ಕೆರೆಗೆ ಈಜಾಡಲು ತೆರಳಿದ ಕೃಷ್ಣಾಪುರದ ಯುವಕ ನೀರಲ್ಲಿ ಮುಳುಗಿ ಸಾವು
Team Udayavani, Jun 13, 2020, 5:27 PM IST
ಸುರತ್ಕಲ್: ಕೆರೆಯಲ್ಲಿ ಈಜಲು ತೆರಳಿದ್ದ ಸ್ಥಳೀಯ ಯುವಕನೋರ್ವ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೃಷ್ಣಾಪುರ ನೈತಂಗಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಮೃತ ಯುವಕನನ್ನು ಸ್ಥಳೀಯ ನಿವಾಸಿ ತಾರನಾಥ್ ಎಂಬವರ ಪುತ್ರ ಸಂತೋಷ್ ದೇವಾಡಿಗ (22) ಎಂದು ಗುರುತಿಸಲಾಗಿದೆ.
ಸಂತೋಷ್ ತನ್ನ ನಾಲ್ಕು ಗೆಳೆಯರ ಜೊತೆ ಶನಿವಾರ ಮಧ್ಯಾಹ್ನ ಕೃಷ್ಣಾಪುರ ಬಳಿಯ ಕೆರೆಯಲ್ಲಿ ಈಜಲು ತೆರಳಿದ್ದರು. ಕೆರೆಯ ಕಲ್ಲಿನ ಪಕ್ಕದಲ್ಲೇ ಈಜಾಡುತ್ತಿದ್ದ ವೇಳೆ ಕಾಲುಜಾರಿ ನೀರಿನಾಳಕ್ಕೆ ಬಿದ್ದು ಮೇಲೆಬರಲಾಗದೇ ಸ್ನೇಹಿತರ ಕಣ್ಣೆದುರೇ ಮುಳುಗಿದ್ದಾನೆ. ಸಂತೋಷ್ ಮುಳುಗುವುದನ್ನು ಕಂಡು ಸ್ನೇಹಿತರು ಬೊಬ್ಬೆ ಹೊಡೆದಿದ್ದು ಸ್ಥಳೀಯರು ಸ್ಥಳಕ್ಕಾಗಮಿಸಿ ರಕ್ಷಿಸಲು ಯತ್ನಿಸಿದರೂ ಬದುಕುಳಿಸಲಾಗಲಿಲ್ಲ.
ಈತ ಪ್ರಸ್ತುತ ಖಾಸಗಿ ಕಾಲೇಜಿನಲ್ಲಿ ತೃತೀಯ ವರ್ಷದ ಡಿಪ್ಲೋಮಾ ಪದವಿ ಓದುತ್ತಿದ್ದ. ಮೃತ ಯುವಕನಿಗೆ ತಾಯಿ ಹಾಗೂ ಓರ್ವ ತಮ್ಮನಿದ್ದಾನೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಮೃತ ಶವವನ್ನು ಮಹಜರು ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ