗಳಿಗೆ ನುಗ್ಗುತ್ತಿದೆ. ಕಳೆದ ವರ್ಷ ಕೂಡ ಇದೇ ರೀತಿಯ ಸಮಸ್ಯೆ ಉಂಟಾಗಿ ರಸ್ತೆ ಅಗೆದು ಕಾಮಗಾರಿ ನಡೆಸಲಾಗಿತ್ತು. ಇದೀಗ ಶನಿವಾರದಿಂದ ಮತ್ತೂಮ್ಮೆ ರಸ್ತೆ ಅಗೆಯುವ ಕೆಲಸದಲ್ಲಿ ಪಾಲಿಕೆ ತೊಡಗಿಸಿಕೊಂಡಿದೆ.

ಹಲವು ಬಾರಿ ಕೆಲಸ
ಈ ರಸ್ತೆಯಲ್ಲಿ ಹಾದು ಹೋಗುವ ನೀರಿನ ಪೈಪ್‌ಲೈನ್‌ ಕೆಲ ತಿಂಗಳ ಹಿಂದೆ ಕೆಟ್ಟಿತ್ತು. ಇದೇ ಕಾಮಗಾರಿಗೆ ಡ್ರಿಲ್ಲಿಂಗ್‌ ಮಷೀನ್‌ ಮುಖೇನ ರಸ್ತೆ ಅಗೆಯಲಾಗಿತ್ತು. ಈ ಕಾಮಗಾರಿ ನಡೆಯುತ್ತಿರುವ ಕೂಗಳತೆ ದೂರದಲ್ಲಿ ಒಳಚರಂಡಿ ಕಾಮಗಾರಿಗೆಂದು ಸುಮಾರು 5 ಅಡಿಯಷ್ಟು ಆಳ ರಸ್ತೆ ಅಗೆಯಲಾಗಿತ್ತು. ಭಾರೀ ಮಳೆಯಿಂದಾಗಿ ಈ ಭಾಗದ ಒಳಚರಂಡಿ ಪೈಪ್‌ಲೈನ್‌ನ ಹತ್ತು ಅಡಿ ಆಳದಲ್ಲಿ ದೊಡ್ಡ ಗಾತ್ರದ ಕಲ್ಲು ಸಿಲುಕಿ ಹಾಕಿಕೊಂಡಿದ್ದರಿಂದ ನೀರು ಹರಿಯುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಸುಮಾರು ಎರಡು ವಾರಗಳ ಬಳಿಕ ಕಾಮಗಾರಿ ಪೂರ್ಣಗೊಂಡಿತ್ತು.

ಈ ಕಾಮಗಾರಿ ಪೂರ್ಣಗೊಂಡ ಕೆಲವು ದಿನಗಳಲ್ಲೇ ಒಳಚರಂಡಿ ನೀರು ರಸ್ತೆಗೆ ಹರಿಯುತ್ತಿದೆ ಎಂಬ ಕಾರಣಕ್ಕೆ ಪಿಂಟೋ ಬೇಕರಿ ಸಮೀಪ ರಸ್ತೆ ಅಗೆಯಲಾಗಿತ್ತು.
ಬಳಿಕ ಪಕ್ಕದ ಮ್ಯಾನ್‌ಹೋಲ್‌ಗೆ ಪೈಪ್‌ಲೈನ್‌ ಸಂಪರ್ಕ ನೀಡಲಾಯಿತು. ಈವರೆಗೆ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

 ಪರಿಹಾರ
ಕಳೆದ ಮಳೆಗಾಲದಲ್ಲಿ ಚರಂಡಿಯಲ್ಲಿ ನೀರು ಹರಿಯದೆ ಸುತ್ತಮುತ್ತಲಿನ ಮನೆಗಳಿಗೆ ನುಗ್ಗಿತ್ತು. ಅದೇ ಕಾರಣಕ್ಕೆ ಚರಂಡಿ ಕಾಮಗಾರಿ ಶನಿವಾರ ಆರಂಭಗೊಂಡಿದ್ದು, ಎರಡು ವಾರದಲ್ಲಿ ಪೂರ್ಣಗೊಳ್ಳಲಿದೆ. ಕಳೆದ ಬಾರಿ ಮಾಡಿದ್ದ ಕಾಮಗಾರಿ ಸಮರ್ಪಕವಾಗಿಲ್ಲ. ಇದೇ ಕಾರಣಕ್ಕೆ ಆ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಿಲ್ಲ. ಈ ಬಾರಿ ಖಂಡಿತವಾಗಿಯೂ ಸಮಸ್ಯೆಗೆ ಪರಿಹಾರ ಸಿಗುತ್ತದೆ.
 -ಯಶವಂತ್‌, ಸ್ಥಳೀಯ ಕಾರ್ಪೊರೇಟರ್‌.

 ದೂರಿನ ಹಿನ್ನೆಲೆ
ಕೊಡಿಯಾಲ್‌ಗ‌ುತ್ತು ಕ್ರಾಸ್‌ ಬಳಿ ನೀರು ಹರಿಯುವ ತೋಡಿಗೆ ಚರಂಡಿ ಸಂಪರ್ಕ ಕಲ್ಪಿಸಲಾಗುತ್ತಿದೆ. ವಿವಿಧ ಕಡೆಗಳಿಂದ ಹರಿದು ಬಂದ ಮಳೆ ನೀರು ಚರಂಡಿ ಸೇರದೆ ಕೃತಕ ನೆರೆ ಬರುತ್ತಿತ್ತು. ಮನೆ ಮಂದಿ ಈ ಬಗ್ಗೆ ದೂರು ನೀಡಿದ್ದು, ಕಾಮಗಾರಿ ಆರಂಭಿಸಲಾಗಿದೆ. ಈ ಹಿಂದೆ ನಡೆದ ಕಾಮಗಾರಿ ಬಗ್ಗೆ ಇಂಜಿನಿಯರ್‌ ಅವರೇ ಉತ್ತರಿಸಬೇಕು.
 -ಸುಧೀರ್‌ ಶೆಟ್ಟಿ ಕಣ್ಣೂರು ಸ್ಥಳೀಯ ಕಾರ್ಪೊರೇಟರ್‌.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.