“ಗ್ರಾಮದ ಪ್ರಗತಿಗೆ ಮಕ್ಕಳೇ ಆಧಾರವಾಗಲಿ’
Team Udayavani, Feb 10, 2021, 3:26 PM IST
ಪಡುಪಣಂಬೂರು: ಗ್ರಾಮದ ಪ್ರಗತಿಗೆ ಹಾಗೂ ಮೂಲಸೌಕರ್ಯಕ್ಕೆ ಆದ್ಯತೆ ನೀಡುವ ಕೆಲಸಕ್ಕೆ ಮಕ್ಕಳೇ ಆಧಾರವಾಗಿ ಅವರ ಧ್ವನಿಯು ಮಕ್ಕಳ ಗ್ರಾಮಸಭೆಯಲ್ಲಿ ಮೊಳಗಬೇಕು. ಇದಕ್ಕೆ ಪೂರಕವಾಗಿ ಅವರನ್ನು ಜಾಗೃತಿಗೊಳಿಸುವ ಪ್ರಯತ್ನವನ್ನು ಒಟ್ಟಾಗಿ ಸೇರಿ ಮಾಡೋಣ ಎಂದು ಪಡುಪಣಂಬೂರು ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ಅನಿತಾ ಕ್ಯಾಥರಿನ್ ಹೇಳಿದರು.
ಪಡುಪಣಂಬೂರು ಗ್ರಾ.ಪಂ.ನ ಸಂಜೀವಿನಿ ಕಟ್ಟಡದಲ್ಲಿ ನಡೆದ ಮಕ್ಕಳ ಗ್ರಾಮಸಭೆಯ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಅವ ರು ಮಾತನಾಡಿದರು.
ಕೋವಿಡ್-19 ನಿಯಮಗಳನ್ನು ಪಾಲಿಸಿ ಕೊಂಡು ಫೆ. 20ರಂದು ನಡೆಯಲಿರುವ ಸೀಮಿತ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳ ಪ್ರತಿಭೆ ಅನಾವರಣಗೊಳಿಸುವುದು, ಗ್ರಾಮದ ಪ್ರತೀ ಶಾಲೆಯಲ್ಲಿ ಚಿತ್ರಕಲೆ, ಭಾಷಣ, ಪ್ರಬಂಧ ಸ್ಪರ್ಧೆಯನ್ನು ನಡೆಸಿಕೊಂಡು ಬಹುಮಾನ ನೀಡಲಾಗುವುದು, ವಿಶೇಷ ಸಂಪನ್ಮೂಲ ವ್ಯಕ್ತಿಯಿಂದ ಮಾಹಿತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಭಾಗವಹಿಸುವಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯಿಂದ ಹಿಡಿದು ಎಲ್ಲ ಸಭಾ ನಿರ್ವಹಣೆಯ ವ್ಯವಸ್ಥೆಯನ್ನು ಮಕ್ಕಳೇ ನಡೆಸುವ ಉದ್ದೇಶದಿಂದ ಸಮಾನವಾಗಿ ಎಲ್ಲ ಶಾಲೆಯ ಮಕ್ಕಳಿಗೆ ಒಂದೊಂದು ಜವಾಬ್ದಾರಿ ಹಂಚಲಾಯಿತು. ಗ್ರಾಮದ ಸಮಸ್ಯೆಗಳ ಬಗ್ಗೆ ಉಲ್ಲೇಖೀಸಿ ಅದರ ಬಗ್ಗೆ ಆಡಳಿತ ವ್ಯವಸ್ಥೆಯೊಂದಿಗೆ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಯಿತು. ಈ ಬಾರಿ ವಿಶಿಷ್ಟ ರೀತಿಯಲ್ಲಿ ಮಕ್ಕಳ ಗ್ರಾಮಸಭೆಯನ್ನು ನಡೆಸುವ ಬಗ್ಗೆ ಸಲಹೆ ಕೇಳಿ ಬಂದಿತು.
ಪಡುಪಣಂಬೂರು ಕ್ಲಸ್ಟರ್ನ ಸಿಆರ್ಪಿ ಕುಸುಮಾ ಕೆ.ಆರ್. ಅವರು ಸಲಹೆ ನೀಡಿ, ಮಕ್ಕಳ ಬಗ್ಗೆ ಶಿಕ್ಷಕರು ಮುತುವರ್ಜಿ ವಹಿಸಿಕೊಂಡು ಸೀಮಿತ ಮಕ್ಕಳು ಭಾಗವಹಿಸಿದ್ದರು. ಪರಿಣಾಮಕಾರಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ, ಉಳಿದ ಮಕ್ಕಳಿಗೂ ಪ್ರೇರಣೆಯಾಗುವಂತಹ ಸಭೆ ನಡೆಯಬೇಕು ಎಂದರು.
ಸಭೆಯಲ್ಲಿ ಕೆರೆಕಾಡು ಹಿರಿಯ ಪ್ರಾಥಮಿಕ ಶಾಲೆಯ ನವೀನ್ ವೀರಸ್ ಡಿ’ಕೋಸ್ತ, ಪಡುಪಣಂಬೂರು ಹಿರಿಯ ಪ್ರಾಥಮಿಕ ಶಾಲೆಯ ಸುಮತಾ, ತೋಕೂರು ಹಿಂದೂಸ್ಥಾನಿ ಶಾಲೆಯ ಗುಲ್ಶನ್ ಎಸ್., 10ನೇ ತೋಕೂರಿನ ಶ್ರೀ ಸುಬ್ರಹ್ಮಣ್ಯ ಶಾಲೆಯ ಗೌರಿ, ತೋಕೂರು ತಪೋವನದ ಡಾ| ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಉಷಾ ಕೆರೆಕಾಡು ಉಪಸ್ಥಿತರಿದ್ದರು. ಪಂಚಾಯತ್ ಸಿಬಂದಿ ದಿನಕರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು