ಮೂಡುಬಿದಿರೆ: ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಜಯರಾಮ ಹೆಗ್ಡೆ ನಿಧನ


Team Udayavani, Nov 23, 2022, 4:24 PM IST

17

ಮೂಡುಬಿದಿರೆ: ಅನಿವಾಸಿ ಉದ್ಯಮಿ, ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ   ಸ್ಥಾಪಕ ಮತ್ತು ಆಡಳಿತ ಮೊಕ್ತೇಸರ ಕೊಡ್ಯಡ್ಕ ಜಯರಾಮ ಹೆಗ್ಡೆ (73) ಅನಾರೋಗ್ಯದಿಂದ ನ.23ರ ಮಂಗಳವಾರ ಮಧ್ಯಾಹ್ನ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

23ನೇ ವಯಸ್ಸಿನಲ್ಲಿ ಮಸ್ಕತ್ ನಲ್ಲಿ ಎಲೆಕ್ಟ್ರಿಕಲ್ ಹಾರ್ಡ್ ವೇರ್ ಶೋರೂಮ್ ಆರಂಭಿಸಿದ್ದರು. ನಂತರ ಹೋಟೇಲ್ ಉದ್ಯಮಕ್ಕೆ ಕಾಲಿರಿಸಿ ಯಶಸ್ವಿ ಉದ್ಯಮಿ ಎನಿಸಿಕೊಂಡರು.

1996ರಲ್ಲಿ ಕೊಡ್ಯಡ್ಕದಲ್ಲಿ ಅನ್ನಪೂರ್ಣೇಶ್ವರಿ ದೇವಸ್ಥಾನ ಕಟ್ಟಿಸಿ, ಅದನ್ನೊಂದು ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೇ ಪ್ರವಾಸಿ ಆಕರ್ಷಣೆಯ ತಾಣವಾಗಿ, ಶಿಸ್ತು, ಸೌಂದರ್ಯ ಪ್ರಜ್ಞೆಯ ಆರಾಧನಾ ಕೇಂದ್ರವನ್ನಾಗಿ ರೂಪಿಸಿದರು.

ಬೃಹತ್ ಆಂಜನೇಯ ಸಿಮೆಂಟ್ ಶಿಲ್ಪ, ಪುರಂದರ ದಾಸ, ಸಾಯಿಬಾಬಾ ಮಂದಿರ, ದೇವಸ್ಥಾನದ ಪಕ್ಕ ಅಯ್ಯಪ್ಪ ಸನ್ನಿಧಿ, ಒಳಗಡೆ ಪ್ರಧಾನ ಅನ್ನಪೂರ್ಣೇಶ್ವರಿ ದೇವೀ ಅಲ್ಲದೆ ಗಣಪತಿ, ಆಂಜನೇಯ, ಸೋಮನಾಥ, ನವಗ್ರಹ ಮಂಟಪ ಹಂತಹಂತವಾಗಿ ಸ್ಥಾಪನೆಗೊಂಡಿದ್ದವು. ಸುಸಜ್ಜಿತ ಅತಿಥಿ ಗೃಹ, ಎರಡು ಸಭಾಂಗಣಗಳು ನಿರ್ಮಾಣಗೊಂಡಿದ್ದವು.

ಕ್ಷೇತ್ರದಲ್ಲಿ ಹಲವಾರು ಬಾರಿ ನಾಗಮಂಡಲೋತ್ಸವಗಳು ನಡೆದಿವೆ. ವಿದೇಶಿ ವಿ.ವಿ.ಯೊಂದರ ಗೌರವ ಡಾಕ್ಟರೇಟ್ ಗೂ ಅವರು ಪಾತ್ರರಾಗಿದ್ದರು.

ನಿತ್ಯ ಅನ್ನದಾನ, ಪರಿಸರದಲ್ಲಿ ಹೂದೋಟ, ಆಕರ್ಷಕ ಶಿಲ್ಪಗಳು, ನೀರಿನೊತ್ತಡದಲ್ಲಿ ತಿರುಗುವ ಶಿಲಾಗೋಳ ಹೀಗೆ ಹಲವಾರು ಆಕರ್ಷಣೆಯ ಅಂಶಗಳನ್ನು ಹೊಂದಿರುವ ಕೊಡ್ಯಡ್ಕ ಕ್ಷೇತ್ರದಿಂದ ಕೆಜಿಎಫ್ ಗೆ ಸರಕಾರಿ ಬಸ್ಸಿನ ವ್ಯವಸ್ಥೆ ಇದೆ.

ಜಯರಾಮ ಹೆಗ್ಡೆ ಅವರು ಹೆಗ್ಗಡೆ ಸಮಾಜದ ಮುಂದಾಳು, ದಾನಿಯೂ ಆಗಿದ್ದು, ಇವರ ಮುಂದಾಳತ್ವದಲ್ಲಿ ಕೋಟೆಬಾಗಿಲು ವೀರಮಾರುತಿ ದೇವಸ್ಥಾನವನ್ನು ಜೀರ್ಣೋದ್ದಾರಗೊಳಿಸಿ ಮೂರು ಬಾರಿ ಬ್ರಹ್ಮಕಲಶೋತ್ದವ ನಡೆಸಲಾಗಿತ್ತು. ಇತರ ಪುರಾತನ ಕ್ಷೇತ್ರಗಳು, ಸಮುದಾಯಗಳಿಗೂ ಅವರು ಯಥಾಶಕ್ತಿ ಪ್ರೋತ್ಸಾಹಕರಾಗಿದ್ದರು.  ಬೆಂಗಳೂರಿನಲ್ಲೂ ಹೋಟೆಲ್ ಉದ್ಯಮಕ್ಕೆ ಕಾಲಿರಿಸಿದ ಇವರು ಪುತ್ರ ವೈಭವ್ ಹೆಗ್ಡೆಯೊಂದಿಗೆ ಕೆಲವು ವರ್ಷಗಳ ಹಿಂದೆ ಅಶ್ವತ್ಥಪುರದಲ್ಲಿ ದಿ ಎಸ್ಟೇಟ್ ರೆಸಾರ್ಟ್  ಉದ್ಯಮವನ್ನು ಆರಂಭಿಸಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.