ಮೂಲಸೌಕರ್ಯ ಅಭಿವೃದ್ಧಿಗಾಗಿ ಕಾಯುತ್ತಿದೆ ಕುಪ್ಪೆಪದವು ರಿಕ್ಷಾ ಪಾರ್ಕ್‌


Team Udayavani, Jul 5, 2022, 10:53 AM IST

4

ಕೈಕಂಬ: ಕುಪ್ಪೆಪದವು ಪೇಟೆ ಬ್ಯಾಂಕ್‌, ಹಲವಾರು ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿ ಶೀಘ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವುದು ಪೇಟೆಯ ಚಿತ್ರ ಣವನ್ನು ಬದಲಾಯಿಸಿದೆ. ಆದರೆ ಅಲ್ಲಿನ ರಿಕ್ಷಾ ಪಾರ್ಕ್‌ ಇದ್ದರೂ ಅದಕ್ಕೆ ಮೂಲ ಸೌಕರ್ಯವಿಲ್ಲದೇ ರಿಕ್ಷಾಚಾಲಕರು ಸಂಕಷ್ಟ ಪಡುತ್ತಿದ್ದಾರೆ. ಜನ ಸಂಕಷ್ಟಗಳಿಗೆ ಸ್ಪಂದಿಸಿ, ಸದಾ ಸಿದ್ಧರಾಗಿರುವ ಸೇವಕರಲ್ಲಿ ರಿಕ್ಷಾ ಚಾಲಕರ ಪಾತ್ರ ಹಿರಿದು.

ಕೆಲವೇ ಬಸ್‌ಗಳ ಓಡಾಟ

ಕುಪ್ಪೆಪದವಿನಲ್ಲಿ ದಿನನಿತ್ಯ ಓಡಾಟ ನಡೆಸುವ ಬಸ್‌ಗಳು ಕಡಿಮೆ. ಎರಡು ಗಂಟೆಗಳಿಗೆ ಒಂದು ಬಸ್‌ಗಳು ಓಡಾಟ ನಡೆಸುತ್ತಿವೆ. ಇದರಿಂದ ಇಲ್ಲಿ ಜನರು ರಿಕ್ಷಾಗಳನ್ನೇ ಹೆಚ್ಚು ಅವಲಂಬಿಸಿದ್ದಾರೆ. ಕೆಲವು ಪ್ರದೇಶಗಳಿಗೆ ಬಸ್‌ಗಳೇ ಇಲ್ಲ. ಗ್ರಾಮೀಣ ಪ್ರದೇಶವಾದ ಕಾರಣ ಕೃಷಿ ಆಧಾರಿತವಾಗಿರುವ ಪ್ರದೇಶಗಳಿಗೆ ಸಂಪರ್ಕವಾಗಿ ರಿಕ್ಷಾಗಳೇ ಓಡಾಟ ನಡೆ ಸುತ್ತದೆ. ಸುಮಾರು 50ರಿಂದ 60ರಿಕ್ಷಾ ಗಳು ದಿನನಿತ್ಯ ಓಡಾಟ ನಡೆಸುತ್ತಿದೆ. ರಿಕ್ಷಾ ಪಾರ್ಕ್‌ ಇದ್ದರೂ ಅದಕ್ಕೆ ಮೂಲಸೌಕರ್ಯ ಇಲ್ಲದೇ ಇರುವುದು ರಿಕ್ಷಾಚಾಲಕರಿಗೆ ಸಮಸ್ಯೆಯಾಗಿದೆ. ಮಳೆಗಾಲದಲ್ಲಿ ರಿಕ್ಷಾ ಚಾಲಕರು ಮಳೆಯಲ್ಲಿಯೇ ನಿಲ್ಲ ಬೇಕಾಗಿದೆ, ಬೇಸಿಗೆಯಲ್ಲಿ ಬಿಸಿಲಿಗೆ ನಿಲ್ಲಬೇಕಾಗಿದೆ.

ರಿಕ್ಷಾ ಪಾರ್ಕ್‌ಗೆ ಜಾಗವಿದೆ

ರಿಕ್ಷಾ ಪಾರ್ಕ್‌ಗೆ ಜಾಗವಿದ್ದರೂ ಇಲ್ಲಿಯವರೆಗೆ ಯಾವುದೇ ಮೂಲ ಸೌಕರ್ಯವನ್ನು ಹೊಂದಿಲ್ಲ. ಜನರ ಸಂಕ ಷ್ಟಕ್ಕೆ ಸ್ಪಂದಿಸುವ ರಿಕ್ಷಾಚಾಲಕರ ಸಂಕಷ್ಟಕ್ಕೆ ಸ್ಪಂದಿಸುವರಿಲ್ಲ.

ಪಂಚಾಯತ್‌ ನಿಂದ ಎನ್‌ಒಸಿ

ಈಗಾಗಲೇ ಕುಪ್ಪೆಪದವು ಗ್ರಾಮ ಪಂಚಾ ಯತ್‌ ರಿಕ್ಷಾ ಪಾರ್ಕ್‌ ಅಭಿವೃದ್ಧಿಗೆ ತನ್ನ ಯಾವುದೇ ಅಡ್ಡಿ ಇಲ್ಲಯೆಂದು ಎನ್‌ಒಸಿ ನೀಡಿದೆ. ಅದರೆ ಯಾವುದೇ ಅನುದಾನ ನೀಡಲು ಸಾಧ್ಯವಿಲ್ಲವೆಂದು ಅವರು ತಿಳಿಸಿದ್ದಾರೆ ಎಂದು ರಿಕ್ಷಾ ಚಾಲಕರು ತಿಳಿಸಿದ್ದಾರೆ. ರಿಕ್ಷಾ ಪಾರ್ಕ್‌ನಲ್ಲಿ ಕೇವಲ ನಾಲ್ಕು ಕಂಬಗಳು ಮಾತ್ರ ಕಾಣಿಸುತ್ತಿದೆ. ರಿಕ್ಷಾ ಚಾಲಕರು ಕುಳಿತು ಕೊಳ್ಳಲು ಕಂಬಗಳನ್ನು ಅಡ್ಡಕ್ಕೆ ಇಟ್ಟು ಅಸನ, ಮಳೆಗೆ ನೆನೆದೇ ನಿಲ್ಲಬೇಕಾದ ಪರಿಸ್ಥಿತಿಯಿದೆ.

ಶಾಸಕರಿಗೆ ಮನವಿ

ರಿಕ್ಷಾ ಚಾಲಕ, ಮಾಲಕ ಸಂಘ ಈಗಾಗಲೇ ಶಾಸಕರಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮಳೆಗಾಲದಲ್ಲಿ ರಿಕ್ಷಾ ಪಾರ್ಕ್‌ಗೆ ಛಾವಣಿ ಇಲ್ಲದೇ ಚಾಲಕರಿಗೆ ತೊಂದರೆ ಹಾಗೂ ರಿಕ್ಷಾ ದಲ್ಲಿ ಹೋಗುವ ಜನರಿಗೂ ತೊಂದರೆಯನ್ನು ಗಮನಿಸಿ, ಶಾಸಕರು ಸ್ಪಂದಿಸಬೇಕು. ಕುಪ್ಪೆಪದವು ಪೇಟೆ ಅಭಿವೃದ್ಧಿಗೆ ಸಹಕರಿಸಬೇಕು.ಇದರಿಂದ ಸುಂದರ ಕುಪ್ಪೆಪದವು ಪೇಟೆಯೂ ಸಾಧ್ಯವಾಗಲಿದೆ ಎಂಬುದು ರಿಕ್ಷಾಚಾಲಕರ ಅಭಿಪ್ರಾಯ.

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.