ಕದ್ರಿ ಬಳಿಯ ಶೌಚಾಲಯದಲ್ಲಿ ಸ್ವಚ್ಛತೆಗಿಲ್ಲ ಆದ್ಯತೆ

ಸಮರ್ಪಕ ನಿರ್ವಹಣೆ ಕೊರತೆ; ಅವ್ಯವಸ್ಥೆಯ ಆಗರ

Team Udayavani, May 24, 2022, 11:08 AM IST

toilet

ಕದ್ರಿ: ಬೇಸಿನ್‌ ಇದೆ ಟ್ಯಾಪ್‌ ಇಲ್ಲ, ಸುತ್ತಲೂ ಹರಡಿದ ಪ್ಲಾಸ್ಟಿಕ್‌, ಗಾಜಿನ ಚೂರು, ನೆಲದಲ್ಲಿ ಮಣ್ಣು, ಕೊಳಚೆ ನೀರು, ಗಬ್ಬು ವಾಸನೆ… ಇದು ನಗರದ ಕದ್ರಿ ದಕ್ಷಿಣ ವಾರ್ಡ್‌ನ ಬಯಲು ರಂಗಮಂದಿರ ಬಳಿ ಇರುವ ಮಹಾನಗರ ಪಾಲಿಕೆ ಅಧೀನದ ಸಾರ್ವಜನಿಕ ಶೌಚಾಲಯದ ಅವ್ಯವಸ್ಥೆ.

ಕಳೆದ ವರ್ಷ ಉದ್ಘಾಟನೆಗೊಂಡ ಈ ಶೌಚಾಲಯದಲ್ಲಿ ನಿಗದಿತ ಶುಲ್ಕ ಪಾವತಿಸಿ ಶೌಚಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಶುಲ್ಕ ಸಂಗ್ರಹ ಕಡಿಮೆ ಆದ ಕಾರಣ ಸಮರ್ಪಕ ನಿರ್ವಹಣೆ ಆಗುತ್ತಿರಲಿಲ್ಲ. ಇದೇ ಕಾರಣಕ್ಕೆ ಟೆಂಡರ್‌ ವಹಿಸಿದವರೂ ಆಸಕ್ತಿ ತೋರುತ್ತಿರಲಿಲ್ಲ. ಇದರಿಂದಾಗಿ ಕೆಲವು ದಿನಗಳಿಂದ ಶೌಚಾಲಯಕ್ಕೆ ಬೀಗ ಜಡಿಯಲಾಗಿತ್ತು. ಆದರೆ ಕೆಲವು ಮಂದಿ ಈ ಬೀಗ ಒಡೆದು ಶೌಚಾಲಯ ಪ್ರವೇಶಿಸುತ್ತಿದ್ದಾರೆ. ಸದ್ಯ ಶೌಚಾಲಯ ಗಬ್ಬು ನಾರುತ್ತಿದೆ.

ನಗರ, ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಡಬೇಕು ಎಂಬ ಸೂಚನೆ ನೀಡುತ್ತಿ ರುವ ಪಾಲಿಕೆಯು ತನ್ನ ಅಧೀನದ ಶೌಚಾಲಯವನ್ನು ನಿರ್ವಹಣೆ ಮಾಡದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ವರ್ಷ ನವೆಂಬರ್‌ ತಿಂಗಳಿನಲ್ಲಿ ಈ ನೂತನ ಶೌಚಾಲಯವನ್ನು ಉದ್ಘಾಟಿಸಲಾಗಿತ್ತು. ಕೆಲವು ತಿಂಗಳ ಕಾಲ ಶೌಚಾಲಯ ಸ್ವಚ್ಛತೆಗೆ ಆದ್ಯತೆ ನೀಡಲಾಗಿತ್ತೇ ವಿನಾ ಬಳಿಕ ಸುತ್ತಲೂ ಗಲೀಜಿನಿಂದ ಕೂಡಿದೆ. ಪಕ್ಕದಲ್ಲಿಯೇ ಬಯಲು ರಂಗ ಮಂದಿರ ಇರುವ ಕಾರಣ ಮತ್ತು ಸುತ್ತಲಿನ ಮಂದಿಗೆ ಈ ಶೌಚಾಲಯ ಉಪಯೋಗ ವಾಗುತ್ತಿದೆ. ಆದರೆ ಉದ್ಘಾಟನೆಗೊಂಡ ಕೆಲವೇ ತಿಂಗಳಿನಲ್ಲಿ ಈ ಶೌಚಾಲಯ ಅವ್ಯವಸ್ಥೆಗೆ ಕಾರಣವಾಗಿದೆ. ಈ ಭಾಗದಲ್ಲಿ ಹಲವು ತಿಂಗಳುಗಳಿಂದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ನೌಕರರು, ರಿಕ್ಷಾ ಚಾಲಕರು ಸಹಿತ ಹಲವು ಮಂದಿ ಈ ಶೌಚಾಲಯವನ್ನು ಬಳಕೆ ಮಾಡುತ್ತಿದ್ದರು.

ಕದ್ರಿ, ಮಲ್ಲಿಕಟ್ಟೆ, ಕದ್ರಿ ಕಂಬಳ ಸಹಿತ ಸುತ್ತಮುತ್ತಲು ಯಾವುದೇ ಶೌಚಾಲಯ ಇಲ್ಲದ ಕಾರಣ ಇದು ಉಪಯೋಗಿ ಆಗಿತ್ತು. ಸ್ಥಳೀಯರಾದ ರಮೇಶ್‌ ಅವರು ‘ಸುದಿನ’ಕ್ಕೆ ಪ್ರತಿಕ್ರಿಯಿಸಿ, ಕೆಲವು ತಿಂಗಳುಗಳಿಂದ ಈ ಶೌಚಾಲಯ ನಿರ್ವಹಣೆಯಿಲ್ಲದೆ ಗಲೀಜಾಗಿದೆ. ಶೌಚಾಲಯದಿಂದ ಬರುವ ವಾಸನೆಗೆ ಪಕ್ಕದ ರಸ್ತೆಯಲ್ಲಿಯೂ ನಡೆಯಲು ಸಾಧ್ಯವಾಗುತ್ತಿಲ್ಲ. ಸ್ಥಳೀಯಾಡಳಿಯ ಕೂಡಲೇ ಇತ್ತ ಗಮನಹರಿಸಿ ಶೌಚಾಲಯದ ನಿರ್ವಹಣೆಗೆ ಸೂಚನೆ ನೀಡಬೇಕು ಎನ್ನುತ್ತಾರೆ.

ನಿರ್ವಹಣೆಗೆ ಆದ್ಯತೆ ಸ್ಥಳೀಯ ಮನಪಾ ಸದಸ್ಯ ಕದ್ರಿ ಮನೋಹರ ಶೆಟ್ಟಿ ‘ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, ಕದ್ರಿ ಬಳಿಯ ಶೌಚಾಲಯ ಪ್ರವೇಶಕ್ಕೆ ಶುಲ್ಕ ನಿಗದಿ ಪಡಿಸಲಾಗಿದ್ದು, ಹೆಚ್ಚಿನ ಶುಲ್ಕ ಸಂಗ್ರಹವಾಗುತ್ತಿರಲಿಲ್ಲ. ಇದರಿಂದ ನಿರ್ವಹಣೆಯೂ ಸಮರ್ಪಕವಾಗಿ ಆಗುತ್ತಿರಲಿಲ್ಲ. ಅದೇ ಕಾರಣಕ್ಕೆ ಕೆಲವು ದಿನಗಳ ಹಿಂದೆ ಶೌಚಾಲಯಕ್ಕೆ ಬೀಗ ಹಾಕಿದ್ದೆವು. ಕೆಲವರು ಬೀಗ ಒಡೆದು ಶೌಚಾಲಯ ಪ್ರವೇಶಿಸುತ್ತಿದ್ದಾರೆ. ಸದ್ಯದಲ್ಲೇ ಓರ್ವ ಸಿಬಂದಿ ನೇಮಿಸಿ, ಶೌಚಾಲಯ ನಿರ್ವಹಣೆಗೆ ಆದ್ಯತೆ ನೀಡಲಾಗುವುದು ಎನ್ನುತ್ತಾರೆ.

ನಿರ್ವಹಣೆಗೆ ಸೂಚನೆ

ಕದ್ರಿ ಬಯಲು ರಂಗಮಂದಿರ ಬಳಿ ಕಳೆದ ವರ್ಷ ನೂತನ ಶೌಚಾಲಯ ಉದ್ಘಾಟಿಸಲಾಗಿತ್ತು. ಸದ್ಯ ಈ ಶೌಚಾಲಯ ಯಾವ ಸ್ಥಿತಿಯಲ್ಲಿದೆ, ಅವ್ಯವಸ್ಥೆಗೆ ಕಾರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಬಳಿ ಮಾಹಿತಿ ಪಡೆದು, ಶೌಚಾಲಯದ ಸೂಕ್ತ ನಿರ್ವಹಣೆಗೆ ಸೂಚಿಸಲಾಗುವುದು. -ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.