ಚುನಾವಣೆ ಕರ್ತವ್ಯ: ಸರಕಾರಿ ಬಸ್‌ ಸಂಚಾರ ಅಸ್ತವ್ಯಸ್ತ


Team Udayavani, Apr 19, 2019, 1:30 PM IST

kstrc

ಮಂಗಳೂರು: ಮತದಾನ ಹಿನ್ನೆಲೆಯಲ್ಲಿ ಗುರುವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಕೆಎಸ್ಸಾರ್ಟಿಸಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರಯಾಣಿಕರು ಸಕಾಲಕ್ಕೆ ಬಸ್‌ ಸೌಲಭ್ಯ ದೊರೆಯದೆ ಪರದಾಡಿದರು.

ಜಿಲ್ಲೆಯ ಸುಮಾರು 400ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಬಸ್‌ಗಳನ್ನು ಚುನಾವಣ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಮಂಗಳೂರು ವಿಭಾಗದಿಂದ ಪ್ರತೀ ದಿನ ಸುಮಾರು 389ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಬಸ್‌ಗಳು ವಿವಿಧ ಪ್ರದೇಶಗಳಿಗೆ ತೆರಳುತ್ತವೆ. ಈ ಬಾರಿ ಎ. 17, 18ರಂದು ಮಂಗಳೂರಿನ ಒಂದು ಮತ್ತು ಎರಡನೇ ಡಿಪೋದಿಂದ 138ಕ್ಕೂ ಹೆಚ್ಚಿನ ಬಸ್‌ಗಳನ್ನು ಚುನಾವಣೆಗಾಗಿ ಕಳುಹಿಸಲಾಗಿತ್ತು. ಪುತ್ತೂರು ವಿಭಾಗದಿಂದ ಸುಮಾರು 560 ಬಸ್‌ಗಳು ಸಂಚರಿಸುತ್ತಿದ್ದು, ಈ ಪೈಕಿ 263 ಬಸ್‌ ಸೇವೆಯಲ್ಲಿ ವ್ಯತ್ಯಯವಾಗಿತ್ತು.

ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಸಹಿತ ದೂರದ ಊರುಗಳಿಂದ ಆಗಮಿಸಿ ಸ್ವಂತ ಊರಿಗೆ ತೆರಳಲು ಬೆಳಗ್ಗೆ ನಗರದ ಬಿಜೈ ಕೆಎಸ್‌ಆರ್‌ ಟಿಸಿ ಮುಖ್ಯ ಬಸ್‌ ನಿಲ್ದಾಣಕ್ಕೆ ಧಾವಿಸುತ್ತಿದ್ದ ದೃಶ್ಯ ಕಾಣಿಸಿತು. ಬಿ.ಸಿ. ರೋಡ್‌, ಧರ್ಮಸ್ಥಳ, ಉಪ್ಪಿನಂಗಡಿ, ಚಿಕ್ಕಮಗಳೂರು, ಪುತ್ತೂರು ಸಹಿತ ವಿವಿಧ ಪ್ರದೇಶಗಳಿಗೆ ತೆರಳುವ ಬಸ್‌ ಸಂಖ್ಯೆ ವಿರಳವಿತ್ತು. ಮಂಗಳೂರಿನಿಂದ ಪುತ್ತೂರಿಗೆ ಕೂಡ ಕೆಲವೇ ಬಸ್‌ ಇದ್ದುದರಿಂದ ಹೆಚ್ಚಿನ ಮಂದಿ ಬೆಂಗಳೂರಿಗೆ ತೆರಳುವ ಐರಾವತ, ರಾಜಹಂಸ ಬಸ್‌ಗಳನ್ನೇರಿದ್ದು, ದುಪ್ಪಟ್ಟು ಹಣ ನೀಡಿ ಪ್ರಯಾಣಿಸಿದರು.

ಕಳೆದ ಬಾರಿ ಲೋಕಸಭಾ, ವಿಧಾನಸಭಾ ಚುನಾವಣೆಯ ಕಾರ್ಯದ ನಿಮಿತ್ತ ಜಿಲ್ಲೆಯ ಹೆಚ್ಚಿನ ಖಾಸಗಿ, ಸಿಟಿ ಬಸ್‌ಗಳು ತೆರಳಿದ್ದವು. ಆದರೆ ಈ ಬಾರಿ ಮಂಗಳೂರಿನ ಸಿಟಿ ಬಸ್‌ಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿರಲಿಲ್ಲ. ಹಾಗಾಗಿ ಎಲ್ಲ ಸಿಟಿ ಬಸ್‌ಗಳು ಎಂದಿನಂತೆ ಕಾರ್ಯಾಚರಿಸಿದವು.

ಮುಂಗಡ ಬುಕ್ಕಿಂಗ್‌ ಫುಲ್‌
ಮತದಾನಕ್ಕೆಂದು ಬಂದ ಮಂದಿಗೆ ಸಾಲು ರಜೆ ಇದೆ. ಎ. 17ರಂದು ಮಹಾವೀರ ಜಯಂತಿ, ಎ. 18 ಚುನಾವಣೆ, ಎ. 19 ಗುಡ್‌ಫ್ರೈಡೇ, ಎ. 21ರಂದು ರವಿವಾರ. ನಡುವಣ ಎ. 20ರ ಶನಿವಾರ ಮಾತ್ರ ಕೆಲಸದ ದಿನ. ಎ. 21ಕ್ಕೆ ಈಗಾಗಲೇ ಹೆಚ್ಚಿನ ಬಸ್‌ ಮುಂಗಡ ಬುಕ್ಕಿಂಗ್‌ ಆಗಿದೆ. ಇದೇ ಕಾರಣಕ್ಕೆ ಮಂಗಳೂರಿನಿಂದ ಮೈಸೂರು, ಬೆಂಗಳೂರು ಮತ್ತಿತರ ರೂಟ್‌ಗಳಿಗೆ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್‌ ನಿಯೋಜಿಸಲು ಕೆಎಸ್ಸಾರ್ಟಿಸಿ ತೀರ್ಮಾನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.