![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ವಿಶೇಷ ವರದಿ: ಕೊಡಿಯಾಲ್ಗುತ್ತು ಕ್ರಾಸ್: ಸಮಸ್ಯೆ ತಪ್ಪಿದ್ದಲ್ಲ
ವರ್ಷದೊಳಗೆ ಒಂದೇ ರಸ್ತೆ ನಾಲ್ಕು ಬಾರಿ ಅಗೆತ !
Team Udayavani, May 25, 2020, 10:03 AM IST
![ಕೊಡಿಯಾಲ್ಗುತ್ತು ಕ್ರಾಸ್: ಸಮಸ್ಯೆ ತಪ್ಪಿದ್ದಲ್ಲ](https://www.udayavani.com/wp-content/uploads/2020/05/kodiyalguttu-cross-620x414.jpg)
ಮಂಗಳೂರು: ಮಂಗಳೂರು ನಗರದ ಜೈಲು ರಸ್ತೆಯಿಂದ ಬಿಜೈಗೆ ಸಂಪರ್ಕ ಕಲ್ಪಿಸುವ ಕೊಡಿಯಾಲ್ಗುತ್ತು ಕ್ರಾಸ್ ರಸ್ತೆ ಅಕ್ಕ-ಪಕ್ಕದಲ್ಲೇ ಕಳೆದ ಒಂದು ವರ್ಷಗಳಿಂದ ನಾಲ್ಕು ಬಾರಿ ಕಾಮಗಾರಿಯ ನೆಪದಲ್ಲಿ ಅಗೆಯಲಾಗಿದೆ. ಜತೆಗೆ ಸಮಸ್ಯೆಗಳು ಪುನರಾವರ್ತನೆಯಾಗುತ್ತಲೇ ಇವೆ.
ಸ್ಥಳೀಯರಿಗೆ ಕಿರಿಕಿರಿ
ಲಕ್ಷಾಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡುವುದರೊಂದಿಗೆ ರಸ್ತೆಯಲ್ಲಿ ಸಾಗುವ ಸ್ಥಳೀಯರಿಗೆ, ವಾಹನ ಸವಾರರಿಗೆ ಅಡ್ಡಿಯುಂಟಾಗುತ್ತಿದೆ. ಈ ಜಾಗದಲ್ಲಿ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕುವ ಪ್ರಯತ್ನವನ್ನು ಪಾಲಿಕೆ ಮಾಡಿಲ್ಲ ಎನ್ನುವುದು ಆರೋಪ.
ಕೃತಕ ನೆರೆ
ಜೋರಾಗಿ ಮಳೆ ಬಂದರೆ ಈ ಪ್ರದೇಶದ ಸುತ್ತಮುತ್ತಲಿನ ಮನೆಗೆ ಕೃತಕ ನೆರೆ ಉಂಟಾಗುತ್ತದೆ. ಮಳೆ ನೀರು ಹರಿಯುವ ಚರಂಡಿ ವ್ಯವಸ್ಥೆ ಸಮರ್ಪಕವಾಗಿರದ ಕಾರಣ, ಮಳೆ ನೀರು ರಾಜಕಾಲುವೆಯನ್ನು ಸೇರುತ್ತಿಲ್ಲ. ಬದಲಾಗಿ ರಸ್ತೆಯಲ್ಲಿಯೇ ಹರಿದು ಅಕ್ಕ-ಪಕ್ಕದ ಫ್ಲಾಟ್, ಮನೆಗಳಿಗೆ ನುಗ್ಗುತ್ತಿದೆ. ಕಳೆದ ವರ್ಷ ಕೂಡ ಇದೇ ರೀತಿಯ ಸಮಸ್ಯೆ ಉಂಟಾಗಿ ರಸ್ತೆ ಅಗೆದು ಕಾಮಗಾರಿ ನಡೆಸಲಾಗಿತ್ತು. ಇದೀಗ ಶನಿವಾರದಿಂದ ಮತ್ತೂಮ್ಮೆ ರಸ್ತೆ ಅಗೆಯುವ ಕೆಲಸದಲ್ಲಿ ಪಾಲಿಕೆ ತೊಡಗಿಸಿಕೊಂಡಿದೆ.
ಹಲವು ಬಾರಿ ಕೆಲಸ
ಈ ರಸ್ತೆಯಲ್ಲಿ ಹಾದು ಹೋಗುವ ನೀರಿನ ಪೈಪ್ಲೈನ್ ಕೆಲ ತಿಂಗಳ ಹಿಂದೆ ಕೆಟ್ಟಿತ್ತು. ಇದೇ ಕಾಮಗಾರಿಗೆ ಡ್ರಿಲ್ಲಿಂಗ್ ಮಷೀನ್ ಮುಖೇನ ರಸ್ತೆ ಅಗೆಯಲಾಗಿತ್ತು. ಈ ಕಾಮಗಾರಿ ನಡೆಯುತ್ತಿರುವ ಕೂಗಳತೆ ದೂರದಲ್ಲಿ ಒಳಚರಂಡಿ ಕಾಮಗಾರಿಗೆಂದು ಸುಮಾರು 5 ಅಡಿಯಷ್ಟು ಆಳ ರಸ್ತೆ ಅಗೆಯಲಾಗಿತ್ತು. ಭಾರೀ ಮಳೆಯಿಂದಾಗಿ ಈ ಭಾಗದ ಒಳಚರಂಡಿ ಪೈಪ್ಲೈನ್ನ ಹತ್ತು ಅಡಿ ಆಳದಲ್ಲಿ ದೊಡ್ಡ ಗಾತ್ರದ ಕಲ್ಲು ಸಿಲುಕಿ ಹಾಕಿಕೊಂಡಿದ್ದರಿಂದ ನೀರು ಹರಿಯುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಸುಮಾರು ಎರಡು ವಾರಗಳ ಬಳಿಕ ಕಾಮಗಾರಿ ಪೂರ್ಣಗೊಂಡಿತ್ತು.
ಈ ಕಾಮಗಾರಿ ಪೂರ್ಣಗೊಂಡ ಕೆಲವು ದಿನಗಳಲ್ಲೇ ಒಳಚರಂಡಿ ನೀರು ರಸ್ತೆಗೆ ಹರಿಯುತ್ತಿದೆ ಎಂಬ ಕಾರಣಕ್ಕೆ ಪಿಂಟೋ ಬೇಕರಿ ಸಮೀಪ ರಸ್ತೆ ಅಗೆಯಲಾಗಿತ್ತು.
ಬಳಿಕ ಪಕ್ಕದ ಮ್ಯಾನ್ಹೋಲ್ಗೆ ಪೈಪ್ಲೈನ್ ಸಂಪರ್ಕ ನೀಡಲಾಯಿತು. ಈವರೆಗೆ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.
ಪರಿಹಾರ
ಕಳೆದ ಮಳೆಗಾಲದಲ್ಲಿ ಚರಂಡಿಯಲ್ಲಿ ನೀರು ಹರಿಯದೆ ಸುತ್ತಮುತ್ತಲಿನ ಮನೆಗಳಿಗೆ ನುಗ್ಗಿತ್ತು. ಅದೇ ಕಾರಣಕ್ಕೆ ಚರಂಡಿ ಕಾಮಗಾರಿ ಶನಿವಾರ ಆರಂಭಗೊಂಡಿದ್ದು, ಎರಡು ವಾರದಲ್ಲಿ ಪೂರ್ಣಗೊಳ್ಳಲಿದೆ. ಕಳೆದ ಬಾರಿ ಮಾಡಿದ್ದ ಕಾಮಗಾರಿ ಸಮರ್ಪಕವಾಗಿಲ್ಲ. ಇದೇ ಕಾರಣಕ್ಕೆ ಆ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಿಲ್ಲ. ಈ ಬಾರಿ ಖಂಡಿತವಾಗಿಯೂ ಸಮಸ್ಯೆಗೆ ಪರಿಹಾರ ಸಿಗುತ್ತದೆ.
-ಯಶವಂತ್, ಸ್ಥಳೀಯ ಕಾರ್ಪೊರೇಟರ್.
ದೂರಿನ ಹಿನ್ನೆಲೆ
ಕೊಡಿಯಾಲ್ಗುತ್ತು ಕ್ರಾಸ್ ಬಳಿ ನೀರು ಹರಿಯುವ ತೋಡಿಗೆ ಚರಂಡಿ ಸಂಪರ್ಕ ಕಲ್ಪಿಸಲಾಗುತ್ತಿದೆ. ವಿವಿಧ ಕಡೆಗಳಿಂದ ಹರಿದು ಬಂದ ಮಳೆ ನೀರು ಚರಂಡಿ ಸೇರದೆ ಕೃತಕ ನೆರೆ ಬರುತ್ತಿತ್ತು. ಮನೆ ಮಂದಿ ಈ ಬಗ್ಗೆ ದೂರು ನೀಡಿದ್ದು, ಕಾಮಗಾರಿ ಆರಂಭಿಸಲಾಗಿದೆ. ಈ ಹಿಂದೆ ನಡೆದ ಕಾಮಗಾರಿ ಬಗ್ಗೆ ಇಂಜಿನಿಯರ್ ಅವರೇ ಉತ್ತರಿಸಬೇಕು.
-ಸುಧೀರ್ ಶೆಟ್ಟಿ ಕಣ್ಣೂರು ಸ್ಥಳೀಯ ಕಾರ್ಪೊರೇಟರ್.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.